ದಾವಣಗೆರೆ: ಹೆತ್ತ ತಾಯಿಯೇ ತನ್ನ ಮಗನನ್ನು ಕೂಡಿ ಹಾಕಿ, ಗೃಹ ಬಂಧನದಲ್ಲಿಟ್ಟು ಅಮಾನವೀಯವಾಗಿ ನಡೆದುಕೊಂಡ ಘಟನೆ ದಾವಣಗೆರೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ವಿನಯ್ ಎಂಬಾತನೇ ಗೃಹಬಂಧನದಲ್ಲಿದ್ದ ಮಗ. ಈತ ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ತಾಯಿ ವಿನಯ್ನನ್ನು ಮನೆಯಲ್ಲಿಯೇ ಕೂಡಿ ಹಾಕಿದ್ದರು. ನಗರದ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಮನೆಯಲ್ಲಿ ತಾಯಿ ವಿನಯ್ನನ್ನು ಕೂಡಿ ಹಾಕಿದ್ದರು. ಕಳೆದ ಹಲವು ತಿಂಗಳಿಂದ ಮಗನನ್ನ ಅಮಾನವೀಯವಾಗಿ ತಾಯಿ ನಡೆಸಿಕೊಂಡಿದ್ದಾರೆ. ಇದೀಗ ಸ್ಥಳೀಯರು ಯುವಕನನ್ನು ಬಂಧನದಿಂದ ಮುಕ್ತಿಗೊಳಿಸಿದ್ದಾರೆ.
- Advertisement 2
- Advertisement 3
ಸದ್ಯ ವಿನಯ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಳೀಯರು ಅಂಬ್ಯುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಲು ಸಹಾಯ ಮಾಡಿದ್ದಾರೆ. ಅಲ್ಲದೆ ವಿನಯ್ ತಾಯಿ ಕೂಡ ಅರೆ ಹುಚ್ಚಿಯಾಗಿದ್ದು, ಸಾರ್ವಜನಿಕರು ಏನಾದರು ಪ್ರಶ್ನಿಸಿದರೆ ಅವರ ಮೇಲೆ ಹಲ್ಲೆ ಮಾಡುತ್ತಿದ್ದರು. ಹಾಗೆಯೇ ಅವಾಚ್ಯ ಶಬ್ಧಗಳಿಂದ ಬೈಯ್ಯುತ್ತಿದ್ದರು. ಆದರಿಂದ ಸಾರ್ವಜನಿಕರು ಆ ತಾಯಿಯಿಂದ ಮಗನನ್ನು ಬಿಡಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
- Advertisement 4
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv