ಕಲಬುರಗಿ: ನಿವೃತ್ತ ನರ್ಸ್ ಯಡವಟ್ಟಿನಿಂದ ತಾಯಿ ಮಗು ಬಲಿಯಾದ್ದಾರೆ ಎಂಬ ಆರೋಪ ಕಲಬುರಗಿ (Kalaburagi) ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಕೇಳಿಬಂದಿದೆ.
ಇಂಗಳಗಿ ಗ್ರಾಮದ ನಿವಾಸಿ ಶ್ರೀದೇವಿ ಪ್ರಭಾನೂರ್ (28) ಹಾಗೂ ನವಜಾತ ಶಿಶು ಮೃತಪಟ್ಟಿದೆ. ಮಹಿಳೆ ನಿವೃತ ಆರೋಗ್ಯ ಸಹಾಯಕಿ ಗಂಗುಬಾಯಿ ಬಳಿ ಹೆರಿಗೆಗೆ ದಾಖಲಾಗಿದ್ದಳು. ಈ ವೇಳೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ. ನಿವೃತ್ತ ನರ್ಸ್ ಯಡವಟ್ಟಿನಿಂದಲೇ ತಾಯಿ ಹಾಗೂ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಧಾರವಾಡ | ಹಿಟ್ & ರನ್ಗೆ ಎಎಸ್ಐ ಬಲಿ
ಮೃತ ಶ್ರೀದೇವಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಈ ಬಾರಿ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಳು.
ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಸ್9 ವಿರುದ್ಧ ಕ್ರಮಜರುಗಿಸುವಂತೆ ವಾಡಿ ಪೊಲೀಸರಿಗೆ ಮಹಿಳೆಯ ಪತಿ ದೂರು ನೀಡಿದ್ದಾರೆ. ಇದನ್ನೂ ಓದಿ: ಹೊಳೆ ದಡದಲ್ಲಿ ಮಹಿಳೆ ಶವ ಹೂತಿಟ್ಟಿದ್ದ ಕೇಸ್ಗೆ ಟ್ವಿಸ್ಟ್; ಲವ್ವಿಡವ್ವಿ ಅಂತಾ ಹೋಗಿದ್ದವನಿಂದಲೇ ಹತ್ಯೆ