ಮಗುವನ್ನು ಬೇಲಿಗೆ ಎಸೆದು ಪಾರು ಮಾಡಿಯೂ ಕಾಡಾನೆಗೆ ತಾಯಿ ಬಲಿ

Public TV
1 Min Read
ELEPHANT

ಚಾಮರಾಜನಗರ: ಕಾಡಾನೆ ದಾಳಿ ವೇಳೆ ತನ್ನ ಮಗುವನ್ನು ಪಾರು ಮಾಡಿ ತಾಯಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ದೊಡ್ಡಾಣೆ ಬಳಿ ನಡೆದಿದೆ.

ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದ ಬಳಿಯ ಹಳೆಯೂರು ಗ್ರಾಮದ ಗೌರಮ್ಮ(45) ಕಾಡಾನೆ ದಾಳಿಗೆ ಬಲಿಯಾದ ಮಹಿಳೆ. ದೊಡ್ಡಾಣೆ ಗ್ರಾಮದಲ್ಲಿ ಹಬ್ಬ ಮುಗಿಸಿ 4 ವರ್ಷದ ಹೆಣ್ಣು ಮಗುವಿನೊಂದಿಗೆ ಗೌರಮ್ಮ ಊರಿಗೆ ಬರುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ANE Elephant

ದಾರಿ ಮಧ್ಯೆ ಕಾಡಾನೆ ಎದುರಾಗಿದೆ. ಕಾಡಾನೆ ಕಂಡ ತಕ್ಷಣ ಕಂಕುಳಲ್ಲಿದ್ದ ಮಗುವನ್ನು ಗೌರಮ್ಮ ಬೇಲಿಗೆ ಎಸೆದಿದ್ದಾರೆ. ಗೌರಮ್ಮನವರ ಮೇಲೆ ದಾಳಿ ನಡೆಸಿದ ಕಾಡಾನೆ ತುಳಿದು ಸಾಯಿಸಿದೆ. ಮಗುವನ್ನು ಬೇಲಿಗೆ ಎಸೆದಿದ್ದರಿಂದ ಹೆಣ್ಣು ಮಗು ಅಪಾಯದಿಂದ ಪಾರಾಗಿದೆ.

klr elephant stunt

ಹೆಣ್ಣುಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮಹದೇಶ್ವರ ಬೆಟ್ಟ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *