ಚಿಕ್ಕಬಳ್ಳಾಪುರ: ಮೂರು ವರ್ಷದ ಮಗಳನ್ನು (Daughter) ಕತ್ತು ಹಿಸುಕಿ ಕೊಂದು ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಾಸ್ಪದ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹದ (Family Feud) ಹಿನ್ನೆಲೆಯಲ್ಲಿ ಸುಧಾರಾಣಿ (32) ತನ್ನ ಮಗಳು ಸಾನ್ವಿಯ (3) ಕತ್ತು ಹಿಸುಕಿ ಕೊಲೆ ಮಾಡಿ ತಾನೂ ಬಾವಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಸುಧಾರಾಣಿ ಹಾಗೂ ರವಿ ದಂಪತಿ ಆಗಾಗ ಕೌಟುಂಬಿಕ ವಿಚಾರವಾಗಿ ಜಗಳ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಗಂಡನ (Husband) ಮೇಲಿನ ಕೋಪಕ್ಕೆ ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ತಗೋ ನಿನ್ನ ಲವ್ವರ್ ತಲೆ ತಂದಿದ್ದೇನೆ- ಪತ್ನಿ ಮನೆ ಮುಂದೆ ರುಂಡ ಎಸೆದ ಪತಿ!
ಗುರುವಾರದಂದು ಮನೆಯಿಂದ ಹೋಗಿರುವ ಗಂಡ ರವಿ ಮತ್ತೆ ಮನೆಗೆ ಬಂದಿಲ್ಲ ಎಂದು ತಿಳಿದುಬಂದಿದೆ. ರವಿ ನಾಪತ್ತೆ ಹಿಂದೆ ಸಣ್ಣ ಅನುಮಾನ ಇದ್ದು, ಹೆಂಡತಿ (Wife) ಮಗಳನ್ನು ಕೊಂದು ಪರಾರಿಯಾದನಾ ಎಂಬ ಸಣ್ಣ ಅನುಮಾನವೂ ಮೂಡಿದೆ. ಈ ನಡುವೆ ವರದಕ್ಷಿಣೆ ಕಿರುಕುಳದ ಪ್ರಕರಣವೂ ರವಿ ವಿರುದ್ಧ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: 2 ವರ್ಷದ ಹೆಣ್ಣು ಮಗು ಅನುಮಾನಾಸ್ಪದ ಸಾವು – ತಾತನ ವಿರುದ್ಧವೇ ಕೊಲೆಯ ಶಂಕೆ
Web Stories