Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸಂಸತ್ತು ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಿದ್ರೆ ಭಾರತ ಇಸ್ರೇಲ್ ಆಗುತ್ತೆ: ಓವೈಸಿ

Public TV
Last updated: December 5, 2019 3:08 pm
Public TV
Share
3 Min Read
Owaisi
SHARE

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಗೆ ಎಐಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತು ಅಂಗೀಕರಿಸಿದರೆ ಭಾರತವು ಇಸ್ರೇಲ್ ಆಗಲಿದೆ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಈ ಮಸೂದೆಯ ಮೂಲಕ ಭಾರತವನ್ನು ಧಾರ್ಮಿಕ ದೇಶವನ್ನಾಗಿ ಮಾಡಲು ಸರ್ಕಾರ ಬಯಸಿದೆ. ಈ ಮೂಲಕ ಭಾರತವು ತಾರತಮ್ಯಕ್ಕೆ ಹೆಸರುವಾಸಿಯಾದ ಇಸ್ರೇಲ್‍ನಂತಹ ದೇಶಗಳ ಸಾಲಿಗೆ ಸೇರಲಿದೆ. ಈಶಾನ್ಯ ರಾಜ್ಯಗಳಿಗೆ ವಿನಾಯಿತಿ ನೀಡುವ ವರದಿಗಳು ನಿಜವಾಗಿದ್ದರೆ, ಅದು ಸಂವಿಧಾನದಲ್ಲಿನ ಮೂಲಭೂತ ಹಕ್ಕುಗಳ 14ನೇ ಪರಿಚ್ಛೇದದ ಉಲ್ಲಂಘನೆಯಾಗಿದೆ. ಏಕೆಂದರೆ ಒಂದು ದೇಶದಲ್ಲಿ ಪೌರತ್ವಕ್ಕೆ ಸಂಬಂಧಿಸಿದ ಎರಡು ಕಾನೂನುಗಳು ಇರಲಾರವು ಎಂದು ಓವೈಸಿ ತಿಳಿಸಿದ್ದಾರೆ.

Session Amit Shah

ಮತ್ತೊಂದೆಡೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಪುತ್ರಿ ಸನಾ ಇಲ್ತಿಜಾ ಜಾವೇದ್ ಕೂಡ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಮುಸ್ಲಿಮರಿಗೆ ಸ್ಥಾನವಿಲ್ಲ. ಮುಸ್ಲಿಂ ಸಮುದಾಯವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರ ಬಯಸಿದೆ ಎಂದು ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. ಜೊತೆಗೆ ಸರ್ಕಾರವು ಮಸೂದೆಯನ್ನು ಗುರುವಾರ ಅಥವಾ ಶುಕ್ರವಾರ ಮಾತ್ರ ಸಂಸತ್ತಿನಲ್ಲಿ ಮಂಡಿಸಲು ಯೋಚನೆ ನಡೆಸಿದೆ. ಈ ಮಸೂದೆಯು ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಮುಸ್ಲಿಮೇತರರಿಗೆ (ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ) ಭಾರತೀಯ ಪೌರತ್ವ ನೀಡಲು ಅನುಕೂಲವಾಗಲಿದೆ.

MUFTI DAUGHTER 1

ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಟ್ವೀಟ್ ಮಾಡಿರುವ ಸನಾ ಇಲ್ತಿಜಾ ಜಾವೇದ್, ಸರ್ಕಾರದ ಉದ್ದೇಶ ಸ್ಪಷ್ಟವಾಗಿದೆ. ಭಾರತದಲ್ಲಿ ಹರಡಿರುವ ಮುಸ್ಲಿಂ ಜನಸಂಖ್ಯೆಯ ಸ್ಥಿತಿಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಬಯಸುತ್ತಿದೆ. ಮುಸ್ಲಿಮರು ಸಮುದಾಯವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ. ಇದರಿಂದ ಮುಸ್ಲಿಮರು ದೇಶದಲ್ಲಿ ಕೆಳವರ್ಗದ ನಾಗರಿಕರಾಗಿ ಉಳಿಯುತ್ತಾರೆ ಎಂದು ದೂರಿದ್ದಾರೆ.

ಕಾಂಗ್ರೆಸ್, ಶಿವಸೇನೆ, ತೃಣಮೂಲ ಕಾಂಗ್ರೆಸ್, ಡಿಎಂಕೆ, ಎಸ್‍ಪಿ, ಬಿಎಸ್‍ಪಿ, ಆರ್‌ಜೆಡಿ, ಸಿಪಿಐ (ಎಂ), ಎಐಎಂಐಎಂ, ಬಿಜೆಡಿ ಮತ್ತು ಅಸ್ಸಾಂನ ಬಿಜೆಪಿಯ ಮಿತ್ರ ರಾಷ್ಟ್ರಗಳು ಎಜಿಪಿ ಮಸೂದೆಯನ್ನು ವಿರೋಧಿಸುತ್ತಿವೆ. ಆದರೆ, ಅಕಾಲಿ ದಳ, ಜೆಡಿಯು ಎಐಎಡಿಎಂಕೆ ಸರ್ಕಾರದೊಂದಿಗೆ ಇವೆ. ಅಸ್ಸಾಂ ಹಾಗೂ ಇತರ ಈಶಾನ್ಯ ರಾಜ್ಯಗಳಲ್ಲಿಯೂ ಈ ಮಸೂದೆಯನ್ನು ವಿರೋಧಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

Union Cabinet 1 1

ಪೌರತ್ವ ಕಾನೂನು 1955ರಲ್ಲಿ ಬಂದಿದೆ. ಇದರ ಅಡಿ ಭಾರತ ಸರ್ಕಾರವು 11 ವರ್ಷಗಳ ಕಾಲ ದೇಶದಲ್ಲಿ ಉಳಿದುಕೊಂಡ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಮುಸ್ಲಿಮೇತರರಿಗೆ (ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು) ಪೌರತ್ವವನ್ನು ನೀಡುತ್ತದೆ.

ಸರ್ಕಾರ ಯಾವ ತಿದ್ದುಪಡಿ ಮಾಡಲಿದೆ?
ತಿದ್ದುಪಡಿ ಮಾಡಿದ ಮಸೂದೆ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಲ್ಪಸಂಖ್ಯಾತ ನಿರಾಶ್ರಿತರಿಗೆ ಪೌರತ್ವ ನೀಡುವ ಸಮಯವನ್ನು 1 ರಿಂದ 6 ವರ್ಷಕ್ಕೆ ಇಳಿಸಿದೆ. ಅಲ್ಲದೆ 2014ರ ಡಿಸೆಂಬರ್ 31ರಂದು ಅಥವಾ ಅದಕ್ಕೂ ಮೊದಲು ಬಂದ ಮುಸ್ಲಿಮೇತರರು ಪೌರತ್ವಕ್ಕೆ ಅರ್ಹರಾಗಿರುತ್ತಾರೆ. ಮಾನ್ಯ ದಾಖಲೆಗಳಿಲ್ಲದೆ ಕಂಡುಬಂದರೂ ಅವರನ್ನು ಜೈಲಿಗೆ ಹಾಕಲಾಗುವುದಿಲ್ಲ.

omar and mufti

ಪ್ರತಿಭಟನೆ ಯಾಕೆ?
ಸಂಸತ್ತಿನಲ್ಲಿ ಪೌರತ್ವ ಮಸೂದೆಯನ್ನು ಅಂಗೀಕರಿಸಿದರೆ, ಬಾಂಗ್ಲಾದೇಶದ ಹೆಚ್ಚಿನ ಸಂಖ್ಯೆಯ ಹಿಂದೂಗಳಿಗೆ ಪೌರತ್ವ ನೀಡುವುದರಿಂದ ಮೂಲ ನಿವಾಸಿಗಳ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತದೆ. ಇದು ರಾಜ್ಯಗಳ ಸಾಂಸ್ಕೃತಿಕ, ಭಾಷಾ ಮತ್ತು ಸಾಂಪ್ರದಾಯಿಕ ಪರಂಪರೆಯ ಮೇಲೆ ಬಿಕ್ಕಟ್ಟನ್ನುಂಟು ಮಾಡುತ್ತದೆ ಎನ್ನುವುದು ಈಶಾನ್ಯ ರಾಜ್ಯಗಳ ದೂರಾಗಿದೆ.

ಅಸ್ಸಾಂ ಒಪ್ಪಂದ:
1971ಕ್ಕಿಂತ ಮೊದಲು ಬಂದ ಜನರಿಗೆ ಪೌರತ್ವ ನೀಡುವ ಅವಕಾಶವಿತ್ತು. ಈ ಮಸೂದೆ ಅಸ್ಸಾಂಗೆ ಸೀಮಿತವಾಗಿಲ್ಲ. ಆದರೆ ಇದು ಇಡೀ ದೇಶದಲ್ಲಿ ಪರಿಣಾಮಕಾರಿಯಾಗಲಿದೆ ಎಂದು ಸರ್ಕಾರ ಹೇಳುತ್ತದೆ.

TAGGED:Asaduddin OwaisiCitizenship amendment billindiaIsraelPublic TVಅಸಾದುದ್ದೀನ್ ಓವೈಸಿಇಸ್ರೇಲ್ಎಐಐಎಂ ಮುಖ್ಯಸ್ಥಪಬ್ಲಿಕ್ ಟಿವಿಪೌರತ್ವ ತಿದ್ದುಪಡಿ ಮಸೂದೆಭಾರತಸಂಸತ್ತು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories
Kamal Haasan and Rajanikanth
ತೆರೆಮೇಲೆ ಮತ್ತೆ ಒಂದಾದ ರಜನಿಕಾಂತ್-ಕಮಲ್ ಹಾಸನ್
Cinema Latest South cinema Top Stories
Urfi Javed
ಸಾಕಿದ ಬೆಕ್ಕಿನಿಂದ ಮುಖಕ್ಕೆ ಗಾಯ ಮಾಡ್ಕೊಂಡ ಉರ್ಫಿ
Cinema Latest Top Stories
Darshan Devil Idre Nemdiyag Erbeku
ಡೆವಿಲ್ ಪ್ರಚಾರಕ್ಕೆ ಪುನರ್ ಚಾಲನೆ!
Cinema Latest Sandalwood Top Stories

You Might Also Like

Mantralaya 5
Districts

ಮಂತ್ರಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ – 22 ದಿನಗಳಲ್ಲೇ 3.35 ಕೋಟಿ ಒಡೆಯರಾದ ರಾಯರು

Public TV
By Public TV
24 minutes ago
01 9
Big Bulletin

Video: ‘ಪಬ್ಲಿಕ್‌ ಟಿವಿ’ ಜೊತೆ ಅನನ್ಯಾ ಭಟ್‌ ಬಗ್ಗೆ ಸುಜಾತಾ ಭಟ್‌ ರಿಯಾಕ್ಷನ್‌

Public TV
By Public TV
1 hour ago
ED
Bengaluru City

ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್‌ಗಳಿಗೆ ಫಾರಿನ್ ಫಂಡ್ – ಪರಿಶೀಲನೆಗೆ ಮುಂದಾದ ಇ.ಡಿ

Public TV
By Public TV
1 hour ago
Sujatha Bhat 2
Bengaluru City

ನನ್ನ ಮಗಳು ಅನನ್ಯಾ ಭಟ್ ಇದ್ದಿದ್ದು ಸತ್ಯ: ಸುಜಾತಾ ಭಟ್

Public TV
By Public TV
2 hours ago
Devarajegowda gives complaint against congress leaders to eci
Hassan

ಮತದಾರರಿಗೆ ಹಣ ಹಂಚಿಕೆ ಆರೋಪ – ಕಾಂಗ್ರೆಸ್ ನಾಯಕರ ವಿರುದ್ಧ ಆಯೋಗಕ್ಕೆ ದೇವರಾಜೇಗೌಡ ದೂರು

Public TV
By Public TV
2 hours ago
Eshwar Khandre
Bengaluru City

ಧರ್ಮಸ್ಥಳ ಅರಣ್ಯದಲ್ಲಿ ಶವ ಹೂತಿದ್ದರೆ ಕ್ರಮ: ಈಶ್ವರ ಖಂಡ್ರೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?