Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಮುರಿದ ಪ್ರಕರಣ; ಸರ್ಕಾರದ್ದೇ ನಿರ್ಲಕ್ಷ್ಯ ಎಂದು ಕಿಡಿಕಾರಿದ ಬಿಜೆಪಿ – ಜನರ ಸುರಕ್ಷತೆಗೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಮುರಿದ ಪ್ರಕರಣ; ಸರ್ಕಾರದ್ದೇ ನಿರ್ಲಕ್ಷ್ಯ ಎಂದು ಕಿಡಿಕಾರಿದ ಬಿಜೆಪಿ – ಜನರ ಸುರಕ್ಷತೆಗೆ ಆಗ್ರಹ

Bengaluru City

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಮುರಿದ ಪ್ರಕರಣ; ಸರ್ಕಾರದ್ದೇ ನಿರ್ಲಕ್ಷ್ಯ ಎಂದು ಕಿಡಿಕಾರಿದ ಬಿಜೆಪಿ – ಜನರ ಸುರಕ್ಷತೆಗೆ ಆಗ್ರಹ

Public TV
Last updated: August 11, 2024 6:45 pm
Public TV
Share
3 Min Read
Basavaraj Bommai 1
SHARE

ಬೆಂಗಳೂರು: ರಾಜ್ಯ ಸರ್ಕಾರ ತುಂಗಭದ್ರಾ ಡ್ಯಾಂ (Tungabhadra Dam) ಕ್ರಸ್ಟ್ ಗೇಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ನಿರ್ಲಕ್ಷಿಸಿದ ಪರಿಣಾಮ ಈ ಪರಿಸ್ಥಿತಿ ಎದುರಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತಾಡಿದ‌ ಬೊಮ್ಮಾಯಿ, ಡ್ಯಾಂ ಮ್ಯಾನೇಜ್‌ಮೆಂಟ್ ಕಮಿಟಿಯ ಸದಸ್ಯರು ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟ್ಟಿರ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನ್ಸುತ್ತೆ. ಇಲ್ಲದಿದ್ದರೆ ಈ ಪರಿಸ್ಥಿತಿ ಬರ್ತಿರಲಿಲ್ಲ ಎಂದರು. ಇದನ್ನೂ ಓದಿ: Tungabhadra Dam | ಹೈದರಾಬಾದ್‌ನಿಂದ ಹೊಸ ಗೇಟ್ ತರಿಸಲು ಪ್ಲ್ಯಾನ್‌ – ಆಂಧ್ರ, ತೆಲಂಗಾಣದ ಕೆಲ ಜಿಲ್ಲೆಗಳಿಗೂ ಆತಂಕ!

Tungabhadra Dam

ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು. ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಆಗಿರುವ ಟಿಬಿ ಡ್ಯಾಂ ಕಾಲ ಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ.‌ ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಸಮಾನಾಂತರವಾದ ಡ್ಯಾಂ ಕಟ್ಟಬೇಕು ಅಂತಾ ನಮ್ಮ ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲೆಯ ತುಂಗ-ಭದ್ರಾ ಡ್ಯಾಮ್‌ನ ಕ್ರಸ್ಟ್ ಗೇಟ್ ಕಟ್ಟಾಗಿ ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದ್ದು, ಪ್ರವಾಹ ಎದುರಾಗುವ ಆತಂಕ ಜನರಲ್ಲಿ ಮನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: KRS ಡ್ಯಾಂನಲ್ಲೂ ಸ್ಟಾಫ್ ಲಾಕ್ ಗೇಟ್ ಇಲ್ಲ – ಈಗಲೇ ಎಚ್ಚೆತ್ತುಕೊಳ್ಳೋದು ಒಳ್ಳೆಯದು: ಹೆಚ್‌ಡಿಕೆ

ಬರಗಾಲದಿಂದ ನಿರಂತರ ತತ್ತರಿಸಿದ್ದ ಜನತೆಗೆ ಅಣೆಕಟ್ಟು ತುಂಬಿದ ಖುಷಿಯಲ್ಲಿರುವಾಗಲೇ ಕ್ರಸ್ಟ್ ಗೇಟ್ ಕಟ್ಟಾಗಿರುವುದರ ಪರಿಣಾಮ ಸಂಗ್ರಹಿತ ನೀರು ಹೊರಹೋದರೆ ಮುಂದೆ ಕೃಷಿಗೆ ತೊಂದರೆಯಾಗುವ ಆತಂಕ ಆರಂಭವಾಗಿದೆ. ಇಂಥ ಬಹುದೊಡ್ಡ ಡ್ಯಾಮ್ ನಿರ್ವಹಣೆಯನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕಿದ್ದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರೆ ಭೀತಿಯಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಿ, ಕೂಡಲೇ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

Tungabhadra Dam 2

ಪ್ರತಿಪಕ್ಷ ನಾಯಕ ಆರ್.ಅಶೋಕ್ ಕೂಡಾ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್‌ ಚೈನ್‌ ಲಿಂಕ್ ಮುರಿದು ಬಿದ್ದಿದ್ದು, ಡ್ಯಾಂನ ಹೊರಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದರಿಂದ ನದಿ ಪಾತ್ರದ ರೈತರನ್ನು ಚಿಂತೆಗೀಡು ಮಾಡಿದೆ. ಕಳೆದ ವರ್ಷವೆಲ್ಲ ಬರಗಾಲದಿಂದ ತತ್ತರಿಸಿದ್ದ ರೈತರು ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿರುವುದರಿಂದ ಎರಡು ಬೆಳೆ ತೆಗೆಯಬಹುದು ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈಗ ಬಿತ್ತನೆಯಾಗಿರುವ ಒಂದು ಬೆಳೆಯೂ ಸಹ ಕೈತಪ್ಪಬಹುದು ಎಂದು ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.

ನೀರಾವರಿ ಸಚಿವರೂ ಆಗಿರುವ ಡಿಸಿಎಂ ಅವರಿಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ. ಪ್ರಜೆಗಳ ಹಿತಕ್ಕಿಂತ, ಪಕ್ಷದ ಹಿತವೇ ಆದ್ಯತೆಯಾಗಿದೆ. ಭ್ರಷ್ಟಾಚಾರ, ರಾಜಕೀಯ ಮೇಲಾಟ, ಬಣ ಬಡಿದಾಟ, ಪಕ್ಕದ ರಾಜ್ಯಗಳ ಚುನಾವಣೆಗೆ ಹಣ ಹೊಂದಿಸುವಲ್ಲಿ ಬ್ಯುಸಿಯಾಗಿರುವ ಉಪಮುಖ್ಯಮಂತ್ರಿಗಳಿಗೆ ಇಲಾಖೆಯ ಕರ್ತವ್ಯ ನಿರ್ವಹಿಸಲು ಪಾಪ ಸಮಯ ಎಲ್ಲಿದೆ? ಕಾಲಕಾಲಕ್ಕೆ ಜಲಾಶಯದ ತಾಂತ್ರಿಕ ಸಮಿತಿಯ ಸಭೆ ಮಾಡಿ ಡ್ಯಾಂನ ಸುರಕ್ಷತೆ, ನಿರ್ವಹಣೆ ಬಗ್ಗೆ ಗಮನ ಹರಿಸದಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಳೆದ ವರ್ಷ ಬರಗಾಲದಿಂದ ಜಲಾಶಯ ಖಾಲಿಯಾಗಿದ್ದಾಗ ಡ್ಯಾಂನ ದುರಸ್ತಿ ಕಾರ್ಯ ಮಾಡಲು ಸಮಯವೂ ಇತ್ತು, ಅವಕಾಶವೂ ಇತ್ತು. ಆದರೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕೋದರಲ್ಲೇ ಸದಾಕಾಲ ಬ್ಯುಸಿಯಾಗಿರುವ ಡಿಸಿಎಂ ಸಾಹೇಬರಿಗೆ ಡ್ಯಾಂ ರಿಪೇರಿ ಮಾಡಿಸಲು ಸಮಯ ಎಲ್ಲಿದೆ? ಆಸಕ್ತಿ ಎಲ್ಲಿದೆ? ಅಧಿಕಾರದ ತೆವಲಿಗೆ ರೈತರ ಬದುಕಿನ ಜೊತೆ ಇನ್ನೆಷ್ಟು ದಿನ ಹೀಗೆ ಚೆಲ್ಲಾಟವಾಡುತ್ತೀರಿ? ನಿಮ್ಮ ದುರಾಡಳಿತದಿಂದ ಉತ್ತಮ ಮಳೆಯಾಗಿದ್ದರೂ ಇವತ್ತು ನಾಡಿನ ರೈತರು ಕಣ್ಣೀರಿಡುವ ಪರಿಸ್ಥಿತಿ ಬಂದಿದೆ. ನಿಮ್ಮ ದುರಾಡಳಿತದಿಂದ ಕನ್ನಡಿಗರಿಗೆ ಆದಷ್ಟು ಬೇಗ ಮುಕ್ತಿ ಬೇಕಿದೆ. ನಾಡಿನ ಅನ್ನದಾತರ ಶಾಪ ತಟ್ಟುವ ಮುನ್ನ ರಾಜೀನಾಮೆ ಕೊಟ್ಟು ತೊಲಗಿ ಎಂದು ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

TAGGED:Basavaraj BommaiTB DamTungabhadra Dam
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
20 minutes ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
24 minutes ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
55 minutes ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
1 hour ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
1 hour ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?