Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive: ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಕುಕ್ಕರ್‌, ಸೀರೆ ಆರೋಪಕ್ಕೆ ಡಿ.ಕೆ.ಸುರೇಶ್‌ ಟಾಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive: ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಕುಕ್ಕರ್‌, ಸೀರೆ ಆರೋಪಕ್ಕೆ ಡಿ.ಕೆ.ಸುರೇಶ್‌ ಟಾಂಗ್‌

Bengaluru City

Exclusive: ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಕುಕ್ಕರ್‌, ಸೀರೆ ಆರೋಪಕ್ಕೆ ಡಿ.ಕೆ.ಸುರೇಶ್‌ ಟಾಂಗ್‌

Public TV
Last updated: March 24, 2024 9:53 am
Public TV
Share
2 Min Read
d.k.suresh h.d.kumaraswamy
SHARE

– ಹೆಚ್‌ಡಿಕೆ ಆರೋಗ್ಯ ಸರಿಯಿಲ್ಲ.. ಅವರು ಬೇಗ ಗುಣಮುಖರಾಗಲಿ
– ಕೋವಿಡ್‌ ವೇಳೆ ಇಡೀ ರಾಜ್ಯವೇ ಮಲಗಿದ್ದಾಗ ನಾನೊಬ್ಬನೇ ಓಡಾಡಿದ್ದೇನೆ

ಬೆಂಗಳೂರು: ಕುಮಾರಸ್ವಾಮಿ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಹೇಳುವುದೇ ಅವರ ಉದ್ಯೋಗ ಎಂದು ಸಂಸದ ಡಿ.ಕೆ.ಸುರೇಶ್‌ ಟಾಂಗ್‌ ಕೊಟ್ಟರು.

ಲೋಕಸಭಾ ಚುನಾವಣೆ ಹಿನ್ನೆಲೆ ‘ಪಬ್ಲಿಕ್‌ ಟಿವಿ’ ಜೊತೆ ಮಾಡಿದ ಅವರು, ಜೆಡಿಎಸ್‌ ನಾಯಕರ ಮನೆಗೆ ಹೋಗುವುದು, ಪಕ್ಷಕ್ಕೆ ಅವರನ್ನು ಸೆಳೆಯುವುದು, ಬೆದರಿಕೆ ಹಾಕುವ ಅಭ್ಯಾಸ ಡಿ.ಕೆ.ಶಿವಕುಮಾರ್‌ಗಾಗಲಿ ಅಥವಾ ಡಿ.ಕೆ.ಸುರೇಶ್‌ಗಾಗಲಿ ಇಲ್ಲ. ಆರೋಪ ಮಾಡುವುದು ರಾಜಕೀಯದ ಹುಟ್ಟು ಗುಣ. ಹೆಚ್‌.ಡಿ.ಕುಮಾರಸ್ವಾಮಿ ಅವರು ವೈದ್ಯಕೀಯ ಸೇವೆಯಲ್ಲಿದ್ದಾರೆ. ಆರೋಗ್ಯ ಸರಿಯಿಲ್ಲ. ಅವರ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಇದನ್ನೂ ಓದಿ: Exclusive: ಕ್ಷೇತ್ರದ ಜನರ ನಾಡಿಮಿಡಿತ ನನಗೆ ಗೊತ್ತು.. ಡಾ.ಮಂಜುನಾಥ್‌ ಮಿಡಿತ ಬೇಕಾಗಿಲ್ಲ: ಡಿ.ಕೆ.ಸುರೇಶ್‌

HDK 1

ಭಯ ಅನ್ನೋದು ಭಗವಂತನ ಸೃಷ್ಟಿ. ಜನ ನನ್ನ ಹಿಂದೆ ಇರೋವರೆಗೂ ಯಾರಿಗೂ ಹೆದರುವ ಪ್ರಶ್ನೆ ಇಲ್ಲ ಎಂದರು. ಕುಕ್ಕರ್‌, ಸೀರೆ ಹಂಚುವ ಆರೋಪ ಕುರಿತು ಮಾತನಾಡಿ, ಅದನ್ನು ಯಾರು ಹಂಚಿದ್ದಾರೆ ಎಂಬುದನ್ನು ನೀವೇ ಕೇಳಿಕೊಳ್ಳಬೇಕು. ಕೆಲವರು ಹಂಚುತ್ತಿರುತ್ತಾರೆ. ಕೆಲವರು ಒಳಗೊಳಗೆ ಏನೇನೊ ಮಾಡ್ತಿರುತ್ತಾರೆ. ಕುಮಾರಸ್ವಾಮಿ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಹೇಳುವುದೇ ಅವರ ಉದ್ಯೋಗ ಎಂದು ತಿರುಗೇಟು ನೀಡಿದರು.

ಈಗ ರಂಜಾನ್‌ ಹಬ್ಬ ಇದೆ. ಷರಿಯತ್‌ ಗೋಸ್ಕರ ಆ ಕ್ಷೇತ್ರದ ಶಾಸಕರು ಪ್ರತಿ ವರ್ಷ ಉಡುಗೊರೆ ಕೊಡ್ತಾರೆ. ಅದನ್ನು ಬುಕ್‌ ಮಾಡಿ ತಂದಿಟ್ಟಿದ್ದಾರೆ. ಈ ಸಂದರ್ಭದಲ್ಲೇ ಚುನಾವಣೆ ಬಂದಿದೆ. ಅದರಲ್ಲಿ ಸಿಂಬಲ್‌ ಏನು ಇಲ್ಲ. ಚುನಾವಣಾ ಆಯೋಗಕ್ಕೆ ಏನು ಸಲ್ಲಿಕೆ ಮಾಡಬೇಕೊ ಅದನ್ನ ಮಾಡ್ತಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಮಗ-ಮಗಳು, ಸೊಸೆ-ಅಳಿಯ, ಅಣ್ಣ ಎಲ್ಲಾ ಇದ್ದಾರೆ; ಕುಟುಂಬ ರಾಜಕಾರಣ ಆರೋಪಕ್ಕೆ ಡಾ.ಮಂಜುನಾಥ್‌ ತಿರುಗೇಟು

Dr Manjunath

100% ಗ್ಯಾರಂಟಿ ನಮ್ಮ ಕೈ ಹಿಡಿಯುತ್ತೆ. ಮಹಿಳೆಯರಷ್ಟೇ ಅಲ್ಲ, ಕುಟುಂಬದ ಎಲ್ಲಾ ಸದಸ್ಯರು ನಮ್ಮ ಪರ ನಿಲ್ಲುತ್ತಾರೆ. 5 ಗ್ಯಾರಂಟಿಗಳು ರಾಜ್ಯದ ಮುಂದಿನ ಚಿತ್ರಣವನ್ನು ಬದಲಾಯಿಸುತ್ತೆ. ಯಾವ ರೀತಿ ಆರ್ಥಿಕ ಬದಲಾವಣೆ ಆಗುತ್ತೆ ಎಂಬುದನ್ನ ನೀವೇ ನೋಡ್ತೀರಿ ಎಂದು ಭರವಸೆ ವ್ಯಕ್ತಪಡಿಸಿದರು.

ಮುನಿರತ್ನ ಅವರು ನನ್ನ ಜೊತೆ ಇದ್ದ ಸಂದರ್ಭದಲ್ಲಿ ಸರ್ಕಾರದ ಮಟ್ಟದಲ್ಲಿ ಎಲ್ಲ ಕೆಲಸ ಕಾರ್ಯಗಳನ್ನು ಮಾಡಿಸಿಕೊಟ್ಟಿದ್ದೇನೆ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ಕೊಟ್ಟಿದ್ದೇನೆ. ನೂರಾರು ಕೋಟಿ ಅನುದಾನ ಅವರಿಗೆ ಸಿಗುವಂತೆ ಮಾಡಿದ್ದೇನೆ. ಇವತ್ತೇನಾದರು ಮುನಿರತ್ನ ಅವರು ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳಿಕೊಂಡರೆ, ಅದರಲ್ಲಿ ನನ್ನ 50% ಪಾಲಿದೆ. ನಾನು ಅವರ ಜೊತೆ ಕೈಜೋಡಿಸಿ ಕೆಲಸ ಮಾಡಿದ್ದೇನೆ. ಅದು ಕಾಂಗ್ರೆಸ್‌ ಕೊಟ್ಟ ಕೊಡುಗೆ. ಮುನಿರತ್ನ ಅವರ ವೈಯಕ್ತಿಕ ಅಲ್ಲ. ನಾನು ಕೂಡ ಅದರಲ್ಲಿ ಪಾಲುದಾರ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಕೋವಿಡ್‌ ಸಂದರ್ಭದಲ್ಲಿ ಇಡೀ ರಾಜ್ಯ ಮಲಗಿತ್ತು. ಈ ಡಿ.ಕೆ.ಸುರೇಶ್‌ ಒಬ್ಬನೇ ರಸ್ತೆಯಲ್ಲಿ ಓಡಾಡುತ್ತಿದ್ದದ್ದು. ದೇಶದಲ್ಲಿ ಎಲ್ಲರೂ ತಮ್ಮ ಭಾಷಣಗಳನ್ನು ಆನ್‌ಲೈನ್‌ ಮುಖಾಂತರ ಮಾಡುತ್ತಾ ಅವರ ಕೆಲಸ ಕಾರ್ಯ ನಿರ್ವಹಿಸುತ್ತಿದ್ದರು. ನಾನು ರೈತರು, ರೋಗಿಗಳ ಪರ ನಿಂತಿದ್ದೇನೆ. ನನ್ನ ಜೀವ ಹೋದರೂ ಚಿಂತೆಯಿಲ್ಲ ಅಂತಾ ಐಸಿಯುಗೆ ಹೋಗಿ ರೋಗಿಗಳ ಕಷ್ಟ ಆಲಿಸಿದ್ದೇನೆ. ಕೋವಿಡ್‌ ಸಂದರ್ಭದಲ್ಲಿ ನಾನು ಮಾಡಿದ ಕೆಲಸಗಳ ಬಗ್ಗೆ ಹೆಮ್ಮೆ ಇದೆ ಎಂದು ಕರಾಳ ಸನ್ನಿವೇಶದಲ್ಲಿ ತಮ್ಮ ಬದ್ಧತೆ ನೆನಪಿಸಿಕೊಂಡರು.

TAGGED:bengaluru ruralbjpcongressD.K.Sureshh d kumaraswamyjdsLok Sabha Election 2024
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
7 minutes ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
28 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
1 hour ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
1 hour ago
Donald Trump
Latest

ಟ್ರಂಪ್‌ಗೆ ಮುಖಭಂಗ – ಯುದ್ಧ ನೌಕೆಗಳನ್ನು ಕಳುಹಿಸಲ್ಲ ಎಂದ ಮಿತ್ರ ದೇಶಗಳು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bellary

ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?