Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ: ಸಿಎಂ ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ: ಸಿಎಂ ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಆಗ್ರಹ

Bagalkot

ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ: ಸಿಎಂ ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಆಗ್ರಹ

Public TV
Last updated: November 27, 2025 12:57 pm
Public TV
Share
3 Min Read
Govind Karjol Bagalkote
SHARE

ಬಾಗಲಕೋಟೆ: ಎರಡೂವರೆ ವರ್ಷಕ್ಕೆ ರಾಜೀನಾಮೆ ಕೊಡುವ ಮಾತಿದ್ದರೆ ಕೊಡಿ. ರಾಜೀನಾಮೆ ಕೊಟ್ಟು ಸುರಕ್ಷಿತವಾದ, ದಕ್ಷ ಆಡಳಿತ ನಡೆಸಿ ಎಂದು ಸಿಎಂ ಸಿದ್ದರಾಮಯ್ಯಗೆ (Siddaramaiah) ಸಂಸದ ಗೋವಿಂದ ಕಾರಜೋಳ (Govind Karjol) ಆಗ್ರಹಿಸಿದರು.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಿಮ್ಮಲ್ಲಿ ಗೌರವಯುತ ಒಪ್ಪಂದ ಆಗಿದ್ರೆ, ಎರಡೂವರೆ ವರ್ಷಕ್ಕೆ ರಾಜೀನಾಮೆ ಕೊಡುವ ಮಾತಿದ್ರೆ, ರಾಜೀನಾಮೆ ಕೊಡಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಹೈಕಮಾಂಡ್ ಚರ್ಚಿಸಿ ಎಲ್ಲಾ ಸೆಟಲ್ ಮಾಡುತ್ತೆ – ದೆಹಲಿಗೆ ತೆರಳುವ ಮುನ್ನ ಖರ್ಗೆ ರಿಯಾಕ್ಷನ್‌

ಸರ್ಕಾರ ಇವತ್ತು ವಿಧಾನಸಭೆಯಲ್ಲಿ ಆಡಳಿತ ಮಾಡ್ತಿಲ್ಲ. ಹೋಟೆಲ್, ಬಾರ್‌ಗಳಲ್ಲಿ, ಗುಂಪು ಗುಂಪಾಗಿ ಕುರ್ಚಿಗಾಗಿ ಕಾದಾಟ ಮಾಡ್ತಿದ್ದಾರೆ. ಸರ್ಕಾರ ಸಂಪೂರ್ಣ ನಿಷ್ಕ್ರಿಯ ಆಗಿದೆ. ರಾಜ್ಯಪಾಲರು ಕೂಡಲೇ ಸರ್ಕಾರವನ್ನ ಅಮಾನತಿನಲ್ಲಿಟ್ಟು, ರಾಷ್ಟ್ರಪತಿ ಆಡಳಿತ ನಡೆಸಬೇಕೆಂದು ಆಗ್ರಹ. ಇಲ್ಲದಿದ್ದರೆ ರಾಜ್ಯ ಸಂಪೂರ್ಣವಾಗಿ ಹಾಳಾಗಿ ಹೋಗುತ್ತೆ. ಜನ ಸಂಕಷ್ಟದಲ್ಲಿದ್ದಾರೆ, ಆರ್ಥಿಕವಾಗಿ ದಿವಾಳಿಯಾಗಿರುವ ಸರ್ಕಾರ ದಿನಾಲು ಹೊಸ ಹೊಸ ನಾಟಕಗಳನ್ನ ಮಾಡಿ, ಜನರಿಗೆ ಮೋಸ ಮಾಡುತ್ತಿದೆ. ದಿಕ್ಕು ತಪ್ಪಿಸುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡ್ತಿದೆ ಎಂದು ವಾಗ್ದಾಳಿ ನಡೆಸಿದರು.

Siddaramaiah DK Shivakumar

ಮಾಜಿ ಸಿಎಂ ಸದಾನಂದಗೌಡರ ಹೇಳಿಕೆ ಕುರಿತು ಮಾತನಾಡಿ, ಡಿಕೆ ಶಿವಕುಮಾರ್ ಜೊತೆ ಸೇರಿ ಸರ್ಕಾರ ಮಾಡೋಕೆ ರೆಡಿ ಇದ್ದೀವಿ ಅಂತ ಅಲ್ಲ. ನಮ್ಮದೊಂದು ರಾಜಕೀಯ ಪಕ್ಷ. ನಾವು ರಾಜಕೀಯ ಅಸ್ಥಿರತೆ ಉಂಟಾದಾಗ, ಕಣ್ಣು ಮುಚ್ಚಿ ಕೂರೋಕೆ ಆಗುವುದಿಲ್ಲ. ನಾವು ಒಂದು ರಾಜಕೀಯ ಪಕ್ಷವಾಗಿ, ವಿರೋಧ ಪಕ್ಷವಾಗಿ ಏನೆಲ್ಲಾ ಕ್ರಮಗಳನ್ನು ಜರುಗಿಸಬೇಕೋ ಅದನ್ನು ಜರುಗಿಸುತ್ತೇವೆ. ಆದರೆ ಒಂದು ಮಾತನ್ನು ಹೇಳುತ್ತೇವೆ. ಯಾವುದೇ ಕಾರಣಕ್ಕೂ ಸರ್ಕಾರದಲ್ಲಿ ಭಾಗಿಯಾಗುವುದಿಲ್ಲ. ನಾವು ಚುನಾವಣೆಗೆ ಹೋಗಬೇಕು ಅಂತ ಹೇಳುತ್ತೇವೆ. ನಾವು ಯಾವುದೇ ಕಾರಣಕ್ಕೂ ಈ ಸರ್ಕಾರದೊಂದಿಗೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ. ಸದಾನಂದಗೌಡರು ತಮ್ಮ ಅಭಿಪ್ರಾಯ ಹೇಳಿರಬಹುದು. ಒಂದು ಪ್ರತಿಪಕ್ಷವಾಗಿ ದುರಾಡಳಿತ ಮಾಡಿರುವ ಸರ್ಕಾರದ ಜೊತೆ ನಾವು ಕೈಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆದಿಚುಂಚನಗಿರಿ ಸ್ವಾಮೀಜಿಗಳು ಹಿಂದೆಂದೂ ರಾಜಕೀಯದಲ್ಲಿ ಭಾಗವಹಿಸಿಲ್ಲ. 2013 ರಲ್ಲಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕಾದರೆ, ಆಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಹೇಳಿಲ್ಲ. 2013 ರಲ್ಲಿ ಮುಖ್ಯಮಂತ್ರಿ ಆಗುವಂತಹ ಒಕ್ಕಲಿಗ ನಾಯಕರು ಯಾರೂ ಇರಲಿಲ್ಲ. ಇವತ್ತು ಡಿಕೆಶಿ ಅವರು ಶ್ರಮಪಟ್ಟು ಪಕ್ಷವನ್ನು ಕಟ್ಟಿದ್ದಾರೆ. ಈ ನಡುವೆ ಕಾಂಗ್ರೆಸ್ ಪಕ್ಷ ಹೈಕಮಾಂಡ್ ಎರಡೂವರೆ ವರ್ಷ, ಎರಡೂವರೆ ವರ್ಷ ಅಂತ ಹೇಳಿದ್ದಾರೆ. ಅದಕ್ಕಾಗಿ ದುಡಿದಂತ ಒಬ್ಬ ನಾಯಕ ಡಿಕೆಶಿಯವರಿಗೆ ಮುಖ್ಯಮಂತ್ರಿ ಪಟ್ಟ ಸಿಗಲಿ ಅಂತ ಆಶಯ ವ್ಯಕ್ತಪಡಿಸಿದ್ದಾರೆಯೇ ಹೊರತು ಸ್ವಾಮೀಜಿ ಅವರು ರಾಜಕೀಯದಲ್ಲಿ ಭಾಗವಹಿಸಿಲ್ಲ, ವಹಿಸೋದು ಇಲ್ಲ. ಅವರೊಬ್ಬ ಅತ್ಯಂತ ಉತ್ತಮ ಸಂಸ್ಕಾರ ಇರುವಂತಹ ಸ್ವಾಮೀಜಿ. ಅವರು ಇಷ್ಟು ವರ್ಷವಾದರೂ ರಾಜಕೀಯದಲ್ಲಿ ಭಾಗವಹಿಸಿದ್ದನ್ನು ನಾನು ನೋಡಿಲ್ಲ. ಬಾಲಗಂಗಾಧರನಾಥ ಶ್ರೀಗಳ ಬಳಿಕ ಇವರು ಆ ಪೀಠಕ್ಕೆ ಬಂದಮೇಲೆ ಯಾವುತ್ತೂ ಸಹ ರಾಜಕೀಯ ಮಾತನಾಡಿಲ್ಲ. ಆದರೆ ಇವತ್ತು ದುಡಿದಂತ ಒಬ್ಬ ನಾಯಕನಿಗೆ ಸಿಗಬೇಕೆನ್ನುವ ಆಶಯವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚಲ್ಲ, ಡಿಕೆಶಿಗೆ ಸಿಎಂ ಸ್ಥಾನ ಕೊಡಿ – ನಂಜಾವಧೂತ ಸ್ವಾಮೀಜಿ

ಹಿಂದೆಯೂ ಸಹ ದೇವೇಗೌಡರು ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಇಡೀ ಸಮುದಾಯವೇ ಅವರು ಸಿಎಂ ಆಗಬೇಕು ಅಂತ ಅಪೇಕ್ಷೆ ಪಟ್ಟರು. ಅವತ್ತು ಅವರನ್ನು ಮುಖ್ಯಮಂತ್ರಿ ಮಾಡಿದರು. ಅಂದು ಇಡೀ ಸಮುದಾಯವೇ ವಿಧಾನಸೌಧಕ್ಕೆ ನುಗ್ಗಿ ಬಂತು. ಏಕೆಂದರೆ ದೇವೇಗೌಡರು ಒಬ್ಬ ರೈತ ನಾಯಕರು, ಹೋರಾಟಗಾರರು, ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡಿದವರು. ಅವರಿಗೊಂದು ಅವಕಾಶ ಸಿಗಲಿ ಅಂತ ಒಂದು ಆಶಯ ವ್ಯಕ್ತಪಡಿಸಿದರು ಅಷ್ಟೇ. ಅದೇ ರೀತಿ ಇವತ್ತು ಡಿಕೆಶಿ ಅವರಿಗೆ ಸಿಗಲಿ ಎನ್ನುವಂತಹ ಆಶಯ ವ್ಯಕ್ತಪಡಿಸಿದ್ದಾರೆ ಅಷ್ಟೆ. ಆದರೆ, ಅವರು ರಾಜಕಾರಣದಲ್ಲಿ ಭಾಗವಹಿಸಿಲ್ಲ ಎಂದರು.

TAGGED:bagalakoteGovind karjolsiddaramaiahಗೋವಿಂದ ಕಾರಜೋಳಬಾಗಲಕೋಟೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The Devil
10,500ಕ್ಕೂ ಹೆಚ್ಚು ಪೈರಸಿ ಲಿಂಕ್ ಡಿಲಿಟ್ – ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್
Bengaluru City Cinema Latest Main Post Sandalwood
Samantha Ruth Prabhu 1
ಮೊದಲು ನಿಧಿ ಅಗರ್ವಾಲ್‌, ನಂತ್ರ ಸಮಂತಾ – ಫ್ಯಾನ್ಸ್‌ನಿಂದಲೇ ಕಸಿವಿಸಿ
Cinema Latest South cinema Top Stories
Darshan Fans
ವಿಜಯಲಕ್ಷ್ಮಿ ದರ್ಶನ್‌ ಬೆಂಕಿ ಮಾತು – ಕಿಚ್ಚನ ವಿರುದ್ಧ ಮಾತಿನ ಯುದ್ಧಕ್ಕೆ ನಿಂತ ಡಿಬಾಸ್‌ ಫ್ಯಾನ್ಸ್‌
Bengaluru City Cinema Latest Main Post Mandya Sandalwood
sudeep vijayalakshmi
ಸುದೀಪ್ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಟಕ್ಕರ್
Cinema Latest Sandalwood Top Stories

You Might Also Like

Russia Gujarat Student
Latest

ರಷ್ಯಾ ಸೇನೆ ಸೇರಲು ಒತ್ತಾಯ – ಉಕ್ರೇನ್‌ನಿಂದ SOS ವಿಡಿಯೋ ಹರಿಬಿಟ್ಟ ಗುಜರಾತ್ ವಿದ್ಯಾರ್ಥಿ

Public TV
By Public TV
12 minutes ago
First driverless Pink Metro train arrives in Bengaluru
Bengaluru City

ಬೆಂಗಳೂರಿಗೆ ಬಂದಿಳಿದ ಮೊದಲ ಚಾಲಕರಹಿತ ಪಿಂಕ್ ಮೆಟ್ರೋ ರೈಲು

Public TV
By Public TV
29 minutes ago
Greater Bengaluru
Bengaluru City

ಸಲ್ಲಿಸಿದ್ದು 3,000 ಅರ್ಜಿ, ವಿತರಣೆ ಆಗಿದ್ದು 35; ಎ-ಖಾತಾ ವಿತರಣೆ ಶುರು ಮಾಡಿದ ಜಿಬಿಎ

Public TV
By Public TV
35 minutes ago
Accident
Belgaum

ಬೆಳಗಾವಿ | ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ – 30 ಮಂದಿಗೆ ಗಾಯ

Public TV
By Public TV
1 hour ago
Bangladesh Hindu Man
Latest

ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ – ಭಾರತದ ಆರೋಪ ತಿರಸ್ಕರಿಸಿದ ಬಾಂಗ್ಲಾ ವಿದೇಶಾಂಗ ಸಚಿವಾಲಯ

Public TV
By Public TV
2 hours ago
India Bangal Clash
Latest

ಹಾದಿ ಹತ್ಯೆ ಬಳಿಕ ಭುಗಿಲೆದ್ದ ಹಿಂಸಾಚಾರ – ಬಾಂಗ್ಲಾದಲ್ಲಿ ಭಾರತೀಯ ವೀಸಾ ಸೇವೆ ಸ್ಥಗಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?