ನವದೆಹಲಿ: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ತುಮಕೂರು ಸಂಸದ ಮುದ್ದ ಹನುಮೇಗೌಡ ಅವರು ಲೋಕಸಭಾ ಕಲಾಪದ ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ.
ಕನ್ನಡದಲ್ಲೇ ಸಭಾಧ್ಯಕ್ಷರಲ್ಲಿ ಮನವಿ ಮಾಡಿದ ಅವರು, ವಿಶ್ವದಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶತಾಯುಷಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಅಕ್ಷರ ದಾಸೋಹ, ಜ್ಞಾನ ದಾಸೋಹ, ಅನ್ನ ದಾಸೋಹ ಮೂಲಕ ಕೋಟ್ಯಂತರ ಭಕ್ತರನ್ನು ಹೊಂದಿದ್ದಾರೆ. ಅಲ್ಲದೇ ತಮ್ಮ 111 ವರ್ಷಗಳ ಜೀವನವನ್ನು ಸೇವೆಗಾಗಿಯೇ ಮುಡಿಪಾಗಿಟ್ಟಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಭಾರತ ರತ್ನ ಗೌರವವನ್ನು ನೀಡಬೇಕು ಎಂದು ಕೋರಿದರು.
ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಿದೆ. ಆದರೆ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಕೋಟ್ಯಂತರ ಭಕ್ತರ ಕೋರಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಆದ್ದರಿಂದ ಶ್ರೀಗಳಿಗೆ ಮರಣೋತ್ತರವಾಗಿಯಾದರೂ ಭಾರತ ರತ್ನ ಪ್ರಶಸ್ತಿಯನ್ನ ನೀಡಬೇಕು. ಶ್ರೀಗಳಿಗೆ ಪ್ರಶಸ್ತಿ ನೀಡದಿರುವುದು ಭಕ್ತರ ಮನಸ್ಸಿಗೆ ನೋವುಂಟು ಮಾಡಿದೆ. ಆದ್ದರಿಂದ ಶೀಘ್ರದಲ್ಲೇ ಪ್ರಶಸ್ತಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಶ್ರೀಗಳ ಸ್ಮರಣೆ ಮಾಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv