Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ನಾಯಕರ ಜೊತೆಗೆ ನಾನು ಕುಳಿತದ್ದು ಯಾಕೆ: ನಳಿನ್ ಕುಮಾರ್ ಹೇಳಿದ್ದು ಇಷ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ನಾಯಕರ ಜೊತೆಗೆ ನಾನು ಕುಳಿತದ್ದು ಯಾಕೆ: ನಳಿನ್ ಕುಮಾರ್ ಹೇಳಿದ್ದು ಇಷ್ಟು

Bengaluru City

ಕಾಂಗ್ರೆಸ್ ನಾಯಕರ ಜೊತೆಗೆ ನಾನು ಕುಳಿತದ್ದು ಯಾಕೆ: ನಳಿನ್ ಕುಮಾರ್ ಹೇಳಿದ್ದು ಇಷ್ಟು

Public TV
Last updated: July 15, 2017 7:30 pm
Public TV
Share
3 Min Read
nalin kumar 1
SHARE

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಜೆ.ಆರ್.ಲೋಬೋ, ಐವನ್ ಡಿಸೋಜಾ ಅವರು ಒಂದೇ ಕಾರಿನಲ್ಲಿ ಪ್ರಯಾಣಿಸಿದ ಫೋಟೋ ಮತ್ತು ಸಚಿವ ಬಿ.ರಮಾನಾಥ ರೈಯವರೊಂದಿಗೆ ಸರ್ಕೂಟ್ ಹೌಸಿನಲ್ಲಿ ಕುಳಿತು ಮಾತನಾಡುತ್ತಿರುವ ಫೋಟೋ ಹರಿದಾಡುತ್ತಿರುವ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲು ಸ್ಪಷ್ಟನೆ ನೀಡಿದ್ದಾರೆ.

ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿದ ಅವರು, ಈ ಫೋಟೋಗಳು ಈಗ ತೆಗೆದಿರುವುದು ಅಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವರ ಜೊತೆ ಮಾತುಕತೆ ನಡೆಸಿದಾಗ ತೆಗೆದಿರುವ ಫೋಟೋಗಳು ಎಂದು ತಿಳಿಸಿದ್ದಾರೆ.

nalin kumar 3

ಫೇಸ್ ಬುಕ್ ನಲ್ಲಿ ನಳಿನ್ ಕುಮಾರ್ ಕಟೀಲು ಬರೆದಿದ್ದು ಹೀಗೆ:
ಇತ್ತೀಚೆಗೆ ಸಾಮಾಜಿಕ ತಾಣಗಳಲ್ಲಿ ನಾನು, ಶಾಸಕರಾದ ಜೆ.ಆರ್.ಲೋಬೋ, ಐವನ್ ಡಿಸೋಜಾ ಅವರು ಒಂದೇ ಕಾರಿನಲ್ಲಿ ಪ್ರಯಾಣಿಸಿದ ಫೋಟೋ ಮತ್ತು ನಾನು ಸಚಿವ ಬಿ ರಮಾನಾಥ ರೈಯವರೊಂದಿಗೆ ಸರ್ಕೂಟ್ ಹೌಸಿನಲ್ಲಿ ಕುಳಿತು ಮಾತನಾಡುತ್ತಿರುವ ಫೋಟೋ ಹರಿದಾಡುತ್ತಿದೆ. ಅದಕ್ಕೆ ಕೆಲವರು ವಿವಿಧ ಅರ್ಥದ ಅಭಿಪ್ರಾಯವನ್ನು ಬರೆದು ಹಾಕುತ್ತಿದ್ದಾರೆ. ಇದರಿಂದ ನನ್ನ ಮನಸ್ಸಿಗೆ ಒಂದಿಷ್ಟು ಬೇಸರವಾಗಿದೆ. ಆ ಫೋಟೋಗಳ ಬಗ್ಗೆ, ಅದು ತೆಗೆದ ಸಂದರ್ಭದ ಬಗ್ಗೆ ವಿಶ್ಲೇಷಣೆ ಮಾಡದೆ ಮನಸ್ಸಿಗೆ ತೋಚಿದಂತೆ ಗೀಚಿದರೆ ಅದರಿಂದ ವಸ್ತು ಸ್ಥಿತಿಯ ಬಗ್ಗೆ ಅಪಾರ್ಥ ಮೂಡುತ್ತದೆ ವಿನಾ: ಬೇರೆ ಏನೂ ಸಾಧಿಸದಂತೆ ಆಗುವುದಿಲ್ಲ.

ನಾನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ. ನನ್ನ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ನಾನು ಅಷ್ಟೂ ಪ್ರದೇಶಗಳಿಗೆ ಭೇಟಿ ಕೊಟ್ಟು ವಿಭಿನ್ನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಂದರ್ಭಗಳು ಇರುತ್ತವೆ. ನಿಮಗೆ ಗೊತ್ತಿರುವಂತೆ ಈ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಏಳರಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಜಿಲ್ಲೆಯ ಅಭಿವೃದ್ಧಿಯ ವಿಷಯ ಬಂದಾಗ ನಾನು ಮತ್ತು ಅವರುಗಳು ಒಂದೇ ವೇದಿಕೆಯಲ್ಲಿ ಸೇರಬೇಕಾಗುತ್ತದೆ. ಏಕೆಂದರೆ ಒಂದು ಅಭಿವೃದ್ಧಿ ಯೋಜನೆ ಎಂದರೆ ಅದರಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರದ ಸಮಪ್ರಮಾಣದ ಪಾಲುಗಳು ಕೂಡ ಇದ್ದೇ ಇರುತ್ತದೆ. ಅನೇಕ ಬಾರಿ ಕೇವಲ ಕೇಂದ್ರದ ಯೋಜನೆಗಳಾಗಿದ್ದರೂ ಅದಕ್ಕೆ ಬೇಕಾಗುವ ಜಾಗ, ಇತರೆ ಸೌಲಭ್ಯಗಳನ್ನು ರಾಜ್ಯ ಪೂರೈಸಿದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ. ಹಾಗಿರುವಾಗ ಪರಸ್ಪರ ಭೇಟಿ ಅಗತ್ಯ ಮತ್ತು ಅನಿವಾರ್ಯ.

nalin kumar 2

ಬೇಕಾದರೆ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ತೆಗೆದುಕೊಂಡು ಹೋಗುವ ಕಾರ್ಯ ಇರಬಹುದು. ಇದಕ್ಕೆ ಇಲ್ಲಿನ ಸ್ಥಳೀಯ ಶಾಸಕರ ಸಲಹೆ, ಅಭಿಪ್ರಾಯ ಕೂಡ ಬೇಕಾಗುತ್ತದೆ. ಅದೇ ರೀತಿಯಲ್ಲಿ ನೇತ್ರಾವತಿ ನದಿ ತಿರುವು ಯೋಜನೆ ಇರಬಹುದು, ಆಗ ಸಚಿವರೊಂದಿಗೆ ಮಾತನಾಡಿ ರಾಜ್ಯ ಸರಕಾರದ ಮೇಲೆ ಒತ್ತಡ ತರುವಂತಹ ಕೆಲಸ ಮಾಡುವುದು ಒಬ್ಬ ಜನಪ್ರತಿನಿಧಿಯಾಗಿ ನನ್ನ ಜವಾಬ್ದಾರಿ. ಅವರು ನಮ್ಮ ಯೋಜನೆಗಳಿಗೆ ಎಷ್ಟು ಸಹಕಾರ ಕೊಡುತ್ತಾರೆ ಎನ್ನುವುದು ಅವರವರ ಆತ್ಮಸಾಕ್ಷಿಗೆ ಬಿಟ್ಟಿದ್ದು. ಆದರೆ ಭೇಟಿಯೇ ಆಗದೇ ಹೋದರೆ ಕೆಲಸ ಮುಂದುವರಿಯುವುದೇ ಇಲ್ಲ.

Capture 4

ಇನ್ನು ಸೈದ್ಧಾಂತಿಕವಾಗಿ ನಾನು ಅವರ ನಿಲುವಿಗೆ ಬದ್ಧ ವಿರೋಧಿ. ಕಾಂಗ್ರೆಸ್ ಸಚಿವ, ಶಾಸಕರು ಮಾಡುವ ಸ್ವಜಾತಿ ಪ್ರೇಮ, ಅಲ್ಪಸಂಖ್ಯಾತರ ವಿಪರೀತ ಒಲೈಕೆ, ಧರ್ಮ ಬಿಟ್ಟು ನಡೆಯುವ ನಡೆಗಳಿಗೆ ನಾನು ಯಾವತ್ತೂ ವಿರೋಧ ವ್ಯಕ್ತಪಡಿಸಿದ್ದೇನೆ. ಅದನ್ನು ನನ್ನ ರಾಜಕೀಯ ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದಿದ್ದೇನೆ. ಅದನ್ನು ಮುಂದೆಯೂ ಪಾಲಿಸಿಕೊಂಡು ಬರುವುದಕ್ಕೆ ಯಾವತ್ತೂ ಬದ್ಧ. ಹಾಗೆಂದು ನಾನು ಅವರೊಂದಿಗೆ ಕುಳಿತ, ನಿಂತ ಫೋಟೋಗಳನ್ನು ಹಾಕಿ ನಾನು ಅವರೊಂದಿಗೆ ಶಾಮೀಲಾಗಿ ನಾನು ಕೂಡ ಕಾಂಗ್ರೆಸ್ಸಿನವರೊಂದಿಗೆ ಚೆನ್ನಾಗಿದ್ದೇನೆ ಎಂದು ಅಪಾರ್ಥ ಸುದ್ದಿ ಹರಡಿಸುವ ಕೆಲಸವನ್ನು ಯಾರೂ ಕೂಡ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ.

Captureff

 

ರಾಜಕೀಯ ಎಂದರೆ ಅಭಿವೃದ್ಧಿ ಕೆಲಸಗಳಿಗೆ ಸಿಕ್ಕ ಅವಕಾಶ ಎಂದು ಭಾವಿಸಿದವ ನಾನು. ಅಭಿವೃದ್ಧಿ ಯೋಜನೆಗಳಿಗೆ ಯಾವ ಪಕ್ಷದ ಮುಖಂಡರ ಸಲಹೆ, ಅಭಿಪ್ರಾಯಗಳಿಗೆ ನನ್ನ ಸ್ವಾಗತವಿದೆ. ಹಾಗಂತ ಅವರು ಮಾಡುವ ಸಮಾಜ ವಿರೋಧಿ ಚಟುವಟಿಕೆಗಳಿಗೆ ನನ್ನ ಉಸಿರು ಇರುವ ತನಕ ನಾನು ಬಾಗುವುದಿಲ್ಲ.

 

TAGGED:congressNalin KumarPublic TVRamanath Raiಕಾಂಗ್ರೆಸ್ನಳಿನ್ ಕುಮಾರ್ಪಬ್ಲಿಕ್ ಟಿವಿರಮಾನಾಥ್ ರೈ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Tumakuru Congress
Districts

ಕಾಂಗ್ರೆಸ್‌ ವಿರುದ್ಧ ಬ್ಯಾಲೆಟ್ ಪೇಪರ್ ಚೋರಿ ಆರೋಪ – ಸಹಕಾರಿ ಸಂಘದ ಚುನಾವಣೆ ರದ್ದು

Public TV
By Public TV
1 minute ago
Prasanna Aurasanga
Bagalkot

ಉಪಚುನಾವಣೆ ಹೊತ್ತಲ್ಲೇ ಬಾಗಲಕೋಟೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

Public TV
By Public TV
31 minutes ago
Epstein network plotting 9 11 style attack to blame Iran security chief claims
Latest

9/11 ರೀತಿ ದಾಳಿ ನಡೆಸಿ ನಮ್ಮ ಮೇಲೆ ಆರೋಪ ಹೊರಿಸಲು ಎಪ್ಸ್ಟೀನ್ ಜಾಲ ಪ್ಲ್ಯಾನ್‌: ಇರಾನ್ ಆರೋಪ

Public TV
By Public TV
1 hour ago
TVK Vijay
Latest

ಎನ್‌ಡಿಎ ಗೆದ್ದರೆ ವಿಜಯ್‌ಗೆ ಡಿಸಿಎಂ ಹುದ್ದೆ- ಟಿವಿಕೆಗೆ ಬಿಜೆಪಿ ಆಫರ್‌

Public TV
By Public TV
1 hour ago
Daiva nartana by a person from the Christian community new controversy Tulunadu Dakshina Kannada 2
Dakshina Kannada

ದೈವಾರಾಧನೆಯ ಕಟ್ಟುಪಾಡು ಮುರಿದು ನೇಮೋತ್ಸವ – ಕ್ರೈಸ್ತ ಸಮುದಾಯದ ವ್ಯಕ್ತಿಯಿಂದ ದೈವ ನರ್ತನ!

Public TV
By Public TV
2 hours ago
Chikkamagaluru Rain
Chikkamagaluru

ಚಿಕ್ಕಮಗಳೂರಲ್ಲಿ ಭಾರೀ ಮಳೆ – ರಸ್ತೆಗುರುಳಿದ ಬೃಹತ್‌ ಮರ, 5 ಕಿಮೀ ಟ್ರಾಫಿಕ್‌ ಜಾಮ್‌!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?