Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಸಿಎಂ 2ನೇ ಪತ್ರ- ಪ್ರಧಾನಿಗೆ ಬರೆದ ಲೆಟರ್‌ನಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಸಿಎಂ 2ನೇ ಪತ್ರ- ಪ್ರಧಾನಿಗೆ ಬರೆದ ಲೆಟರ್‌ನಲ್ಲಿ ಏನಿದೆ?

Bengaluru City

ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಸಿಎಂ 2ನೇ ಪತ್ರ- ಪ್ರಧಾನಿಗೆ ಬರೆದ ಲೆಟರ್‌ನಲ್ಲಿ ಏನಿದೆ?

Public TV
Last updated: May 23, 2024 11:30 am
Public TV
Share
2 Min Read
SIDDARAMAIAH LETTER PM MODI
SHARE

ಬೆಂಗಳೂರು: ಭೂಗತವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್  ರದ್ದತಿಗೆ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಎರಡನೇ ಪತ್ರವನ್ನು ಬರೆದಿದ್ದಾರೆ.

ಬುಧವಾರ ಎರಡನೇ ಪತ್ರ ಬರೆದಿರುವ ಸಿಎಂ, ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic Passport) ಅನ್ನು ರದ್ದುಗೊಳಿಸಬೇಕು. ಭಾರತಕ್ಕ ವಾಪಸ್ ಕರೆತರಲು ತ್ವರಿತ ಕ್ರಮವಹಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

Prajwal Revanna Pen Drive Case What is a diplomatic passport

ಪತ್ರದಲ್ಲೇನಿದೆ..?: ಪ್ರಜ್ವಲ್ ರೇವಣ್ಣ ಮೇಲೆ ಆರೋಪ, ಗಂಭೀರ ಘಟನೆಗಳ ಬಗ್ಗೆ ಗಮನ ಸೆಳೆಯಲು ನಾನು ಮತ್ತೊಮ್ಮೆ ನಿಮಗೆ ಬರೆಯುತ್ತೇನೆ. ಈ ಘಟನೆಗಳು ಕರ್ನಾಟಕ ರಾಜ್ಯದ ಜನರ ಆತ್ಮಸಾಕ್ಷಿಯನ್ನು ಬೆಚ್ಚಿ ಬೀಳಿಸಿದೆ. ಅಲ್ಲದೇ ರಾಷ್ಟ್ರವ್ಯಾಪಿ ಆತಂಕಕ್ಕೂ ಕಾರಣವಾಗಿವೆ. ಪ್ರಸ್ತುತ ಸಾರ್ವತ್ರಿಕ ಚುನಾವಣೆಯಲ್ಲಿ ಮರು ಚುನಾವಣೆಗೆ ಸ್ಪರ್ಧಿಸಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಪ್ರಧಾನಿ ಮೊಮ್ಮಗ ಏಪ್ರಿಲ್ 27 ರಂದು ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ಸಂಗತಿ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಕೇಸ್‌ – ಏನಿದು ರಾಜತಾಂತ್ರಿಕ ಪಾಸ್‌ಪೋರ್ಟ್‌? ವಿದೇಶದಲ್ಲಿ ಬಂಧನ ಸಾಧ್ಯವೇ? ಏನು ಸವಲತ್ತು ಸಿಗುತ್ತೆ?

I have written to Hon'ble PM Shri @narendramodi requesting the cancellation of the diplomatic passport of the accused, Mr. Prajwal Revanna. Prompt and concerted actions are needed to secure his return to India for facing the law. pic.twitter.com/mtNU9FrXr6

— Siddaramaiah (@siddaramaiah) May 23, 2024

2024 ರಲ್ಲಿ ಜರ್ಮನಿಗೆ ತನ್ನ ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವ D 1135500 ಅನ್ನು ಬಳಸಿಕೊಂಡು ದೇಶ ಬಿಟ್ಟು ಹೋಗಿದ್ದಾರೆ. ಅವರ ವಿರುದ್ಧ ಆರೋಪಗಳು ಬಂದಾಗ, ಹೇಯ ಕೃತ್ಯಗಳು ಹೊರಬಂದ ಬಳಿಕ ಮೊದಲ ಎಫ್‍ಐಆರ್ ದಾಖಲಾಗುವ ಕೆಲವೇ ಗಂಟೆಗಳ ಮೊದಲು ಪಲಾಯನ ಮಾಡಿದ್ದಾರೆ. ದೇಶದಿಂದ ಪಲಾಯನ ಮಾಡಲು ಮತ್ತು ಕ್ರಿಮಿನಲ್ ಮೊಕದ್ದಮೆಗಳಿಂದ ತಪ್ಪಿಸಿಕೊಳ್ಳಲು ತಮ್ಮ ರಾಜತಾಂತ್ರಿಕ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. 

ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವ ಮೂಲಕ ಕರ್ನಾಟಕ ಸರ್ಕಾರವು ತ್ವರಿತ ಕ್ರಮಗಳನ್ನು ಕೈಗೊಂಡಿದೆ. ಪ್ರಜ್ವಲ್ ರೇವಣ್ಣ ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಎಸ್‍ಐಟಿ ತನಿಖೆ ನಡೆಸುತ್ತಿದೆ. ಕ್ರಿಮಿನಲ್ ಆರೋಪಗಳನ್ನು ಎದುರಿಸಲು ಆರೋಪಿ ಉಪಸ್ಥಿತಿಗೆ ಎಸ್‍ಐಟಿ ಪ್ರಯತ್ನಿಸುತ್ತಿದೆ. ಸಿಆರ್‍ಪಿಸಿ ಕಲಂ 41ಎ ಅಡಿಯಲ್ಲಿ ತನಿಖಾಧಿಕಾರಿಯಿಂದ ಲುಕ್‍ಔಟ್ ಸುತ್ತೋಲೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಆಗಿದೆ.‌ ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ಹಿಂಪಡೆಯಲು ಕೋರ್ಟ್‌ನಿಂದ ಯಾವುದೇ ಆದೇಶ ಬಂದಿಲ್ಲ: MEA

ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರು ಇಂದಿಗೂ ತಲೆಮರೆಸಿಕೊಂಡಿದ್ದಾರೆ. ಇದು ತೀವ್ರ ಕಳವಳಕಾರಿ ಸಂಗತಿ. ಪ್ರಜ್ವಲ್ ರೇವಣ್ಣ ವಿರುದ್ಧದ ಎಫ್‍ಐಆರ್‍ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಹಿಳೆಯರ ವಸ್ತ್ರಾಪಹರಣ ಮತ್ತು ಬಲಿಪಶುಗಳಿಗೆ ಬೆದರಿಕೆ ಹಾಕುವ ಸಲುವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆಗಳನ್ನು ವೀಡಿಯೊ-ಗ್ರಾಫಿಂಗ್ ಸ್ವರೂಪದ ಆರೋಪಗಳಿವೆ. ಸವಲತ್ತುಗಳ ದುರುಪಯೋಗ ಮತ್ತು ಉದ್ದೇಶಪೂರ್ವಕವಾಗಿ ಕಾನೂನು ಪ್ರಕ್ರಿಯೆಗಳಿಗೆ ಅಸಹಕಾರ ತೋರುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರದಿಂದ ಗಂಭೀರವಾದ ಕ್ರಮ ತೆಗೆದುಕೊಳ್ಳಬೇಕು.

ಆರೋಪಿಯ ಉಪಸ್ಥಿತಿಯನ್ನು ತನಿಖೆ ಮತ್ತು ವಿಚಾರಣೆಯನ್ನು ಎದುರಿಸಲು ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವುದು ಸಾಧನವಾಗಿದೆ. ಇದನ್ನ ಒತ್ತಿ ಹೇಳುವ ಅಗತ್ಯವಿಲ್ಲ. ಇದೇ ರೀತಿಯ ಕಳವಳವನ್ನು ವ್ಯಕ್ತಪಡಿಸುವ ನನ್ನ ಹಿಂದಿನ ಪತ್ರವು ಸಹ ಪರಿಸ್ಥಿತಿಯ ಗಂಭೀರತೆಯನ್ನ ಪ್ರಸ್ತಾಪಿಸಿತ್ತು. ಆದರೆ ನನಗೆ ತಿಳಿದಿರುವಂತೆ, ಕ್ರಮ ತೆಗೆದುಕೊಳ್ಳದಿರುವುದು ನಿರಾಶಾದಾಯಕವಾಗಿದೆ. ಆದ್ದರಿಂದ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪಾಸ್‌ಪೋರ್ಟ್ ಕಾಯಿದೆ, 1967 ರ ಸೆಕ್ಷನ್ 10(3)(ಎಚ್) ಅಡಿಯಲ್ಲಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿ ತ್ವರಿತ ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ನಾನು ಮನವಿ ಮಾಡುತ್ತೇನೆ. ಕಾನೂನು ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ದೇಶಕ್ಕೆ ಸುರಕ್ಷಿತವಾಗಿ ಮರಳಬೇಕು ಎಂದು ಸಿಎಂ ತಮ್ಮ ಸುದೀರ್ಘ ಪತ್ರದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

TAGGED:bengaluruCentral govtnarendra modiPendrive Caseprajwal revannasiddaramaiahsitಎಸ್‍ಐಟಿಕೇಂದ್ರ ಸರ್ಕಾರನರೇಂದ್ರ ಮೋದಿಪೆನ್‌ಡ್ರೈವ್ ಕೇಸ್ಪ್ರಜ್ವಲ್ ರೇವಣ್ಣಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

Belagavi Liquor Seize
Belgaum

ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ – 25 ಲಕ್ಷಕ್ಕೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ, ಕಿರಾತಕ ಅರೆಸ್ಟ್

Public TV
By Public TV
2 seconds ago
pakistan army soldiers
Latest

ಬಲೂಚ್‌ ಬಂಡುಕೋರರ ದಾಳಿಗೆ 80ಕ್ಕೂ ಹೆಚ್ಚು ಪಾಕ್‌ ಸೈನಿಕರು ಸಾವು – 18 ಮಂದಿ ಒತ್ತೆಯಾಳು

Public TV
By Public TV
8 minutes ago
Hassan Suicide
Crime

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Public TV
By Public TV
49 minutes ago
Nirmala Sitharaman
Latest

ಇಂದು ನಿರ್ಮಲಾ ಸೀತಾರಾಮನ್‌ರಿಂದ ದಾಖಲೆಯ 9ನೇ ಕೇಂದ್ರ ಬಜೆಟ್ ಮಂಡನೆ

Public TV
By Public TV
57 minutes ago
Price Hike 3
Bengaluru City

ಬೇಸಿಗೆಗೂ ಮುನ್ನವೇ ಬೆಲೆ ಏರಿಕೆ ಹೊಡೆತ – ಅಕ್ಕಿ, ಬೇಳೆಕಾಳುಗಳ ಬೆಲೆ ಹೆಚ್ಚಳ!

Public TV
By Public TV
9 hours ago
Team India 3
Cricket

ಸಿಡಿಲಬ್ಬರದ ಬ್ಯಾಟಿಂಗ್‌, ಬೆಂಕಿ ಬೌಲಿಂಗ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ, 4-1 ರಲ್ಲಿ ಸರಣಿ ಜಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?