ಹುಬ್ಬಳ್ಳಿ: ತಮಿಳುನಾಡಿನ ತಿರ್ಪುರ್ ನ ಸಮಾವೇಶ ಮುಗಿಸಿಕೊಂಡು ಮೋದಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ನೇರವಾಗಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿಗಳನ್ನು ರಾಜ್ಯ ನಾಯಕರು ಬರ ಮಾಡಿಕೊಂಡರು. ಈ ವೇಳೆ ಸಂಸದ ಪ್ರಹ್ಲಾದ ಜೋಶಿ, ಧಾರವಾಡ ಜಿಲ್ಲೆಯ ಐದು ವರ್ಷದ ಬಿಜೆಪಿಯ ಸಾಧನೆಯ ಕೈಪಿಡಿ ಉಡುಗೊರೆಯಾಗಿ ನೀಡಿದರು.
ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇಂದು ಸೇರಿರುವ ಜನರನ್ನು ನೋಡಿದ್ರೆ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗೋದು ಸತ್ಯ ಎಂದು ಗೊತ್ತಾಗುತ್ತದೆ. ಕಾರ್ಯಕ್ರಮಕ್ಕೆ ಬಂದ ಎಲ್ಲ ಕಾರ್ಯಕರ್ತರಿಗೆ ಧನ್ಯವಾದಗಳು. ಸಮ್ಮಿಶ್ರ ಸರ್ಕಾರದ ನಾಯಕರು ತಾವೇ ಜಗಳ ಮಾಡಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲರು ಬಿಜೆಪಿಗೆ ಮತ ನೀಡಬೇಕೆಂದು ಮನವಿ ಮಾಡಿಕೊಂಡರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv