Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸ್ತ್ರೀಯನ್ನು ದೇವತೆಯಾಗಿ ಕಾಣುವ ಏಕೈಕ ಧರ್ಮ ನಮ್ದು, ಮುಟ್ಟಿಗೂ ಇದಕ್ಕೂ ಏನೂ ಸಂಬಂಧವಿಲ್ಲ: ಪ್ರತಾಪ್ ಸಿಂಹ

Public TV
Last updated: October 18, 2018 12:46 pm
Public TV
Share
2 Min Read
PRATAP SIMHA
SHARE

ಮೈಸೂರು: ನ್ಯಾಯಾಲಯಗಳು ಧರ್ಮಗ್ರಂಥ ಆಧಾರಿತ ಮತಗಳ ಕನ್ನಡಕ ಹಾಕಿಕೊಂಡು ನಂಬಿಕೆ, ವಿಶ್ವಾಸ, ವಿಧಿ-ವಿಧಾನ, ಆಚಾರ-ವಿಚಾರಗಳ ಆಧಾರಿತವಾಗಿರುವಂತಹ ಹಿಂದೂ ಧರ್ಮವನ್ನು ನೋಡಿ ತೀರ್ಪು ಕೊಡಲು ಪ್ರಾರಂಭ ಆಗಿರುವುದರಿಂದ ಈ ಸಮಸ್ಯೆ ಆರಂಭವಾಗಿದೆ ಅಂತ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

Sabarimala

ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಮಹಿಳೆಯ ಪ್ರವೇಶ ವಿಚಾರವಾಗಿ ಶಬರಿಮಲದ ನಿಳಕ್ಕಲ್ ಬಳಿ ನಡೆಯುತ್ತಿದ್ದ ಪ್ರತಿಭಟನೆ ಉಗ್ರ ರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಬುಕ್  ಬೇಸ್ ಡ್ ರಿಲೀಜನ್ ಗಳಲ್ಲಿ ಅವರು ಒಂದೇ ದೇವರನ್ನು ಪ್ರಾರ್ಥಿಸುತ್ತಿದ್ದಾರೆ. ಒಂದೇ ಧರ್ಮದ ಗ್ರಂಥದಲ್ಲಿ ಅವರು ನಂಬಿಕೆ ಇಟ್ಟುಕೊಂಡಿದ್ದಾರೆ. ಅವರು ಭಾರತದಲ್ಲಿ ಅಥವಾ ಮೆಕ್ಕಾದಲ್ಲಿದ್ದರೂ ಅದೇ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಆದ್ರೆ ಹಿಂದೂ ಧರ್ಮ ಹಾಗಲ್ಲ. ಈ ಧರ್ಮಕ್ಕೆ ಯಾರು ಪ್ರವಾದಿ ಇಲ್ಲ. ವಿಶ್ವಾಸ, ಆಚಾರ-ವಿಚಾರ ಪರಂಪರಗತವಾಗಿ ನಡೆದುಕೊಂಡು ಬಂದಂತಹ ಒಂದು ಪದ್ಧತಿಗಳಲ್ಲಿ ಹಿಂದೂ ಧರ್ಮವಿದೆ. ಇದನ್ನು ಅರ್ಥ ಮಾಡಿಕೊಳ್ಳುವುದರಲ್ಲಿ ಸುಪ್ರೀಂ ಕೋರ್ಟ್ ಈ ರೀತಿ ತೀರ್ಪು ಕೊಟ್ಟಿರುವುದು ಬಹಳ ದೊಡ್ಡ ಗೊಂದಲಕ್ಕೆ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹಿಂಸಾರೂಪಕ್ಕೆ ತಿರುಗಿದ ಶಬರಿಮಲೆ ಪ್ರತಿಭಟನೆ: ಗುಂಡಾಗಿರಿ ಪ್ರದರ್ಶಿಸಿದ ಪೊಲೀಸರು!

sabarimalatemple 759

ಕೆಲವೊಂದು ದೇವಸ್ಥಾನದಲ್ಲಿ ಮುಟ್ಟನ್ನು ಶ್ರೇಷ್ಟವೆಂದು ಪರಿಗಣಿಸಲಾಗುತ್ತದೆ. ಇಂತಹ ಏಕೈಕ ಧರ್ಮ ನಮ್ಮ ಹಿಂದೂ ಧರ್ಮವಾಗಿದೆ. ನವರಾತ್ರಿ ಸಂದರ್ಭದಲ್ಲೂ ದುಡ್ಡಿಗೆ ಲಕ್ಷ್ಮೀ, ವಿದ್ಯೆಗೆ ಸರಸ್ವತಿ, ಶಕ್ತಿಗೆ ದುರ್ಗೆಯನ್ನು ಆರಾಧಿಸುತ್ತೇವೆ. ಬೇರೆ ಯಾವುದೇ ಧರ್ಮದಲ್ಲಿ ಕೂಡ ದೇವರನ್ನು ಸ್ತ್ರೀ ಸ್ವರೂಪಿಯಾಗಿ ಕಾಣುವುದಿಲ್ಲ. ನಮ್ಮ ಧರ್ಮದಲ್ಲಿ ಮಾತ್ರ ಕಾಣುತ್ತೇವೆ. ಈ ಮೂಲಕ ನಮ್ಮ ಧರ್ಮದಲ್ಲಿ ಸ್ತ್ರೀಯರಿಗೆ ಯಾವುದೇ ತಾರತಮ್ಯ ತೋರಿಲ್ಲ. ಸ್ತ್ರೀಯರಿಗೆ ಅತೀ ಹೆಚ್ಚು ಗೌರವ ಕೊಟ್ಟಿದೆ ಅನ್ನೋದು ದ್ಯೋತಕವಾಗಿದೆ. ಕೋರ್ಟ್ ಇದನ್ನು ಅರ್ಥಮಾಡಿಕೊಳ್ಳಬೇಕು. ಹೀಗಾಗಿ ಕೊಟ್ಟ ತೀರ್ಪನ್ನು ಮರು ಪರಿಶೀಲಿಸಬೇಕು. ಈ ಮೂಲಕ ನಮ್ಮ ನಂಬಿಕೆಗೆ ಹೊಡೆತ ಕೊಡುವಂತಹ ಪ್ರಯತ್ನವನ್ನು ಯಾರೂ ಮಾಡಬಾರದು. 10 ರಿಂದ 50 ವಯೋಮಾನದ ಮಹಿಳೆಯರು ಶಬರಿಮಲೆಗೆ ಹೋಗುವಂತಹ ಪ್ರಯತ್ನವನ್ನು ಮಾಡಬಾರದು ಅಂತ ಹೇಳಿದ್ರು.  ಇದನ್ನೂ ಓದಿ: ತಲಾಖ್ ತೀರ್ಪಿಗೆ ಸ್ವಾಗತ, ಶಬರಿಮಲೆ ತೀರ್ಪಿಗೆ ವಿರೋಧ ಯಾಕೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

sabarimala 1

ನಮ್ಮಲ್ಲಿ ಯಾರು ಹೆಣ್ಣು ಮಕ್ಕಳಿಗೆ ತಾರತಮ್ಯವನ್ನು ಮಾಡುತ್ತಿಲ್ಲ. ಅಯ್ಯಪ್ಪ ಸ್ವಾಮಿ ಒಬ್ಬ ಬ್ರಹ್ಮಚಾರಿ. ಅಯ್ಯಪ್ಪನ ದೇವಾಲಯ ಇಡೀ ಭಾರತದಾದ್ಯಂತ ಇದೆ. ಹೀಗಾಗಿ ಈ ದೇವಾಲಯಕ್ಕೆ ಯಾವಾಗ ಬೇಕಾದರೂ ಮಹಿಳೆಯರು ಹೋಗಬಹುದು. ಅದಕ್ಕೆ ಯಾರೂ ಕೂಡ ನಿಷೇಧ ಹೇರಿಲ್ಲ. ಆದರೆ ಶಬರಿ ಮಲೆಯಲ್ಲಿ ಆತ ತಪಸ್ಸು ಮಾಡುತ್ತಿದ್ದ ಜಾಗ. ಆತ ಬ್ರಹ್ಮಚಾರಿಯಾಗಿರೋದ್ರಿಂದ ಅಲ್ಲಿ ಮಾತ್ರ ಮಹಿಳೆಯರ ಪ್ರವೇಶ ನಿಷೇಧವಾಗಿದೆ. 10 ವರ್ಷ ವಯಸ್ಸಿನೊಳಗಿನವರು ಹಾಗೂ 50 ವರ್ಷ ನಂತರದ ವಯಸ್ಸಿನವರು ಇಲ್ಲಿಗೆ ಪ್ರವೇಶಿಸಲು ಅವಕಾಶವಿದೆ. ನಮ್ಮ ಭಾರತದಲ್ಲಿ ಮಹಿಳೆಯರಲ್ಲಿ ನಾವು ತಾಯ್ತನವನ್ನು ಕಾಣ್ತೀವಿ. ಅದಕ್ಕೋಸ್ಕರ ಅವರಿಗೆ ಅವಕಾಶವಿದೆ. ಆದ್ರೆ ಈ ಮುಟ್ಟಿಗೆ ಇದಕ್ಕೂ ಏನೂ ಸಂಬಂಧವಿಲ್ಲ ಅಂತ ತಿಳಿಸಿದ್ರು.

ನೂರಾರು ವರ್ಷಗಳಿಂದ ನಡೆದುಕೊಂಡು ಬಂಂತಹ ಪದ್ಧತಿ ಇದಾಗಿದ್ದು, ಅದಕ್ಕೆ ತೊಂದರೆ ಕೊಡಲು ಯಾರು ಪ್ರಯತ್ನಿಸಬಾರದು ಅಂತ ಅವರು ಮನವಿಮಾಡಿಕೊಂಡರು. ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕೂಡ ಶಬರಿಮಲೆಗೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Entrympmysurupratap simhaPublic TVSabarimalawomenಪಬ್ಲಿಕ್ ಟಿವಿಪ್ರತಾಪ್ ಸಿಂಹಪ್ರವೇಶಮಹಿಳೆಯರುಮೈಸೂರುಶಬರಿಮಲೆಸಂಸದ
Share This Article
Facebook Whatsapp Whatsapp Telegram

Cinema Updates

disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
25 minutes ago
Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ
1 hour ago
sreeleela 4
ಬಾಲಿವುಡ್ ನಟನೊಂದಿಗೆ ಮದುವೆಗೆ ರೆಡಿಯಾದ್ರಾ ಶ್ರೀಲೀಲಾ?- ಅರಿಶಿಣ ಶಾಸ್ತ್ರದ ಫೋಟೋ ವೈರಲ್
1 hour ago
shivanna kamal haasan
ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
2 hours ago

You Might Also Like

madhu bangarappa 1
Belgaum

ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

Public TV
By Public TV
14 minutes ago
CRIME
Crime

ಅತ್ತಿಗೆಯ ಶಿರಚ್ಛೇದನ, ರುಂಡ ಹಿಡಿದು ಊರೆಲ್ಲಾ ಸುತ್ತಾಡಿ ಪೊಲೀಸರಿಗೆ ಶರಣಾದ ದುಷ್ಕರ್ಮಿ

Public TV
By Public TV
21 minutes ago
japan
Latest

ಜಪಾನ್‌ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

Public TV
By Public TV
44 minutes ago
tumakuru outrage erupts against hemavati express link canal project work temporarily halted
Districts

ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

Public TV
By Public TV
46 minutes ago
Shashi Tharoor 3
Latest

ಪಾಕ್ ಪರ ನೀಡಿದ್ದ ಹೇಳಿಕೆಗೆ ಶಶಿ ತರೂರ್ ಆಕ್ಷೇಪ ಬೆನ್ನಲ್ಲೇ ಕೊಲಂಬಿಯಾ ಯೂಟರ್ನ್ – ಭಾರತಕ್ಕೆ ರಾಜತಾಂತ್ರಿಕ ಯಶಸ್ಸು

Public TV
By Public TV
56 minutes ago
Narendra Modi 5
Latest

ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ – ಭಯೋತ್ಪಾದಕರಿಗೆ ಮೋದಿ ಮತ್ತೆ ವಾರ್ನಿಂಗ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?