ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡದ ಅರಿವಿಲ್ಲ ಅಂತ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರಿಗೆ ಪ್ರಣಾಳಿಕೆ, ಪ್ರನಾಳಿಕೆ ಈ ಪದಗಳಿಗೆ ವ್ಯತ್ಯಾಸವೇ ಗೊತ್ತಿಲ್ಲ. ಬೆಳಗಾವಿಯಲ್ಲಿ ನನಗೆ ಮರಾಠಿ ಬರೋಲ್ಲ ಕ್ಷಮಿಸಿ ಅಂತ ಭಾಷಣ ಮಾಡಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕನ್ನಡದ ಕಂದ ಸಿದ್ದರಾಮಯ್ಯ ಮರಾಠಿ ಜಪ – ಬೆಳಗಾವಿಯಲ್ಲಿ ಭಾಷೆ ಬರಲ್ಲ ಎಂದು ಕ್ಷಮೆಯಾಚನೆ
ಕನ್ನಡಿಗರಿಗೆ ಅವಮಾನ ಮಾಡಿದ್ದಕ್ಕೆ ಸಿಎಂ ಅವರು ಈ ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಬೆಳಗಾವಿಯಲ್ಲಿ ನಿಂತು ಮರಾಠ ಪ್ರೇಮ ಮೆರೆಯುವ ಇವರು ಕನ್ನಡ ಅಸ್ಮಿತೆ ಬಗ್ಗೆ ಮಾತನಾಡುತ್ತಾರೆ. ಇವರದ್ದು ಕೇವಲ ರಾಜಕೀಯಕ್ಕಾಗಿ ಕನ್ನಡ ಪ್ರೇಮ. ನಿಜವಾದ ಕನ್ನಡ ಪ್ರೇಮ ಇದ್ದೀದ್ದರೆ ಬೆಳಗಾವಿಯಲ್ಲಿ ಮರಾಠಿಗರ ಕ್ಷಮೆ ಕೇಳುತ್ತಿರಲಿಲ್ಲ. ರಾಜ್ಯದ ಜನರಿಗೆ ಸಿದ್ದರಾಮಯ್ಯರ ಬೋಗಸ್ ಕನ್ನಡ ಪ್ರೇಮ ಅರ್ಥವಾಗಿದೆ. ಈ ಚುನಾವಣೆಯಲ್ಲಿ ಸಿದ್ದರಾಮಯ್ಯರಿಗೆ ಕನ್ನಡಿಗರೇ ಪಾಠ ಕಲಿಸುತ್ತಾರೆ ಅಂತ ಸಿಎಂ ವಿರುದ್ಧ ಹರಿಹಾಯ್ದರು.