Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಪ್ರಧಾನಿ ಕಾಲೆಳೆದ್ರಾ ಪ್ರತಾಪ್ ಸಿಂಹ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಾಜಿ ಪ್ರಧಾನಿ ಕಾಲೆಳೆದ್ರಾ ಪ್ರತಾಪ್ ಸಿಂಹ?

Districts

ಮಾಜಿ ಪ್ರಧಾನಿ ಕಾಲೆಳೆದ್ರಾ ಪ್ರತಾಪ್ ಸಿಂಹ?

Public TV
Last updated: December 18, 2018 11:21 am
Public TV
Share
3 Min Read
HDD PRATAP copy
SHARE

ಮೈಸೂರು: ಕೊಡಗಿನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ವೇದಿಕೆಯಲ್ಲೇ ತಿರುಗೇಟು ನೀಡಿದ್ದ ಮೈಸೂರು ಸಂಸದ ಪ್ರತಾಪ ಸಿಂಹ ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಫೇಸ್ ಬುಕ್ ನಲ್ಲಿ ಟಾಂಗ್ ಕೊಟ್ಟಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

ಮಧ್ಯ ಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಶಿವರಾಜ್ ಸಿಂಗ್ ಭಾಗಿಯಾಗಿರುವ ವಿಡಿಯೋ ಹಾಕಿ ಪರೋಕ್ಷವಾಗಿ ದೇವೇಗೌಡರಿಗೆ ಟಾಂಗ್ ಕೊಡುವಂತೆ ಸಾಲನ್ನು ಬರೆದಿದ್ದಾರೆ.

hdd

ಪೋಸ್ಟ್ ನಲ್ಲಿ ಏನಿದೆ?
ಕಮಲ್ನಾಥ್ ಮತ್ತು ಸಿಂಧಿಯಾ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್! ಮೋದಿ ಗೆದ್ದರೆ ನಾ ಅಲ್ಲಿಗೆ ಹೋಗ್ತೇನೆ, ಇಲ್ಲಿಗೆ ಹೋಗ್ತೇನೆ, ಹಾಗಾಗುತ್ತೆ, ಹೀಗಾಗುತ್ತೆ ಅನ್ನೋರಿಗೆ ಸಾರ್ವಜನಿಕ ಜೀವನದಲ್ಲಿ ಹೇಗೆ ಸೌಜನ್ಯದಿಂದ ನಡೆದುಕೊಳ್ಳಬಹುದು ಎಂಬುದಕ್ಕೊಂದು ಮೇಲ್ಪಂಕ್ತಿ ಎಂದು ಬರೆದುಕೊಂಡಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಮೋದಿ ಪ್ರಧಾನಿಯಾದರೆ ನಾನು ಕರ್ನಾಟಕವನ್ನು ತೊರೆಯುತ್ತೇನೆ ಎಂದು ಹೇಳಿಕೆ ನೀಡಿದ್ದು ಭಾರೀ ಚರ್ಚೆಯಾಗಿತ್ತು.

ಕೊಡಗಿನಲ್ಲೇನಾಗಿತ್ತು..?
ಕೊಡಗಿನ ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಮನೆನಿರ್ಮಾಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮದ ಸಂದರ್ಭದಲ್ಲಿ ವೇದಿಕೆಯಲ್ಲಿಯೇ ಸಿಎಂ ಕುಮಾರಸ್ವಾಮಿ ಮತ್ತು ಸಂಸದ ಪ್ರತಾಪ್ ಸಿಂಹ ನಡುವೆ `ಅಪ್ಪ, ಅಮ್ಮ’ ವಿಚಾರಕ್ಕೆ ಸಂಬಂಧಿಸಿದಂತೆ ವಾರ್ ನಡೆದಿತ್ತು. ಜಂಬೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ಮಾತನಾಡುವುದಕ್ಕೆ ಮೊದಲು ಸಚಿವ ಸಾರಾ ಮಹೇಶ್ ಹಾಗೂ ಡಿಸಿಎಂ ಪರಮೇಶ್ವರ್ ಅವರು ಕೊಡಗು ಪರಿಹಾರಕ್ಕೆ ರಾಜ್ಯ ಸರ್ಕಾರ ಎಷ್ಟು ಕೊಟ್ಟಿದೆ ಎಂಬುವುದನ್ನು ಪ್ರಸ್ತಾಪ ಮಾಡಿದ್ದರು. ಅಲ್ಲದೇ ಕೇರಳ ಮಾದರಿಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ್ಕೆ ನೆರವು ನೀಡಬೇಕೆಂದು ಹೇಳಿದ್ದರು.

PRATAP SIMHA

ನಂತರ ಮಾತನಾಡಿದ ಪ್ರತಾಪ್ ಸಿಂಹ್, ಕೇಂದ್ರ ಸರ್ಕಾರ ಕೂಡ ಜಿಲ್ಲೆಯ ಜನರಿಗೆ ಸ್ಪಂದಿಸಿದೆ. ಎನ್‍ಡಿಆರ್ ಎಫ್ ಪಡೆ ಬೇಕೆಂದು ನಾನು ನಿರ್ಮಲಾ ಸೀತಾರಾಮನ್ ಅವರನ್ನು ಕೇಳಿದಾಗ ನಮಗೆ ಯಾವುದೇ ಪ್ರಕ್ರಿಯೆ ಬಂದಿಲ್ಲ ಎಂದು ಹೇಳಿದರು. ಇದಕ್ಕೆ ನಾನು ಕೂಡಲೇ ನನ್ನದೇ ಲೇಟರ್ ಹೆಡ್ ಬಳಸಿ ಮನವಿ ಮಾಡಿದ್ದಕ್ಕೆ ಕೂಡಲೇ ಎನ್‍ಡಿಆರ್ ಎಫ್ ತುಕಡಿ ಕೊಡಗಿಗೆ ಬಂದಿದೆ. ಶುಂಠಿಕೊಪ್ಪದಿಂದ ಜೋಡುಪಾಲದವರೆಗೆ ರಸ್ತೆ ಹಾಳಾಗಿದ್ದು ಆ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ರಿಪೇರಿ ಮಾಡಿದೆ ಎಂದು ತಿಳಿಸಿದರು.

ಇದರ ಜೊತೆಯಲ್ಲಿ ಸಚಿವರಿಗೆ ಟಾಂಗ್ ಎನ್ನುವಂತೆ, ಶಾಲೆಗೆ ಮಕ್ಕಳನ್ನು ಸೇರಿಸುವಾಗ ಅಪ್ಪ, ಅಮ್ಮ ಯಾರು ಅಂತ ಕೇಳುತ್ತಾರೆ. ಅದಕ್ಕೆ ಕೇಂದ್ರ ಎಷ್ಟು ಕೊಟ್ಟಿದೆ ಎಂದು ಹೇಳಿದ್ದೇನೆ. ಕೇರಳಕ್ಕೆ ನೀಡಿದಂತೆ ಕರ್ನಾಟಕದ ಕೊಡಗು ಪ್ರವಾಹಕ್ಕೂ ಕೇಂದ್ರ 546 ಕೋಟಿ ರೂ. ಗಳನ್ನು ನೀಡಿದೆ. ಈ ಕುರಿತು ಡಿಸಿಎಂ ಪ್ರಸ್ತಾಪ ಮಾಡಿದ್ದಾರೆ. ಶಾಲೆಗೆ ಮಕ್ಕಳನ್ನು ಸೇರಿಸುವಾಗ ಅಪ್ಪ, ಅಮ್ಮ ಯಾರು ಅಂತ ಕೇಳುತ್ತಾರೆ ಅದ್ದರಿಂದಲೇ ನಾನು ಈ ಬಗ್ಗೆ ಮಾಹಿತಿ ನೀಡುತ್ತಿದ್ದೇನೆ ಎಂದರು.

CM HDK PRATAP SIMHA 1 copy

ಪ್ರತಾಪ್ ಸಿಂಹ ಅವರು ಈ ವಿಚಾರವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡುತ್ತಿದಂತೆ ಕೆಂಡಾಮಂಡಲರಾದ ಸಿಎಂ ನೇರ ಸಂಸದರತ್ತ ಕೈ ಸನ್ನೆ ಮಾಡಿ ನಿಲ್ಲಿಸಿ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ಆಯ್ತು ಆಯ್ತು ಎಂದರು. ಈ ವೇಳೆ ಸಿಎಂ ಪಕ್ಕದಲ್ಲೇ ಕುಳಿತಿದ್ದ ಸಚಿವ ಸಾ ರಾ ಮಹೇಶ್ ವಿರುದ್ಧ ರೇಗಿದ ಸಿಎಂ ಎಚ್‍ಡಿಕೆ, ಸಂಸದರಿಗೆ ಭಾಷಣ ನಿಲ್ಲಿಸುವಂತೆ ಹೋಗಿ ಹೇಳಿ ಎಂದು ಸೂಚನೆ ನೀಡಿದರು.

ಭಾಷಣ ಮುಗಿಸಿ ತಮ್ಮ ಕುರ್ಚಿಯ ಬಳಿ ಪ್ರತಾಪ್ ಸಿಂಹ ಬಂದ ಬಳಿಕವೂ ಸಿಎಂ ಎಚ್‍ಡಿಕೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಸೈಲೆಂಟ್ ಆಗಿ ಕುಳಿತ್ತಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:facebookformer pmHD Devegowdampmysurupratap simhaPublic TVಎಚ್.ಡಿ. ದೇವೇಗೌಡಪಬ್ಲಿಕ್ ಟಿವಿಪ್ರತಾಪ್ಫೇಸ್ ಬುಕ್ಮಾಜಿ ಪ್ರಧಾನಿಮೈಸೂರುಸಂಸದಸಿಂಹ
Share This Article
Facebook Whatsapp Whatsapp Telegram

Cinema news

Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

H.D Kumaraswamy 1
Districts

ನನಗೆ ಮಾತಾಡೋ ಚಪಲ, ಅವನಿಗೆ ಲೂಟಿ ಚಪಲ: ಡಿಕೆ ಬ್ರದರ್ಸ್ ವಿರುದ್ಧ ಏಕವಚನದಲ್ಲೇ ಹೆಚ್‌ಡಿಕೆ ವಾಗ್ದಾಳಿ

Public TV
By Public TV
35 minutes ago
Bengaluru police crack down on one way violations nearly 11498 cases booked in four days
Bengaluru City

ಬೆಂಗಳೂರಿನಲ್ಲಿ ಒನ್‌ ವೇ ಸಂಚಾರದ ವಿರುದ್ಧ ಆಪರೇಷನ್‌ – ಬರೋಬ್ಬರಿ 11,498 ಕೇಸ್ ದಾಖಲು

Public TV
By Public TV
43 minutes ago
Zameers comment on Kumaraswamy wrong says Priyank Kharge
Kalaburagi

ಬಿಜೆಪಿ ಅವ್ರಿಗೆ ಕಾಂಗ್ರೆಸ್, ಮುಸ್ಲಿಂ ಬಿಟ್ಟು ಬೇರೆ ಮಾತನಾಡೋಕೆ ಬರಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
47 minutes ago
DK Shivakumar 1 1
Bengaluru City

ವಿದೇಶದಲ್ಲಿ ನಾನು ಭಾರತದ ವಿರುದ್ಧ ಮಾತನಾಡಲ್ಲ: ಡಿಕೆಶಿ

Public TV
By Public TV
52 minutes ago
C.T. Ravi
Chikkamagaluru

ಮಕ್ಕಳ ಕೈಗೆ ಕಲ್ಲು ಕೊಟ್ಟು ಹೊಡೆಸುತ್ತಿರುವವರಿಗೆ ನೋಟಿಸ್‌ ಕೊಡಿ: ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ

Public TV
By Public TV
1 hour ago
mumbai professor murder
Crime

ರೈಲ್ವೆ ನಿಲ್ದಾಣದಲ್ಲಿ ಪ್ರೊಫೆಸರ್‌ಗೆ ಚಾಕುವಿನಿಂದ ಇರಿದು ಕೊಲೆ; ಆರೋಪಿ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?