Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ನಿಂತರೆ ಮಂಡ್ಯದಿಂದಲೇ.. ಇಲ್ಲ ಅಂದ್ರೆ ನನಗೆ ರಾಜಕೀಯವೇ ಬೇಡ: ಸುಮಲತಾ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ನಿಂತರೆ ಮಂಡ್ಯದಿಂದಲೇ.. ಇಲ್ಲ ಅಂದ್ರೆ ನನಗೆ ರಾಜಕೀಯವೇ ಬೇಡ: ಸುಮಲತಾ ಮಾತು

Bengaluru City

ನಾನು ನಿಂತರೆ ಮಂಡ್ಯದಿಂದಲೇ.. ಇಲ್ಲ ಅಂದ್ರೆ ನನಗೆ ರಾಜಕೀಯವೇ ಬೇಡ: ಸುಮಲತಾ ಮಾತು

Public TV
Last updated: January 25, 2024 7:09 pm
Public TV
Share
3 Min Read
sumalatha 1
SHARE

– ಬಿಜೆಪಿ ಮಂಡ್ಯ ಉಳಿಸಿಕೊಳ್ಳುತ್ತೆ, ನನಗೆ ಟಿಕೆಟ್ ಸಿಗುತ್ತೆ ಎಂಬ ವಿಶ್ವಾಸವಿದೆ
– ಲೋಕಸಭಾ ಚುನಾವಣೆಗೆ ಮಂಡ್ಯದಿಂದ ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿದ ಸಂಸದೆ

ಬೆಂಗಳೂರು: ನಾನು ನಿಂತರೆ ಮಂಡ್ಯದಿಂದಲೇ. ಇಲ್ಲ ಅಂದರೆ ನನಗೆ ರಾಜಕೀಯವೇ ಬೇಡ ಎಂದು ಸಂಸದೆ ಸುಮಲತಾ (Sumalatha) ಮುಂಬರುವ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾತನಾಡಿದರು, ಒಂದು ವೇಳೆ ಜೆಡಿಎಸ್‌ಗೆ ಮಂಡ್ಯ ಟಿಕೆಟ್ ಹೋದರೆ ಮುಂದಿನ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ರೀತಿ ಆದಾಗ ಮುಂದೆ ನೋಡೋಣ. ಆಗ ನನ್ನ ನಿಲುವು ಹೇಳ್ತೀನಿ. ಆದರೆ ಈಗಲೂ ನನಗೆ ವಿಶ್ವಾಸ ಇದೆ. ಬಿಜೆಪಿ ಮಂಡ್ಯ ಉಳಿಸಿಕೊಳ್ಳುತ್ತೆ. ನನಗೆ ಟಿಕೆಟ್ ಸಿಗುತ್ತೆ ಎಂದು ತಿಳಿಸಿದ್ದಾರೆ.

Sumalatha

ಇವತ್ತು ಬಿಜೆಪಿ ಮುಖಂಡರು, ವಿಧಾನಸಭೆಯಲ್ಲಿ ಸೋತ ಅಭ್ಯರ್ಥಿಗಳು ಬಂದಿದ್ದರು. ಲೋಕಸಭೆ ಚುನಾವಣೆ ಬರ್ತಿದೆ. ಯಾವ ನಿರ್ಧಾರ ಮಾಡಬೇಕು ಅಂತಾ ಚರ್ಚೆ ಮಾಡಿದ್ವಿ. ಯಾವ ರೀತಿ ಕೆಲಸ ಮಾಡಬೇಕು ಎಂತಲೂ ಚರ್ಚೆ ಮಾಡಿದ್ವಿ. ಸಿಟ್ಟಿಂಗ್ ಎಂಪಿ ಎನ್ನುವ ಸ್ಥಾನ ಇದ್ದೇ ಇರುತ್ತೆ. ಸಿಟ್ಟಿಂಗ್ ಎಂಪಿಗೆ ಮೊದಲ ಪ್ರಾಶಸ್ತ್ಯ ಅಂತಾ ಎಲ್ಲಾ ಪಕ್ಷದಲ್ಲಿ ಇದೆ. ನಮ್ಮ ಕಾರ್ಯಕರ್ತರು ಅದನ್ನ ಬಯಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಉತ್ತಮ ಮತ ಬಂದಿದೆ. ಈ ವಾತಾವರಣದಲ್ಲಿ ಎಲ್ಲರ ಆಸೆ ಬಿಜೆಪಿಯನ್ನ ಮಂಡ್ಯದಲ್ಲಿ ಉಳಿಸಬೇಕು. ಎಂಪಿ ಸೀಟು ಉಳಿಸಿಕೊಳ್ಳಬೇಕು ಅಂತಾ ಎಲ್ಲರು ಹೇಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಧಿಕೃತವಾಗಿ ಬಿಜೆಪಿಯಿಂದ ನಮಗೆ ಸೂಚನೆ ಬಂದಿಲ್ಲ. ಹೈಕಮಾಂಡ್ ಎಲ್ಲೂ ಕೂಡಾ ಟಿಕೆಟ್ ಅವರಿಗೆ ಅಂತಾ ಹೇಳಿಲ್ಲ. ಜೆಡಿಎಸ್‌ಗೂ ಹೇಳಿಲ್ಲ, ನಮಗೂ ಹೇಳಿಲ್ಲ. ಮೈತ್ರಿ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಅದರ ಬಗ್ಗೆ ನಾನು ಮಾತಾಡೊಲ್ಲ. ನನ್ನ ಗಮನವೇನಿದ್ರು ನನ್ನ ಕ್ಷೇತ್ರ, ನನ್ನ ಜಿಲ್ಲೆ. ನನ್ನ ಕೆಲಸದ ರಿಪೋರ್ಟ್ ನಿಮ್ಮ ಮುಂದೆ ಇದೆ. ಎಲ್ಲಾ ಎಂಪಿಗಳ ರೀತಿ ಕೆಲಸ ಮಾಡಿ ನಾನು ಪ್ರೂವ್ ಮಾಡಿದ್ದೇನೆ. ನನ್ನ ಬಗ್ಗೆ ಎಲ್ಲೂ ಕಪ್ಪು ಚುಕ್ಕಿ ಇಲ್ಲ. ಒಂದೇ ಒಂದು ಕಳಂಕ ನನ್ನ ಮೇಲೆ ಇದೆ. ಇದು ಬಿಜೆಪಿಗೂ ಗೊತ್ತಿದೆ ಎಂದು ಹೇಳಿದ್ದಾರೆ.

AMITSHAH HD KUMARASWAMY

ಬಿಜೆಪಿನೇ ಮಂಡ್ಯ ಸೀಟು ಉಳಿಸುಕೊಳ್ಳುತ್ತೆ ಅನ್ನೋ ನಂಬಿಕೆ ನನಗೆ ಇದೆ. ಬಿಜೆಪಿ ಹೈಕಮಾಂಡ್ ನನ್ನ ಬಳಿ ಉತ್ತಮ ಬಾಂಧವ್ಯ ಇಟ್ಟುಕೊಂಡಿದೆ. ನಾನು ಭರವಸೆಯಿಂದ ಹೇಳ್ತೀನಿ. ಬಿಜೆಪಿ ಮಂಡ್ಯ ಸೀಟು ಉಳಿಸಿಕೊಳ್ಳುತ್ತೆ. ಕುಮಾರಸ್ವಾಮಿ ಭೇಟಿ ಮಾಡಿದ್ರೆ ನನಗೇನೂ ಅಭ್ಯಂತರ ಇಲ್ಲ. ಕರ್ಟಸಿ ಕಾಲ್ ಆಗಿ ಬಂದು ಭೇಟಿ ಆದ್ರೆ ನನ್ನದೇನು ಅಭ್ಯಂತರ ಇಲ್ಲ. ನಾನು ರಾಜಕೀಯಕ್ಕೆ ಬಂದಿದ್ದೇ ಮಂಡ್ಯದಿಂದ. ಅಂಬರೀಶ್ 4 ಬಾರಿ ಗೆದ್ದಿದ್ದರು. ನನಗೂ ಜನ ಹೆಚ್ಚು ಮತ ಕೊಟ್ರು. ಅಂತಹ ಅಭಿಮಾನ ಬಿಟ್ಟು ಹೋಗೊಲ್ಲ ಎಂದು ತಿಳಿಸಿದ್ದಾರೆ.

ನಾನು ನಿಂತರೆ ಮಂಡ್ಯದಿಂದಲೇ. ಇಲ್ಲ ಅಂದರೆ ನನಗೆ ರಾಜಕೀಯವೇ ಬೇಡ. ಅಂಬರೀಶ್ ಅವರು ನನಗೆ ಜವಾಬ್ದಾರಿ ಬಿಟ್ಟು ಹೋಗಿದ್ದಾರೆ. ಅಂಬರೀಶ್ ಕನಸು ನಾನು ಪೂರೈಕೆ ಮಾಡಬೇಕು. ರಾಜಕೀಯವಾಗಿ ಏನೇನೋ ಆಗೋ ಆಸೆ ನನಗೆ ಇಲ್ಲ. ನಾನು ಮಂಡ್ಯದಿಂದ ಮಾತ್ರ ನಿಲ್ಲೋದು. ಬೇರೆ ಕ್ಷೇತ್ರ ನಿಲ್ಲೋದಿಲ್ಲ. ಬಿಜೆಪಿಯವರು ನನಗೆ ಟಿಕೆಟ್ ಕೊಡ್ತಾರೆ ಅನ್ನೋ ನಂಬಿಕೆ ಇದೆ. ಮಂಡ್ಯದ ಬಗ್ಗೆ ಹೈಕಮಾಂಡ್ ನನ್ನ ಜೊತೆ ಮಾತಾಡಿಲ್ಲ. ಸೀಟು ಹಂಚಿಕೆ ಮಾತುಕತೆ ಇನ್ನೂ ಆಗಿಲ್ಲ ಎಂದಿದ್ದಾರೆ.

ನಾನು ಹಿಂದೆ ಕಾಂಗ್ರೆಸ್‌ನಿಂದಲೂ ಟಿಕೆಟ್ ಕೇಳಿರಲಿಲ್ಲ. ಕಾಂಗ್ರೆಸ್‌ನಲ್ಲಿ ನನ್ನ ಅಭಿಮಾನಿಗಳು ಇದ್ದಾರೆ. ಅವರು ಹೇಳಿದ್ದಾರೆ ಕಾಂಗ್ರೆಸ್‌ಗೆ ಬನ್ನಿ ಅಂತಾ. ನಾನೇ ದೊಡ್ಡ ಲೀಡರ್ ಅಂತ ನಾನು ನಡೆದಿಕೊಂಡಿಲ್ಲ. ನನ್ನ ಕೆಲಸ ನಿಮ್ಮ ಮುಂದೆ ಇದೆ. ಅದನ್ನ ಇಟ್ಟು ನಾನು ಕೇಳ್ತೀನಿ. ಮಂಡ್ಯ ಜನ ನನ್ನ ಜೊತೆ ಇದ್ದಾರೆ. ಕಾಂಗ್ರೆಸ್‌ನಿಂದ ನನಗೂ ಆಫರ್ ಬಂದಿದ್ದು ನಿಜ. ಟಿಕೆಟ್ ಕೊಡಿಸ್ತೀವಿ ಅಂತಾ ಹೇಳಿದ್ದಾರೆ. ಆದರೆ ನಾನು ಬಿಜೆಪಿ ಜೊತೆ ಇದ್ದೇನೆ ಅಂತಾ ಅವರಿಗೆ ಗೊತ್ತಿದೆ. ನನ್ನ ಕ್ಷೇತ್ರ ಮಂಡ್ಯ. ಅದನ್ನ ಬಿಟ್ಟು ಎಲ್ಲೂ ಹೋಗೊಲ್ಲ. ರಾಜ್ಯಸಭೆಗೆ ಹೋಗ್ತಾರೆ ಅನ್ನೋದು ರೂಮರ್ಸ್. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗೊಲ್ಲ. ಸ್ಪರ್ಧೆ ಮಾಡೋದಾದ್ರೆ ಮಂಡ್ಯದಿಂದ ಮಾತ್ರ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

TAGGED:bjpjdsmandyaSumalathaಜೆಡಿಎಸ್ಬಿಜೆಪಿಮಂಡ್ಯಸುಮಲತಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
2 minutes ago
West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
28 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
31 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
54 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
56 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?