ಅಯ್ಯೋ ಇಲ್ಲ ಸರ್, ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ: ಸಲೀಂ, ಉಗ್ರಪ್ಪ ಸಮರ್ಥನೆ

Public TV
2 Min Read
SALIM GURAPPA 3

ಬೆಂಗಳೂರು: ಅಯ್ಯೋ ಇಲ್ಲ ಸರ್.. ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ. ಅದು ನಾನು ತಪ್ಪಾಗಿ ಹೇಳಿದ್ದೇನೆ ಎಂದು ಹೇಳುವ ಮೂಲಕ ಕೆಪಿಸಿಸಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ಸಮರ್ಥನೆ ಮಾಡಿಕೊಂಡಿದ್ದಾರೆ.

ಡಿಕೆಶಿಯವರು ಒಳ್ಳೆಯ ನಾಯಕ. ವಿಜಯೇಂದ್ರ ಬಂದ ಬಳಿಕ ಕಲೆಕ್ಷನ್ ಜಾಸ್ತಿಯಾಗಿದೆ. ಇದನ್ನು ಇಲ್ಲಿಗೆ ಬಿಟ್ಟು ಬಿಡಿ ಎಂದು ಕಾಂಗ್ರೆಸ್ ನಾಯಕರು ಪಬ್ಲಿಕ್ ಟಿವಿ ಜೊತೆ ಎಕ್ಸ್ ಕ್ಲೂಸೀವ್ ಆಗಿ ಮಾತನಾಡಿದ್ದಾರೆ.

SALIM GURAPPA 1

ನಾವು ಹೇಳಿದ ವಿಚಾರವಷ್ಟೇ ವರದಿ ಮಾಡಬೇಕಿತ್ತು. ನಾವು ಮಾತಾಡಿದ್ದು ಇವತ್ತಿನ ಪರಿಸ್ಥಿತಿ ಅಷ್ಟೇ ಎಂದು ಹೇಳುವ ಮೂಲಕ ಉಗ್ರಪ್ಪ ಅವರು ಮಾಧ್ಯಮಗಳಿಗೆ ನೀತಿ ಪಾಠ ಮಾಡಿದ್ದಾರೆ.

ಹೇಳಿದ್ದೇನು..?
ರಾಜ್ಯ ರಾಜಕಾರಣದಲ್ಲಿ ಪರ್ಸಂಟೇಜ್ ಕೋಲಾಹಲ ಎಬ್ಬಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಪರ್ಸಂಟೇಜ್ ಆರೋಪವೊಂದು ಕೇಳಿಬಂದಿದ್ದು, ಕಾಂಗ್ರೆಸ್ ನಾಯಕರೇ ಈ ಕಹಾನಿಯನ್ನು ಬಿಚ್ಚಿಟ್ಟಿದ್ದಾರೆ. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ, ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ನಡುವೆ ಸಂಭಾಷಣೆ ನಡೆದಿದೆ. ಡಿಕೆಶಿ ಅವರು ಕಲೆಕ್ಷನ್ ಗಿರಾಕಿ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹೇಳಿರುವುದು ಇದೀಗ ಭಾರೀ ಚರ್ಚೆಯಾಗುತ್ತಿದೆ.

SALIM GURAPPA 2

ಜಲಸಂಪನ್ಮೂಲ ಇಲಾಖೆಯಲ್ಲಿ ಹೇಗೆ ಪರ್ಸಂಟೇಜ್ ಫಿಕ್ಸಾಗುತ್ತೆ ಎಂದು ಮಾತನಾಡಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಪರ್ಸಂಟೇಜ್ ಹೇಗೆ ಹಚ್ಚಾಯ್ತು..?, ಜಲಸಂಪನ್ಮೂಲ ಇಲಾಖೆಯಲ್ಲಿ ಮೊದಲೆಲ್ಲಾ 6 ರಿಂದ 8 ಪರ್ಸೆಂಟ್ ಇತ್ತು. ಡಿಕೆಶಿ ಬಂದ ಮೇಲೆ 12 ಪರ್ಸೆಂಟ್ ಮಾಡಿದರು ಎಂದು ಸಲೀಂ ಅವರು ಉಗ್ರಪ್ಪ ಬಳಿ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

ಇದೇ ವೇಳೆ ಜಲ ಸಂಪನ್ಮೂಲ ಇಲಾಖೆಯ ಕಾಂಟ್ರಾಕ್ಟರ್ ಗಳಾಗಿರುವ ಉಪ್ಪಾರ್, ಜೀ.ಶಂಕರ್ ಹನುಮಂತಪ್ಪರ ಬಗ್ಗೆಯು ಪ್ರಸ್ತಾಪ ಮಾಡಿದ್ದಾರೆ. ವಾರದ ಹಿಂದೆ ಈ ಕಾಂಟ್ರಕ್ಟರ್ ಗಳ ಮೇಲೆ ಐಟಿ ದಾಳಿ ನಡೆದಿತ್ತು. ಪ್ರೆಸ್ ಮೀಟ್ ಗೂ ಮುನ್ನ ಈ ವಿಚಾರದ ಬಗ್ಗೆ ಸಲೀಂ ಹಾಗೂ ಉಗ್ರಪ್ಪ ಚರ್ಚೆ ನಡೆಸಿದ್ದರು. ಡಿ.ಕೆ.ಶಿವಕುಮಾರ್ ಜಲ ಸಂಪನ್ಮೂಲ ಸಚಿವರಾಗಿದ್ದಾಗಲೂ ಇದೆ ಕಾಂಟ್ರಾಕ್ಟರ್ ಗಳು ಇದ್ದರು. ಡಿಕೆಶಿ ಆಪ್ತ ಮುಳಗುಂದ ಸಾಕಷ್ಟು ದುಡ್ಡು ಮಾಡಿದ್ದಾರೆ. ಮುಳಗುಂದ 50-100 ಕೋಟಿ ಮಾಡಿದ್ದಾನೆ ಅಂದ್ರೆ ಡಿಕೆ ಹತ್ತಿರ ಎಷ್ಟಿರಬೇಕು ಲೆಕ್ಕ ಹಾಕಿ. ಡಿಕೆ ಬರೀ ಕಲೆಕ್ಷನ್ ಗಿರಾಕಿ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *