ಮುಂಬೈ: ಸಿಎಸ್ಕೆ ತಂಡದ ನಾಯಕ ಎಂಎಸ್ ಧೋನಿ ಮತ್ತು ಚೆನ್ನೈ ತಂಡದ ಆಟಗಾರರು ಇಂದು ರಂಜಾನ್ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ತೆಲಂಗಾಣ ರಾಜ್ಯದ ಅಧಿಕೃತ ಚಂದ್ರ-ವೀಕ್ಷಕ ಸಮಿತಿಯು ಮೇ 2, ಸೋಮವಾರ, ಈದ್-ಉಲ್-ಫಿತರ್ ಎಂದು ಘೋಷಿಸಿತ್ತು. ಇಸ್ಲಾಮಿಕ್ ಕ್ಯಾಲೆಂಡರ್ನ 10 ನೇ ತಿಂಗಳಾಗಿರುವ ಶವ್ವಾಲ್ನ ಅರ್ಧಚಂದ್ರಾಕೃತಿಯು ಹೈದರಾಬಾದ್ನಲ್ಲಿ ಮತ್ತು ದೇಶದ ಇತರ ಭಾಗಗಳಲ್ಲಿ ಗೋಚರಿಸದ ಕಾರಣ ಮಂಗಳವಾರ ಆಚರಿಸಲಾಗುತ್ತಿದೆ. ಇದನ್ನೂ ಓದಿ: ರಾಜಸ್ಥಾನಕ್ಕೆ ಮುಳುವಾದ ರಿಂಕು, ರಾಣಾ ಜೊತೆಯಾಟ – ಕೋಲ್ಕತ್ತಾಗೆ 7 ವಿಕೆಟ್ಗಳ ಜಯ
View this post on Instagram
ಚೆನ್ನೈ ತಂಡದ ಆಟಗಾರರಾದ ಧೋನಿ, ರಾಬಿನ್ ಉತ್ತಪ್ಪ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ ಸೇರಿದಂತೆ ಅನೇಕ ಆಟಗಾರರು ಕೆಲವು ಬಗೆ ಬಗೆಯ ಖಾದ್ಯಗಳನ್ನು ಸೇವಿಸಿ ಸಂಭ್ರಮಿಸಿದ್ದಾರೆ.
ಐಪಿಎಲ್ 2022ರ ಆವೃತ್ತಿಯಲ್ಲಿ ಸಿಎಸ್ಕೆ ತಂಡವು ಅತ್ಯಂತ ಕಳಪೆ ಆಟವನ್ನು ಪ್ರದರ್ಶಿಸುತ್ತಿದೆ. ತಂಡದ ಪ್ಲೇ-ಆಫ್ ಕನಸು ಬಹುತೇಕ ಕಠಿಣವಾಗಿದ್ದರೂ ತಂಡದ ಆಟಗಾರರ ಮನಸ್ಥಿತಿಯು ಸಾಕಷ್ಟು ಲವಲವಿಕೆಯಿಂದ ಕೂಡಿದೆ. ಇದನ್ನೂ ಓದಿ: ಮುಂದಿನ ಬಾರಿ ಹಳದಿ ಜೆರ್ಸಿಯಲ್ಲಿ ಕಾಣಿಸ್ತೀನಿ ಆದರೆ…! – ಧೋನಿ ದ್ವಂದ್ವ ಹೇಳಿಕೆ
ಈಗಾಗಲೇ ತಂಡವು ಒಟ್ಟು 9 ಪಂದ್ಯಗಳನ್ನಾಡಿ 2 ಜಯ, 6 ಸೋಲುಗಳನ್ನೊಳಗೊಂಡಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈ ಮಧ್ಯೆ, ರವೀಂದ್ರ ಜಡೇಜಾ ಅವರು ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದು, ಧೋನಿಗೆ ನಾಯಕ ಪಟ್ಟ ನೀಡಿದ್ದರು.
ಭಾನುವಾರ ಮೇ 1 ರಂದು ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್ಈದ್ ಹಬ್ಬವನ್ನು ಆಚರಿಸಿದ ಧೋನಿ ಬಳಗ ವೀಡಿಯೋ ವೈರಲ್ ) ಅನ್ನು ಸೋಲಿಸಿದ ನಂತರ ಧೋನಿ ಬಳಗವು ಆತ್ಮವಿಶ್ವಾಸದಲ್ಲಿದೆ. ಸಿಎಸ್ಕೆ ಮುಂದಿನ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿರುದ್ಧ ಬುಧವಾರ ಸೆಣಸಲಿದೆ.