Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋವಿನಿಂದ ಬಳಲುತ್ತಿದ್ದರೂ ಸಿಎಸ್‌ಕೆಗಾಗಿ ಆಡ್ತಿದ್ದಾರೆ ಧೋನಿ – ಮಹಿಗೆ ಇರೋ ಆರೋಗ್ಯ ಸಮಸ್ಯೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನೋವಿನಿಂದ ಬಳಲುತ್ತಿದ್ದರೂ ಸಿಎಸ್‌ಕೆಗಾಗಿ ಆಡ್ತಿದ್ದಾರೆ ಧೋನಿ – ಮಹಿಗೆ ಇರೋ ಆರೋಗ್ಯ ಸಮಸ್ಯೆ ಏನು?

Cricket

ನೋವಿನಿಂದ ಬಳಲುತ್ತಿದ್ದರೂ ಸಿಎಸ್‌ಕೆಗಾಗಿ ಆಡ್ತಿದ್ದಾರೆ ಧೋನಿ – ಮಹಿಗೆ ಇರೋ ಆರೋಗ್ಯ ಸಮಸ್ಯೆ ಏನು?

Public TV
Last updated: May 7, 2024 1:20 pm
Public TV
Share
3 Min Read
MS Dhoni 1
SHARE

– 9ನೇ ಕ್ರಮಾಂಕದಲ್ಲಿ ಮಹಿ ಬ್ಯಾಟ್‌ ಬೀಸಿದ್ದೇಕೆ?
– ಐಪಿಎಲ್‌ ವೃತ್ತಿ ಬದುಕಿಗೆ ಇದು ಕೊನೇ ಆವೃತ್ತಿಯಾಗುತ್ತಾ?

ಚೆನ್ನೈ: ಸಿಎಸ್‌ಕೆ ತಂಡದ ಮಿಡಿತ ಲೆಜೆಂಡ್‌ ಎಂ.ಎಸ್‌ ಧೋನಿ (MS Dhoni) ಅವರ ನಿವೃತ್ತಿಯ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದಿದ್ದ ಮಹಿ ಮೊದಲ ಎಸೆತದಲ್ಲೇ ಗೋಲ್ಡನ್‌ ಡಕ್‌ ಆದರು. ಮಹಿ ಅವರ ಔಟ್‌ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಪರ – ವಿರೋಧ ಚರ್ಚೆ ನಡೆಯುತ್ತಿದ್ದಾಗಲೇ ಮತ್ತೊಂದು ಸೀಕ್ರೆಟ್‌ ಬಹಿರಂಗಗೊಂಡಿದೆ.

MS Dhoni 2 1
‌
2024ರ ಐಪಿಎಲ್‌ (IPL 2024) ಆರಂಭದಿಂದಲೂ ಮಹಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಏಕೆ ಉಳಿಯುತ್ತಿಲ್ಲ? ಕೊನೇ 2-3 ಓವರ್‌ಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವುದು ಏಕೆ? ಅನ್ನೋ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಲೇ ಇದೆ. ಇದಕ್ಕೆ ಉತ್ತರ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

ಮಹಿಗೆ ಇರೋ ಆರೋಗ್ಯ ಸಮಸ್ಯೆ ಏನು?
42 ವರ್ಷದ ಲೆಜೆಂಡರಿ ಧೋನಿ ಅವರಿಗೆ ಇದು ಅಂತಿಮ ಆವೃತ್ತಿ ಎಂದೇ ಭಾವಿಸಲಾಗಿದೆ. ಏಕೆಂದರೆ 2023 ಆವೃತ್ತಿಯಲ್ಲಿ ಮೊಣಕಾಲು ಸಮಸ್ಯೆಯಿಂದ ಬಳಲುತ್ತಿದ್ದ ಮಹಿ, ಆ ನೋವಿನಲ್ಲೂ ಆಡಿ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದರು. ಚೆನ್ನೈ ಸೂಪರ್‌ ಕಿಂಗ್ಸ್‌ 5ನೇ ಬಾರಿಗೆ ಟ್ರೋಫಿ ಗೆದ್ದ ಬಳಿಕವೇ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮೊಣಕಾಲು ಗಾಯ ವಾಸಿಯಾದ್ದರಿಂದ ತಮ್ಮ ಅಭಿಮಾನಿಗಳಿಗಾಗಿ 2024ರಲ್ಲೂ ಆಡುವ ಮಹಿ ಮತ್ತೊಂದು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

CSK

ಹೌದು. ಮಹಿ ಕೆಲ ದಿನಗಳಿಂದ ಸ್ನಾಯು ಸಮಸ್ಯೆಯಿಂದ (Muscle Tear) ಬಳಲುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಅವರಿಗೆ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಾಗುತ್ತಿಲ್ಲ, ರನ್‌ ಓಡಲಾಗುತ್ತಿಲ್ಲ. ನೆಟ್ಸ್‌ನಲ್ಲಿ ಅಭ್ಯಾಸ ಮಾಡುವಾಗಲೂ ಸ್ಮ್ಯಾಶ್‌ ಮಾಡುವತ್ತ ಮಾತ್ರ ಗಮನಹರಿಸುತ್ತಿದ್ದಾರೆ. 20 ಓವರ್‌ ಮೈದಾನದಲ್ಲಿ ನಿಂತು ಫೀಲ್ಡಿಂಗ್‌ ಮಾಡುವ ಮಹಿ, ಬ್ಯಾಟಿಂಗ್‌ ವೇಳೆ ವಿರಾಮ ಪಡೆಯುತ್ತಿರುವುದು ಇದೇ ಕಾರಣಕ್ಕೆ ಎಂದು ಸಿಎಸ್‌ಕೆ ಫ್ರಾಂಚೈಸಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟಿ20 ವಿಶ್ವಕಪ್‌ ತಂಡದಿಂದ ರಾಹುಲ್‌ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್‌ರೇಟ್‌ ಬಗ್ಗೆ ರೋಹಿತ್‌ ಹೇಳಿದ್ದೇನು?

MS Dhoni

ಅಭಿಮಾನಿಗಳು ಸತ್ಯ ತಿಳಿಯಬೇಕು:
ಇತ್ತೀಚೆಗೆ ಪಂಜಾಬ್‌ ವಿರುದ್ಧ ನಡೆದ ಪಂದ್ಯದಲ್ಲೂ ಚೆನ್ನೈ ಸೂಪರ್‌ ಕಿಂಗ್ಸ್ ಇನಿಂಗ್ಸ್‌ನ ಕೊನೇ ಓವರ್‌ನ ಮೊದಲ ಎಸೆತದಲ್ಲಿ ಎಂ.ಎಸ್‌ ಧೋನಿ, ಅರ್ಷದೀಪ್‌ ಸಿಂಗ್‌ಗೆ ಬೌಂಡರಿ ಬಾರಿಸಿದ್ದರು. ನಂತರ ಮುಂದಿನ 2 ಎಸೆತಗಳನ್ನು ಡಾಟ್‌ ಮಾಡಿದ್ದರು. 3ನೇ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿದ್ದ ಧೋನಿ, ಬೌಂಡರಿ ಅಥವಾ ಸಿಕ್ಸರ್‌ ಬಾರಿಸುವಲ್ಲಿ ವಿಫಲವಾಗಿದ್ದರು. ಆದ್ರೆ ಈ ವೇಳೆ ಸುಲಭವಾಗಿ ಒಂದು ರನ್‌ ಕದಿಯಬಹುದಿತ್ತು. ಆದರೆ, ಧೋನಿ ನಿರಾಕರಿಸಿದರು. ನಾನ್‌ಸ್ಟ್ರೈಕ್‌ ತುದಿಯಲ್ಲಿದ್ದ ಡೇರಿಲ್‌ ಮಿಚೆಲ್‌ ರನ್‌ ಪಡೆಯಲು ಸ್ಟ್ರೈಕರ್‌ ತುದಿಗೆ ಓಡಿ ಬಂದರು. ಆದರೆ, ಧೋನಿ ನಿಂತಲ್ಲಿಯೇ ಡೇರಿಲ್‌ ಮಿಚೆಲ್‌ಗೆ ವಾಪಸ್‌ ಹೋಗುವಂತೆ ಹೇಳಿದರು. ಈಬಗ್ಗೆ ಅಭಿಮಾನಿಗಳಿಂದಲೂ ಟೀಕೆ ವ್ಯಕ್ತವಾಗಿತ್ತು. ಆದ್ರೆ ಇದೀಗ ಫ್ರಾಂಚೈಸಿ ಮೂಲಗಳೇ ಅಭಿಮಾನಿಗಳಿಗೆ ಸತ್ಯ ತಿಳಿಸುವ ಪ್ರಯತ್ನ ಮಾಡಿವೆ.

ಬೌಲರ್​​ಗೆ ಅವಕಾಶ ಕೊಡಿ ಎಂದಿದ್ದ ಭಜ್ಜಿ:
ಇನ್ನೂ 9ನೇ ಕ್ರಮಾಂಕದಲ್ಲಿ ಬಂದು ಮಹಿ ಗೋಲ್ಡನ್‌ ಡಕ್‌ ಆದ ಮಹಿ ಬ್ಯಾಟಿಂಗ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಹರ್ಭಜನ್ ಸಿಂಗ್, ಎಂ.ಎಸ್ ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಯಸಿದರೆ, ಅವರು ಪ್ಲೇಯಿಂಗ್​ ಇಲೆವೆನ್​​ನಲ್ಲಿ ಆಡಲೇಬಾರದು. ಬದಲಿಗೆ ಒಬ್ಬ ವೇಗದ ಬೌಲರ್ ಅನ್ನು ಪ್ಲೇಯಿಂಗ್ ಹನ್ನೊಂದರಲ್ಲಿ ಸೇರಿಸುವುದು ಉತ್ತಮ. ಪ್ರತಿಯೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವ ಅವರೇ ಈ ರೀತಿ ಪಂಜಾಬ್ ಕಿಂಗ್ಸ್ ವಿರುದ್ಧ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ತಂಡದ ಹಿನ್ನಡೆಗೆ ಕಾರಣರಾಗಿದ್ದಾರೆ. ಧೋನಿ ಈ ತಪ್ಪು ಮಾಡಿದ್ದೇಕೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: T20 World Cup: ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಕ್ರಿಕೆಟಿಗರಿಗೆ ಲಕ್ಷ ಲಕ್ಷ ಬಹುಮಾನ ಘೋಷಿಸಿದ ಪಾಕ್‌!

TAGGED:CSKCSK FansdoctorsIPL 2024ms dhoniMuscle Tearಎಂ ಎಸ್ ಧೋನಿಐಪಿಎಲ್‌ 2024ಸಿಎಸ್‍ಕೆಸ್ನಾಯು ಸಮಸ್ಯೆ
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

AS Ponnanna
Districts

ಕೊಡಗಿನ ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ರೇಪ್ ಆರೋಪ – ಇಬ್ಬರನ್ನು ಬಂಧಿಸಲಾಗಿದೆ: ಪೊನ್ನಣ್ಣ

Public TV
By Public TV
23 minutes ago
Nikhil Kumaraswamy
Bengaluru City

ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಿದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್ ಕುಮಾರಸ್ವಾಮಿ

Public TV
By Public TV
28 minutes ago
Delhi Police
Crime

ಹಿರಿಯ ಕಂದಾಯ ಅಧಿಕಾರಿ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ – ಮನೆಗೆಲಸದವನ ಮೇಲೆ ಶಂಕೆ

Public TV
By Public TV
43 minutes ago
Jayanagar Escape Case
Bengaluru City

ಜಿಮ್ ಟ್ರೈನರ್‌ನನ್ನು ಪ್ರೀತಿಸಿ, ಮದ್ವೆಯಾದವ್ಳು ಪರಾರಿ – ಅಣ್ಣನ ಜೊತೆಯೇ ತಂಗಿ ಓಡಿಹೋದ್ಳು: ಪತಿ ಅಳಲು

Public TV
By Public TV
1 hour ago
lokayukta officials arrest two policemen for accepting bribe in bagalkote badami
Bagalkot

ಲಂಚಕ್ಕೆ ಕೈಯೊಡ್ಡಿ ರೆಡ್‌ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ

Public TV
By Public TV
1 hour ago
Kiren Rijiju
Latest

ʻಮೋದಿ ಟೆರರಿಸ್ಟ್ʼ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?