ಜೈಪುರ್: ವೆಸ್ಟ್ ಇಂಡೀಸ್ ಪ್ರವಾಸದಿಂದ ದೂರ ಉಳಿದಿದ್ದರೂ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ಸುದ್ದಿಯಾಗುತ್ತಲ್ಲೇ ಇದ್ದಾರೆ. ಭಾರತೀಯ ಸೇನೆಯೊಂದಿಗೆ 15 ದಿನಗಳ ಕಾಲ ಕಾರ್ಯನಿರ್ವಹಿಸಿ ದೆಹಲಿಗೆ ವಾಪಸ್ ಆಗಿದ್ದಾರೆ.
ಎಂ.ಎಸ್.ಧೋನಿ ಇತ್ತೀಚೆಗಷ್ಟೇ ಜಾಹೀರಾತು ಚಿತ್ರೀಕರಣ ವೇಳೆ ಕಾಣಿಸಿಕೊಂಡಿದ್ದರು. ಸದ್ಯ ಕಮಾಂಡೋ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಫೋಟೋ, ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿವೆ.
https://www.instagram.com/p/B1lEVq3AeAk/?utm_source=ig_embed
ಕಾರ್ಯಕ್ರಮದ ಧೋನಿ ನಿಮಿತ್ತ ಶನಿವಾರ ಜೈಪುರಕ್ಕೆ ಭೇಟಿ ನೀಡಿದ್ದರು. ವಿಮಾನ ನಿಲ್ದಾಣದಲ್ಲಿ ಧೋನಿ ಅವರನ್ನು ನೋಡಿದ ಅಭಿಮಾನಿಗಳು ಸೆಲ್ಫಿ ಕಿಕ್ಕಿಸಿಕೊಳ್ಳು ಮುಗಿಬಿದ್ದರು. ಕೆಲವರು ತಮ್ಮ ಮೊಬೈಲ್ನಲ್ಲಿ ಧೋನಿಯ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಸೈನಿಕನಂತೆ ಧೋನಿ ತಲೆಗೆ ಕಪ್ಪು ಬಟ್ಟೆಯನ್ನು ಧರಿಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅವರು ಜೈಪುರದಲ್ಲಿ ಸುಮಾರು ಆರು ಗಂಟೆಗಳ ಕಾಲ ಇದ್ದರು. ಈ ಸಮಯದಲ್ಲಿ ಅವರು ಕುಕುಸ್ನ ಹೋಟೆಲ್ನಲ್ಲಿ ತಂಗಿದ್ದರು. ನಂತರ ಸಂಜೆ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.
https://www.instagram.com/p/B1ihLwcgA6p/
ವಿಶ್ವಕಪ್ ಟೂರ್ನಿ ಬಳಿಕ ಕ್ರಿಕೆಟ್ನಿಂದ ಧೋನಿ 2 ತಿಂಗಳ ವಿರಾಮ ತೆಗೆದುಕೊಂಡಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅವರು ಅಲಭ್ಯವಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ, ಲೆಫ್ಟಿನೆಂಟ್ ಕರ್ನಲ್ ಧೋನಿ ಅವರನ್ನು ಜುಲೈ 30ರಿಂದ ಆಗಸ್ಟ್ 15 ರವರೆಗೆ ಕಾಶ್ಮೀರದ ಭಯೋತ್ಪಾದನಾ ನಿಗ್ರಹ ಘಟಕದಲ್ಲಿ ನೇಮಿಸಲಾಗಿತ್ತು. ಅವರು ಪ್ಯಾರಾ ಕಮಾಂಡೋಗಳ ಬೆಟಾಲಿಯನ್ನಲ್ಲಿ 15 ದಿನಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ದಿನದಂದು ಧೋನಿ, ಆರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ ಅವರೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದು ದೊಡ್ಡ ಸುದ್ದಿಯಾಗಿತ್ತು.