Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

IPL Champions 2023: ಕೊನೆಯಲ್ಲಿ ಜಡೇಜಾ ಜಾದು, 5ನೇ ಬಾರಿಗೆ ಚೆನ್ನೈಗೆ ಚಾಂಪಿಯನ್‌ ಕಿರೀಟ

Public TV
Last updated: May 30, 2023 8:07 am
Public TV
Share
4 Min Read
IPL
SHARE

ಅಹಮದಾಬಾದ್‌: ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾ (Ravindra Jadeja) ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ರೋಚಕ ಜಯ ಸಾಧಿಸಿ 2023ರ ಟಾಟಾ ಐಪಿಎಲ್‌ (TaTa IPL) ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದೆ.

This moment is ♾️????????#IPL2023Final #CSKvGT #WhistlePodu #Yellove ????????pic.twitter.com/6BCgehszxy

— Chennai Super Kings (@ChennaiIPL) May 29, 2023

ಐಪಿಎಲ್‌ ಆವೃತ್ತಿಯಲ್ಲಿ 4 ಬಾರಿ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದ್ದ ಎಂ.ಎಸ್‌. ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಬಲಿಷ್ಠ ಗುಜರಾತ್‌ ಟೈಟಾನ್ಸ್‌ಗೆ (GT) ಮಣ್ಣುಮುಕ್ಕಿಸಿ 5ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಇದರೊಂದಿಗೆ 5 ಬಾರಿ ಐಪಿಎಲ್‌ ಕಪ್‌ ಗೆದ್ದ ಮುಂಬೈ ಇಂಡಿಯನ್ಸ್‌ ದಾಖಲೆಯನ್ನ ಸರಿಗಟ್ಟಿದೆ. ಗುಜರಾತ್‌ ಟೈಟಾನ್ಸ್‌ ತಾನು ಆಡಿದ 2ನೇ ಆವೃತ್ತಿಯಲ್ಲಿ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ವಿಶೇಷವೆಂದರೆ ಚೆನ್ನೈ ತಂಡದಲ್ಲಿ ಸ್ಟಾರ್‌ ಆಟಗಾರನಾಗಿ ಮಿಂಚಿದ್ದ ಅಂಬಾಟಿ ರಾಯುಡು (Ambati Rayudu) ಗೆಲುವಿನೊಂದಿಗೆ ಐಪಿಎಲ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. 250 ಪಂದ್ಯವನ್ನಾಡಿದ ಸಾಧನೆ ಮಾಡಿದ ಎಂ.ಎಸ್‌ ಧೋನಿ ಸಹ ಇದೇ ಗೆಲುವಿನೊಂದಿಗೆ ವಿದಾಯ ಹೇಳುವ ಸಾಧ್ಯತೆಗಳಿವೆ.

CSK 1 1

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 214 ರನ್‌ ಗಳಿಸಿತ್ತು. ಚೇಸಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಮೂರು ಎಸೆತಗಳನ್ನು ಎದುರಿಸುತ್ತಿದ್ದಂತೆ ಮಳೆ ಒಕ್ಕರಿಸಿತು. ಇದರಿಂದ ಸಿಎಸ್‌ಕೆ ಇನ್ನಿಂಗ್ಸ್‌ ಆರಂಭಗೊಳ್ಳುವುದು 1:30 ಗಂಟೆಗೂ ಅಧಿಕ ಕಾಲ ತಡವಾಯಿತು. 10:30ರ ವೇಳೆಗೆಲ್ಲಾ ಮಳೆ ಬಿಡುವುಕೊಟ್ಟರೂ ಮೈದಾನ ಹದಗೊಳಿಸುವುದಕ್ಕೆ 1 ಗಂಟೆಗೂ ಅಧಿಕ ಸಮಯ ತೆಗೆದುಕೊಳ್ಳಲಾಯಿತು. ಹಾಗಾಗಿ ತಡವಾಗಿದ್ದರಿಂದ ಡಕ್ವರ್ತ್‌ ಲೂಯಿಸ್ ನಿಯಮ ಅನ್ವಯಿಸಿ, ಓವರ್‌ಗಳನ್ನ ಕಡಿತಗೊಳಿಸಲಾಯಿತು. ಡಕ್ವರ್ತ್‌ ಲೂಯಿಸ್‌ (DSL) ನಿಯಮದ ಪ್ರಕಾರ 15 ಓವರ್‌ಗಳಲ್ಲಿ 171 ರನ್‌ ಟಾರ್ಗೆಟ್‌ ಪಡೆದು ಇನ್ನಿಂಗ್ಸ್‌ ಆರಂಭಿಸಿದ ಸಿಎಸ್‌ಕೆ 15 ಓವರ್‌ಗಳಲ್ಲಿ 171 ರನ್‌ ಚಚ್ಚುವ ಮೂಲಕ ಗೆಲುವು ಸಾಧಿಸಿತು.

CSK 3 1

ಕೊನೆಯ 20 ಎಸೆತಗಳಲ್ಲಿ 50 ರನ್‌ಗಳ ಅಗತ್ಯವಿತ್ತು. ಈ ವೇಳೆ ರಶೀದ್‌ ಖಾನ್‌ ಬೌಲಿಂಗ್‌ನ ಕೊನೆಯ ಎರಡು ಎಸೆತಗಳನ್ನು ಶಿವಂ ದುಬೆ (Shivam Dube) ಭರ್ಜರಿ ಸಿಕ್ಸರ್‌ ಬಾರಿಸಿದರು. ಇನ್ನೂ ಕೊನೆಯ 18 ಎಸೆತಗಳಲ್ಲಿ 38 ರನ್‌ಗಳು ಬೇಕಾಗಿದ್ದಾಗ ಕೊನೆಯ ಐಪಿಎಲ್‌ ಪಂದ್ಯವಾಡಿದ ಅಂಬಾಟಿ ರಾಯುಡು, ಮೋಹಿತ್‌ ಶರ್ಮಾ ಬೌಲಿಂಗ್‌ನ ಮೊದಲ ಮೂರು ಎಸೆತಗಳಲ್ಲಿ 2 ಸಿಕ್ಸರ್‌, 1 ಬೌಂಡರಿ ಬಾರಿಸಿದರು. ಇದರಿಂದ ಕಠಿಣ ಪರಿಸ್ಥಿತಿಯಲ್ಲಿದ್ದ ಚೆನ್ನೈಗೆ ಸಂಜೀವಿನಿ ಸಿಕ್ಕಂತಾಯಿತು. ಕೊನೆಯ 6 ಎಸೆತಗಳಲ್ಲಿ 13 ರನ್‌ ಅಗತ್ಯವಿದ್ದಾಗ ಮತ್ತೆ ಮೋಹಿತ್‌ ಶರ್ಮಾ ಬೌಲಿಂಗ್‌ನಲ್ಲಿದ್ದರು. ಮೊದಲ 4 ಎಸೆತಗಳಲ್ಲಿ ಕೇವಲ 3 ರನ್‌ ಸೇರ್ಪಡೆಯಾಯಿತು. 5ನೇ ಎಸೆತದಲ್ಲಿ ಸಿಕ್ಸ್‌ ಬಾರಿಸಿದ ಜಡೇಜಾ 6ನೇ ಎಸೆತದಲ್ಲಿ ಬೌಂಡರಿ ಚಚ್ಚುವ ಮೂಲ ಗೆಲುವು ತಂದುಕೊಟ್ಟರು.

CSK 4

ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್‌ ಗಾಯಕ್ವಾಡ್‌ ಹಾಗೂ ಡಿವೋನ್‌ ಕಾನ್ವೆ ಆರಂಭದಿಂದಲೇ ಗುಜರಾತ್‌ ಬೌಲರ್‌ಗಳನ್ನ ಬೆಂಡೆತ್ತಲು ಶುರು ಮಾಡಿತು. ಮೊದಲ ವಿಕೆಟ್‌ಕೆ ಈ ಜೋಡಿ 6.3 ಓವರ್‌ಗಳಲ್ಲಿ ಭರ್ಜರಿ 74 ರನ್‌ ಸಿಡಿಸಿತ್ತು. ಈ ವೇಳೆ ಋತುರಾಜ್‌ ಗಾಯಕ್ವಾಡ್‌ ದೊಡ್ಡ ಹೊಡೆತ ಹೊಡೆಯಲು ಯತ್ನಿಸಿ ಕ್ಯಾಚ್‌ ನೀಡಿ ಔಟಾದರು. ಋತುರಾಜ್‌ 16 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್‌ನೊಂದಿಗೆ 26 ರನ್‌ ಗಳಿಸಿ ಪೆವಿಲಿಯನ್‌ ಸೇರುತ್ತಿದ್ದಂತೆ ಡಿವೋನ್‌ ಕಾನ್ವೆ ಸಹ 47 ರನ್‌ (25 ಎಸೆತ, 4 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾದರು. ನಂತರದಲ್ಲಿ ಕಣಕ್ಕಿಳಿದ ಅಜಿಂಕ್ಯಾ ರಹಾನೆ 13 ಎಸೆತಗಳಲ್ಲಿ ಸ್ಫೋಟಕ 27 ರನ್‌ (2 ಸಿಕ್ಸರ್‌, 2 ಬೌಂಡರಿ) ಚಚ್ಚಿ ಔಟಾದರು. ಅಂಬಾಟಿ ರಾಯುಡು 19 ರನ್‌ (8 ಎಸೆತ, 2 ಸಿಕ್ಸರ್‌, 1 ಬೌಂಡರಿ) ಚಚ್ಚಿದರು.‌ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿವಂ ದುಬೆ ಅಜೇಯ 32 ರನ್‌ (21 ಎಸೆತ, 2 ಸಿಕ್ಸ್‌), ರವೀಂದ್ರ ಜಡೇಜಾ 15 ರನ್‌ (6‌ ಎಸೆತ, 1 ಸಿಕ್ಸ್‌, 1 ಬೌಂಡರಿ) ಗಳಿಸಿ ಕ್ರೀಸ್‌ನಲ್ಲಿ ಉಳಿದರು.

GT

ಆರಂಭಿಕರಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ ಹಾಗೂ ವೃದ್ಧಿಮಾನ್‌ ಸಾಹಾ ಜೋಡಿ ಉತ್ತಮ ಆರಂಭ ನೀಡಿತ್ತು. ಮೊದಲ ವಿಕೆಟ್‌ ಜೊತೆಯಾಟಕ್ಕೆ 42 ಎಸೆತಗಳಲ್ಲಿ 67 ರನ್‌ ಗಳಿಸಿತ್ತು. 2ನೇ ಓವರ್‌ನಲ್ಲೇ ಕ್ಯಾಚ್‌ ನಿಂದ ತಪ್ಪಿಸಿಕೊಂಡಿದ್ದ ಗಿಲ್‌ ಧೋನಿ ಮ್ಯಾಜಿಕ್‌ ಸ್ಟಂಪ್‌ಗೆ ವಿಕೆಟ್‌ ಒಪ್ಪಿಸಲೇಬೇಕಾಯಿತು. ನಂತರ ಕಣಕ್ಕಿಳಿದ ಆಟಗಾರರು ಚೆನ್ನೈ ಬೌಲರ್‌ಗಳನ್ನ ಹಿಗ್ಗಾಮುಗ್ಗಾ ಚೆಂಡಾಡಿದರು.

cskvsgt 8

ಬಳಿಕ ಸಾಹಿ ಸುದರ್ಶನ್‌ ಹಾಗೂ ವೃದ್ಧಿಮಾನ್‌ ಸಾಹಾ ಜೋಡಿ 42 ಎಸೆತಗಳಲ್ಲಿ 64 ರನ್‌ ಜೊತೆಯಾಟ ನೀಡಿದರೆ, ಸುದರ್ಶನ್‌ ಹಾಗೂ ಹಾರ್ದಿಕ್‌ ಪಾಂಡ್ಯ ಜೋಡಿ 33 ಎಸೆತಗಳಲ್ಲೇ ಸ್ಫೋಟಕ 81 ರನ್‌ ಚಚ್ಚಿತ್ತು. ಇದರ ಪರಿಣಾಮ ಮೊದಲ 10 ಓವರ್‌ನಲ್ಲಿ ಒಂದು ವಿಕೆಟ್‌ ಕಳೆದುಕೊಂಡು ಕೇವಲ 86 ರನ್‌ ಕಲೆಹಾಕಿದ್ದ ಟೈಟಾನ್ಸ್‌ ಮುಂದಿನ 10 ಓವರ್‌ಗಳಲ್ಲಿ 128 ರನ್‌ ಗಳಿಸುವ ಮೂಲಕ ತಂಡದ ಮೊತ್ತ 200ರ ಗಡಿ ದಾಟಿಸುವಲ್ಲಿ ಯಶಸ್ವಿಯಾಯಿತು. ಸಾಯಿ ಸುದರ್ಶನ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಕೊನೆಯ ೫ ಓವರ್‌ಗಳಲ್ಲಿ 71 ರನ್‌ ಸೇರ್ಪಡೆಯಾಯಿತು.

cskvsgt 2 1

ಗುಜರಾತ್‌ ಟೈಟಾನ್ಸ್‌ ಪರ ವೃದ್ಧಿಮಾನ್‌ ಸಾಹಾ 54 ರನ್‌ (39 ಎಸೆತ, 5 ಬೌಂಡರಿ, 1 ಸಿಕ್ಸರ್‌), ಶುಭಮನ್‌ ಗಿಲ್‌ 39 ರನ್‌ (20 ಎಸೆತ, 7 ಬೌಂಡರಿ), ಹಾರ್ದಿಕ್‌ ಪಾಂಡ್ಯ 21 ರನ್‌ ಗಳಿಸಿದರು. ಇನ್ನೂ 204.25 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸಾಯಿ ಸುದರ್ಶನ್‌ 47 ಎಸೆತಗಳಲ್ಲಿ 96 ರನ್‌ (6 ಸಿಕ್ಸರ್‌, 8 ಬೌಂಡರಿ) ಸಿಡಿಸಿ ಶತಕ ವಂಚಿತರಾದರು.

CSK 3

ಸಿಎಸ್‌ಕೆ ಪರ ಮಹೇಶ್‌ ಪತಿರಣ 2 ವಿಕೆಟ್‌ ಪಡೆದರೆ, ರವೀಂದ್ರ ಜಡೇಜಾ ಹಾಗೂ ದೀಪಕ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

TAGGED:Ajinkya RahaneAmbati RayuduDevon ConwayHardik Pandyams dhoniRashid KhanRavindra JadejaRuturaj GaikwadSai SudharsanShubman Gillwriddhiman sahaಅಜಿಂಕ್ಯಾ ರಹಾನೆಎಂ ಎಸ್ ಧೋನಿಡಿವೋನ್‌ ಕಾನ್ವೆರವೀಂದ್ರ ಜಡೇಜಾವೃದ್ದಿಮಾನ್ ಸಾಹಾಶುಭಮನ್ ಗಿಲ್ಸಾಯಿ ಸುದರ್ಶನ್ಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
49 minutes ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
1 hour ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
1 hour ago
Mallikarjun Kharge 2
Latest

ಆರ್‌ಎಸ್‌ಎಸ್‌ ವಿಷವಿದ್ದಂತೆ ರುಚಿ ನೋಡಿದ್ರೆ ಸತ್ತು ಹೋಗ್ತೀರಿ: ಮಲ್ಲಿಕಾರ್ಜುನ ಖರ್ಗೆ

Public TV
By Public TV
2 hours ago
Davanagere Drugs Arrest
Crime

ದಾವಣಗೆರೆ | ಮಾದಕ ವಸ್ತು ಮಾರಾಟ ಜಾಲ – ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ

Public TV
By Public TV
2 hours ago
Siddaramaiah 10
Latest

ಎಐಸಿಸಿ ಒಬಿಸಿ ವಿಭಾಗದ `ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ ವಿವರಿಸಿದ ಸಿಎಂ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?