Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುರುಬ ಸಮುದಾಯಕ್ಕೆ ಸಿದ್ದು ಕೊಡುಗೆ ಶೂನ್ಯ- ರಾಮಲಿಂಗಾರೆಡ್ಡಿ ನಂಬಿಸಿ ಮೋಸ ಮಾಡಿದ್ರು: ಎಂಟಿಬಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಕುರುಬ ಸಮುದಾಯಕ್ಕೆ ಸಿದ್ದು ಕೊಡುಗೆ ಶೂನ್ಯ- ರಾಮಲಿಂಗಾರೆಡ್ಡಿ ನಂಬಿಸಿ ಮೋಸ ಮಾಡಿದ್ರು: ಎಂಟಿಬಿ

Bengaluru Rural

ಕುರುಬ ಸಮುದಾಯಕ್ಕೆ ಸಿದ್ದು ಕೊಡುಗೆ ಶೂನ್ಯ- ರಾಮಲಿಂಗಾರೆಡ್ಡಿ ನಂಬಿಸಿ ಮೋಸ ಮಾಡಿದ್ರು: ಎಂಟಿಬಿ

Public TV
Last updated: October 3, 2019 5:22 pm
Public TV
Share
2 Min Read
mtb nagaraj a
SHARE

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಉರುಳಲು ಕಾರಣರಾಗಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ವಿರುದ್ಧ  ವಾಗ್ದಾಳಿ ಮಾಡಿದ್ದಾರೆ.

ಕ್ಷೇತ್ರದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್ ಅವರು, ರಾಮಲಿಂಗಾರೆಡ್ಡಿ ಅವರು ನಮ್ಮನ್ನು ನಂಬಿಸಿ ಮೋಸ ಮಾಡಿದರು ಎಂದು ಆರೋಪಿಸಿದರು. ನಾವು ಮುಂದಿಟ್ಟ ಹೆಜ್ಜೆಯನ್ನು ಹಿಂದಿಡಲ್ಲ ಎಂದು ಹೇಳಿ ಮತ್ತೆ ಕಾಂಗ್ರೆಸ್ ಸೇರುವುದಿಲ್ಲ ಎಂಬುವುದನ್ನು ಸ್ಪಷ್ಟ ಪಡಿಸಿದರು.

mtb nagaraj b

ನಮಗೆ ಬಿಜೆಪಿ ನಾಯಕರು ಮೊದಲೇ ರಾಮಲಿಂಗಾರೆಡ್ಡಿ ಅವರನ್ನು ನಂಬಬೇಡಿ, ಆತ ಅಲ್ಲೊಂದು, ಇಲ್ಲೊಂದು ಕಾಲಿಟ್ಟಿದ್ದಾರೆ ಎಂದು ಹೇಳಿದ್ದರು. ಆದರೆ ನಾವು ಅವರ ಮಾತನ್ನು ಕೇಳಿಸಿಕೊಳ್ಳದೆ ಇವರನ್ನು ನಂಬಿದ್ದೇವು. ಅಲ್ಲದೇ ಮುಂಬೈಗೆ ಬನ್ನಿ ಎಂದು ಕರೆದರೆ, ಇಲ್ಲ ನೀವು ಹೋಗಿ ನಾನು ಇಲ್ಲೇ ಇರುತ್ತೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದಿದ್ದರು. ಆದರೆ ಕೊನೆಗೆ ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದು ರಾಜೀನಾಮೆ ಪಡೆದೆ ಎಂದು ಹೇಳಿದರು. ಆದರೆ ಅದಕ್ಕೂ ಮುನ್ನ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ ಎಂದು ರಾಮಲಿಂಗಾರೆಡ್ಡಿ ಹೇಳಿದ್ದರು. ರಾಜೀನಾಮೆ ನೀಡುವ ಮುನ್ನ 3 ದಿನ ನಿರಂತರವಾಗಿ ನಾನು ಅವರೊಂದಿಗೆ ಮಾತನಾಡಿದ್ದೆ ಎಂದು ಅಂದಿನ ಬೆಳವಣಿಗೆಗಳನ್ನು ಎಂಟಿಬಿ ವಿವರಿಸಿದರು.

ಇದೇ ವೇಳೆ ತಮ್ಮ ರಾಜಕೀಯ ಗುರು ಸಿದ್ದರಾಮಯ್ಯ ಅವರ ವಿರುದ್ಧವೂ ಗುಡುಗಿದ ಎಂಟಿಬಿ, ಸಿದ್ದರಾಮಯ್ಯ ಅವರ ಹಿಂದೆ ಇಡೀ ಕುರುಬ ಸಮಾಜ ನಿಂತಿತ್ತು. ಆದರೆ ಕುರುಬ ಸಮಾಜಕ್ಕೆ ಸಿದ್ದರಾಮಯ್ಯ ಅವರ ಕೊಡುಗೆ ಶೂನ್ಯ. ಮುಖ್ಯಮಂತ್ರಿಯಾಗಿದ್ದರು ಸಮಾಜಕ್ಕೆ ಒಂದು ಮೆಡಿಕಲ್ ಕಾಲೇಜು, ಎಂಜಿನಿಯರಿಂಗ್ ಕಾಲೇಜು ಮಾಡಲಿಲ್ಲ. ನನಗೆ ಟಿಕೆಟ್ ಕೊಟ್ಟಿದ್ದು ಸಿದ್ದರಾಮಯ್ಯ ಎಂದು ಹೇಳಿಕೊಳ್ಳುತ್ತಾರೆ. ಆದರೆ ಅಂದು ನನಗೆ ಟಿಕೆಟ್ ಕೊಟ್ಟಿದ್ದು ಎಸ್.ಎಂ ಕೃಷ್ಣ ಅವರು. ಕಾಂಗ್ರೆಸ್ ಪಕ್ಷದಲ್ಲಿ ನನಗೆ ಟಿಕೆಟ್ ಸಿಕ್ಕ ಸಂದರ್ಭದಲ್ಲಿ ಸಿದ್ದರಾಮಯ್ಯ ಜೆಡಿಎಸ್ ನಲ್ಲಿದ್ದರು. ಆ ಪಕ್ಷದಲ್ಲಿ ಇದ್ದುಕೊಂಡು ಕಾಂಗ್ರೆಸ್ ಪಕ್ಷದಿಂದ ನನಗೆ ಹೇಗೆ ಟಿಕೆಟ್ ಕೊಟ್ಟಿದ್ದೀರಿ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ಕಾಂಗ್ರೆಸ್ಸಿನಲ್ಲಿ ಒಳಜಗಳ ಹೆಚ್ಚಾಗಿದ್ದು, ಮೂಲ ಕಾಂಗ್ರೆಸಿಗರು ನಾವು, ವಲಸೆ ಬಂದವರು ಅವರು ಎಂದು ಜಗಳ ನಡೆಯುತ್ತಿದೆ. ಕೆಲವರು ಸಿದ್ದರಾಮಯ್ಯ ಇರಲಿ ಎಂದರೆ ಮತ್ತೆ ಕೆಲ ನಾಯಕರು ಅವರನ್ನು ತೆಗೆಯಬೇಕು ಎನ್ನುತ್ತಾರೆ. ಇವುಗಳನ್ನು ನೀವು ದಿನ ಮಾಧ್ಯಮಗಳಲ್ಲಿ ವೀಕ್ಷಿಸುತ್ತಿದ್ದೀರಿ. ದೇಶದ ರಾಜಕಾರಣದಲ್ಲೂ ಕಾಂಗ್ರೆಸ್‍ನಲ್ಲಿ ಇದೇ ಜಗಳ ನಡೆಯುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಇಲ್ಲ. ಇನ್ನೂ ಮುಂದೇ ಬರುವುದಿಲ್ಲ. ಮೋದಿ ಇರುವವರೆಗೂ ಅವರದ್ದೇ ಆಡಳಿತ ಮುಂದುವರಿಯುತ್ತದೆ. ನಾನು ರಾಜೀನಾಮೆ ನೀಡಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿಯ ಯೋಜನೆಗಳನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ ಎಂಬ ಕಾರಣಕ್ಕೆ ಅಷ್ಟೇ ಎಂದು ಕ್ಷೇತ್ರದ ಜನರಿಗೆ ಸ್ಪಷ್ಟನೆ ನೀಡಿದರು.

TAGGED:bengalurucongressDisqualified MLAmtb nagarajಅನರ್ಹ ಶಾಸಕಎಂಟಿಬಿ ನಾಗರಾಜ್ಕಾಂಗ್ರೆಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Davanagere 1
Davanagere

ದಾವಣಗೆರೆ ಉಪಸಮರಕ್ಕೂ ಮುನ್ನವೇ ಭುಗಿಲೆದ್ದ ಬಂಡಾಯ; 20ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಬಿಜೆಪಿ ಸೇರ್ಪಡೆ

Public TV
By Public TV
8 hours ago
Shivaraj Tangadagi
Districts

ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲು – ಸಿದ್ದಗಂಗಾ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

Public TV
By Public TV
8 hours ago
AI Image
Latest

ಪುರುಷರೂ ಅನುಭವಿಸ್ತಾರೆ ಗರ್ಭಧಾರಣೆಯ ಲಕ್ಷಣ –  ಏನಿದು ಕುವೇಡ್ ಸಿಂಡ್ರೋಮ್?

Public TV
By Public TV
8 hours ago
DJ Halli Murder 1
Bengaluru City

ಡಿಜೆ ಹಳ್ಳಿಯಲ್ಲಿ ಅಪ್ರಾಪ್ತೆ ಕೊಲೆಗೈದಿದ್ದ ಹಂತಕ ಅಜ್ಮೀರ್​​ನಲ್ಲಿ ಅರೆಸ್ಟ್

Public TV
By Public TV
9 hours ago
ULFA I Terrorist Attack On Assam Police
Crime

ಅಸ್ಸಾಂನಲ್ಲಿ ನಿಷೇಧಿತ ಉಲ್ಫಾ (ಐ) ಉಗ್ರರ ದಾಳಿ – ನಾಲ್ವರು ಪೊಲೀಸರಿಗೆ ಗಾಯ

Public TV
By Public TV
9 hours ago
Strait of Hormuz 2
Latest

ವಿದ್ಯುತ್‌ ಸ್ಥಾವರಗಳ ಮೇಲೆ ದಾಳಿ ಮಾಡಿದ್ರೆ, ಹಾರ್ಮುಜ್ ‌ಜಲಸಂಧಿ ಸಂಪೂರ್ಣ ಬಂದ್‌ – ಟ್ರಂಪ್‌ಗೆ ಇರಾನ್‌ ಎಚ್ಚರಿಕೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?