ಸಿದ್ದರಾಮಯ್ಯ ಒಂದು ಕಾಲದಲ್ಲಿ ಗುರು, ಈಗ ಬೇರೆ ಗುರು ಬಂದಿದ್ದಾರೆ: ಎಂಟಿಬಿ

Public TV
1 Min Read
mtb nagaraj 2

ಕೋಲಾರ: ಸಿದ್ದರಾಮಯ್ಯ ಅವರು ನನ್ನ ಗುರು, ನಾನು ಅವರ ಶಿಷ್ಯನೆ, ಈಗ ಗುರುವನ್ನೆ ಬಿಟ್ಟು ಬೇರೆ ಪಕ್ಷಕ್ಕೆ ಸೇರಿದ್ದೇನೆ. ಈಗ ಬೇರೆ ಗುರು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹೇಳಿದರು.

ಮಾಲೂರು ಪಟ್ಟಣದ ಅರಳೇರಿ ರಸ್ತೆಯಲ್ಲಿರುವ ಶ್ರೀರಂಗಂ ಕಲ್ಯಾಣ ಮಂಟಪದಲ್ಲಿ ಬಿಜೆಪಿ ರಾಜ್ಯ ಫಲಾನುಭವಿಗಳ ಪ್ರಕೋಷ್ಠ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ನನ್ನ ಕರೆದಿಲ್ಲ, ಅವರ ಇಷ್ಟ ಮಾಡಿಕೊಳ್ಳಲಿ ಎಂದರು.

SIDDARAMAIAH

ಅಲ್ಲದೆ ಸಿದ್ದರಾಮಯ್ಯ ಅವರನ್ನು ಚುನಾವಣೆಯಲ್ಲಿ ಕೋಲಾರದಲ್ಲಿ ಸ್ಪರ್ಧಿಸಲು ಹಲವು ಕಾಂಗ್ರೆಸ್ ನಾಯಕರು ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಅದರ ಬಗ್ಗೆ ಮಾಹಿತಿ ಇಲ್ಲ. ಅಧಿಕೃತವಾಗಿ ಆ ಬಗ್ಗೆ ಏನೂ ಮಾಹಿತಿ ಇಲ್ಲ ಎಂದರು. ಇದನ್ನೂ ಓದಿ: ಕಲಬುರಗಿಯಲ್ಲಿ ವರುಣಾರ್ಭಟಕ್ಕೆ ಮೊದಲ ಬಲಿ- ಜನ ಜೀವನ ಅಸ್ತವ್ಯಸ್ತ

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರೆಂದ್ಲಾಜೆ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ನಾಗೇಶ್ ಭಾಗಿ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಇದ್ದರು. ಇದನ್ನೂ ಓದಿ: ಪದವಿ, ಸ್ನಾತಕೋತ್ತರ ಕೋರ್ಸ್‌ಗೆ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ: ಅಶ್ವಥ್ ನಾರಾಯಣ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *