ರಾಜ್ಯಪಾಲ ಆಡಳಿತದಿಂದ ಉಗ್ರ ನಿಗ್ರಹ ಸುಲಭ: ಜಮ್ಮು ಕಾಶ್ಮೀರ ಡಿಐಜಿ

Public TV
1 Min Read
SP VAID

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆಯಿಂದಾಗಿ ಉಗ್ರ ನಿಗ್ರಹ ಸುಲಭ ಎಂದು ಜಮ್ಮು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ಎಸ್ ಪಿ ವೈದ್ ರವರು ತಿಳಿಸಿದ್ದಾರೆ.

ರಾಜ್ಯಪಾಲರ ಆಡಳಿತ ಜಾರಿಯಾಗಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರ ಆಳ್ವಿಕೆ ಹಿನ್ನೆಲೆ ಇನ್ನು ಯಾವುದೇ ಕಾರಣಕ್ಕೂ ಉಗ್ರರ ವಿರುದ್ಧ ಕಾರ್ಯಾಚರಣೆ ನಿಲ್ಲದು. ಪೊಲೀಸರು ಹಾಗೂ ಸೇನೆಯು ನಿರಾಂತಕವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.

ರಂಜಾನ್ ನಿಮಿತ್ತ ಕದನ ವಿರಾಮ ಘೋಷಣೆ ಮಾಡಲಾಗಿತ್ತು. ಅಲ್ಲದೇ ಯಾವುದೇ ರೀತಿಯ ಕಾರ್ಯಾಚರಣೆಗಳನ್ನು ಕೈಗೊಳ್ಳದಂತೆ ಸರ್ಕಾರ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಉಗ್ರರ ದಾಳಿ ತೀವ್ರಗೊಂಡ ಪರಿಣಾಮ ಅನೇಕ ಮಂದಿಯ ಸಾವಿಗೆ ಕಾರಣವಾಯಿತು ಎಂದು ಹೇಳಿದರು.

ರಂಜಾನ್ ಮುಗಿದಿದ್ದು, ರಾಜ್ಯಪಾಲರ ಆಳ್ವಿಕೆಯಿಂದ ಪೊಲೀಸರು ಹಾಗೂ ಸೇನೆಗೆ ಬಲ ಬಂದಿದೆ. ಹೀಗಾಗಿ ಇನ್ನು ಮುಂದಿನ ದಿನಗಳಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿ, ಜಮ್ಮು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಯೇ ನಮ್ಮ ಗುರಿ ಎಂದು ತಿಳಿಸಿದರು.

ರಾಜ್ಯಪಾಲರ ಆಡಳಿತ ಕಣಿವೆ ರಾಜ್ಯದಲ್ಲಿ ಪರಿಣಾಮ ಬೀರಲಿದೆ. ಪೊಲೀಸರು ಮತ್ತು ಸೇನೆಯು ಪರಿಣಾಮಕಾರಿಯಾಗಿ ಕೆಲಸ ಮಾಡಲಿದ್ದಾರೆ. ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಸುಧಾರಣೆಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಿಡಿಪಿ ಮೈತ್ರಿಯಿಂದ ಬಿಜೆಪಿ ಹಿಂದೆ ಸರಿದ ಪರಿಣಾಮ ಮೆಹಬೂಬ ಮುಫ್ತಿ ನೇತೃತ್ವದ ಸರ್ಕಾರ ಮುರಿದು ಬಿದ್ದಿತ್ತು. ಪರಿಣಾಮವಾಗಿ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿದ ಜಾರಿಗೆ ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *