ಬೆಂಗಳೂರು: ಕೋರ್ಟ್ ನಲ್ಲಿ ಇಂದು ಮುಡಾ (MUDA Scam) ಭ್ರಷ್ಟಾಚಾರ ಕೇಸ್ ವಿಚಾರಣೆ ಹಿನ್ನೆಲೆ ಇಡೀ ದಿನ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ.
ವಕೀಲರ ಜೊತೆ ಚರ್ಚೆ ಮತ್ತು ಕೋರ್ಟ್ ಕಲಾಪ ಹಿನ್ನೆಲೆಯಲ್ಲಿ ಸಿಎಂ ಯಾವುದೇ ಕಾರ್ಯಕ್ರಮಗಳನ್ನು ನಿಗದಿ ಮಾಡಿಕೊಳ್ಳಲಿಲ್ಲ. ಇದನ್ನೂ ಓದಿ: Parliament Attack| ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತಂದು ಫೇಮಸ್ ಆಗಬೇಕೆಂದುಕೊಂಡಿದ್ದ ಆರೋಪಿಗಳು
ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆ. 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ. ಅಂದು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಹೀಗಾಗಿ ಇಂದು ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಕಡಿಮೆ ಇದೆ. ಇದನ್ನೂ ಓದಿ: ಕೃಷಿಗೆ ಡಿಜಿಟಲ್ ಸ್ಪರ್ಶ; ಆಧಾರ್ನಂತೆ ರೈತರ ಜಮೀನಿಗೆ ಐಡಿ, ಡಿಜಿಟಲ್ ಮೂಲಕ ಬೆಳೆ ಸಮೀಕ್ಷೆ