Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: MUDA Scam | ಸರ್ಕಾರದ ವಿರುದ್ಧ ಸಮರ ಸಾರಿದ ವಿಜಯೇಂದ್ರ – ಶುಕ್ರವಾರ ಮೈಸೂರಲ್ಲಿ ಬೃಹತ್‌ ಪ್ರತಿಭಟನೆಗೆ ಕರೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | MUDA Scam | ಸರ್ಕಾರದ ವಿರುದ್ಧ ಸಮರ ಸಾರಿದ ವಿಜಯೇಂದ್ರ – ಶುಕ್ರವಾರ ಮೈಸೂರಲ್ಲಿ ಬೃಹತ್‌ ಪ್ರತಿಭಟನೆಗೆ ಕರೆ!

Bengaluru City

MUDA Scam | ಸರ್ಕಾರದ ವಿರುದ್ಧ ಸಮರ ಸಾರಿದ ವಿಜಯೇಂದ್ರ – ಶುಕ್ರವಾರ ಮೈಸೂರಲ್ಲಿ ಬೃಹತ್‌ ಪ್ರತಿಭಟನೆಗೆ ಕರೆ!

Public TV
Last updated: July 10, 2024 2:44 pm
Public TV
Share
6 Min Read
Vijayendra
SHARE

– ಬಡ ಹೆಣ್ಮಕ್ಕಳಿಗೆ 2,000 ಕೊಟ್ಟು, ತಮ್ಮ ಪತ್ನಿಗೆ 2 ಕೋಟಿಗೂ ಅಧಿಕ ಮೌಲ್ಯದ ನಿವೇಶನ ಕೊಟ್ಟಿದ್ದಾರೆ
– ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು – ವಿಜಯೇಂದ್ರ ಆಗ್ರಹ

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ದ ಅಕ್ರಮವನ್ನು ಖಂಡಿಸಿ ಬಿಜೆಪಿ ವತಿಯಿಂದ ಇದೇ ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಬೆಂಗಳೂರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಜು.12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ. ಈ ಬಾರಿ ಹಗರಣದ ಸಮಗ್ರ ತನಿಖೆಯನ್ನು ಸಿಬಿಐಗೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ಮಹತ್ವದ ತೀರ್ಪು

ಶಾಸಕರು, ಸಿಎಂ ಪರಮಾಪ್ತರು ಬುಧವಾರ ಪ್ರೆಸ್‌ಮೀಟ್‌ ಮಾಡಿದ್ದಾರೆ. 1992ರಲ್ಲಿ ಭೂ ವಶಕ್ಕೆ ಪಡೆಯುವ ಕೆಲಸ ಶುರುವಾಗಿದೆ. 2004ರಲ್ಲಿ ಪಾರ್ವತಮ್ಮ ಅವರ ಅಣ್ಣ ಜಮೀನು ಖರೀದಿ ಮಾಡಿದ್ದಾರೆ. ಮೂಡಾ ಸ್ವಾಧೀನದಲ್ಲಿದ್ದ ಜಾಗವನ್ನು ಮಲ್ಲಿಕಾರ್ಜುನ ಸ್ವಾಮಿ ಅವರು ಖರೀದಿ ಮಾಡಿದ್ದು ಹೇಗೆ? 2009 – 10ರಲ್ಲಿ ಗಿಫ್ಟ್ ಡೀಡ್ ಆದಾಗಲೂ ಸಹ ಈ ಜಾಗವು ಮೂಡಾ ಆರ್‌ಟಿಸಿಯಲ್ಲಿ ನಮೂದಾಗಿತ್ತು. ಭೂಮಿ ಖರೀದಿ ಆಗಿ ಕನ್ವರ್ಷನ್ ಆಗಿತ್ತು. ಗಿಫ್ಟ್ ಡೀಡ್ ಎಂದು ಮಾಹಿತಿ ಕೊಡುವಾಗಲೂ ಅದು ಕೃಷಿ ಭೂಮಿ ಆಗಿರಲಿಲ್ಲ. ಇದು ಕೂಡ ತಪ್ಪು ಮಾಹಿತಿ ಎಂದು ವಿಜಯೇಂದ್ರ ಮಾಹಿತಿ ನೀಡಿದರು.

2 ನಿವೇಶನಕ್ಕೆ ಅರ್ಹತೆ – 14 ನಿವೇಶನ ಹಂಚಿಕೆ:
2022ರ ಜನವರಿ 12ರಂದು ಕ್ರಯಪತ್ರ ಆಗಿದ್ದು, ಇದರಲ್ಲಿ ಗಮನಿಸಬೇಕಾದ ಅಂಶ ಏನೆಂದರೆ ಮೂಡಾ ಪ್ರೋತ್ಸಾಹದಾಯಕ ಯೋಜನೆಯಡಿಯಲ್ಲಿ ನಿಯಮಗಳು 1991ರ ಮೇರೆಗೆ ಎಂದು ಉಲ್ಲೇಖಿಸಿ 14 ಸೈಟ್ ಕೊಟ್ಟಿದ್ದಾರೆ. ಇದು ಕ್ರಯಪತ್ರದಲ್ಲಿ ಉಲ್ಲೇಖವಾಗಿದೆ. ಆದರೆ, 1991ರ ಕಾನೂನು ಪ್ರಕಾರ ಅವರಿಗೆ 1 ಎಕರೆ ಮೀರಿದ ಜಮೀನಾದರೆ 40-60 ಒಂದೇ ನಿವೇಶನ ಕೊಡಬೇಕು. 3ರಿಂದ 4 ಎಕರೆ ಆಗಿದ್ದರೆ 4,800 ಅಡಿಯ ನಿವೇಶನ (40-60ರ 2 ನಿವೇಶನ) ಕೊಡಬೇಕಿತ್ತು. ಮುಖ್ಯಮಂತ್ರಿಯವರ ಧರ್ಮಪತ್ನಿ ಪಾರ್ವತಮ್ಮ ಅವರಿಗೆ 2 ನಿವೇಶನ ಮಾತ್ರ ಕೊಡಬೇಕಿತ್ತು. 2 ನಿವೇಶನದ ಬದಲು 14 ನಿವೇಶನ ಕೊಟ್ಟಿದ್ದು, ಇದು ಸಂಪೂರ್ಣ ಕಾನೂನುಬಾಹಿರ ಎಂದು ವಿಜಯೇಂದ್ರ ಅವರು ವಿಜಯೇಂದ್ರ ಆಕ್ಷೇಪಿಸಿದರು.

ಮೈಸೂರಿನದ್ದು ಲ್ಯಾಂಡ್ ಸ್ಕ್ಯಾಮ್:
ಮುಡಾ ಪ್ರಾಧಿಕಾರದ ಭೂಮಿ ಸಂಬಂಧ ದೊಡ್ಡ ಹಗರಣ ಅಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯನವರು ಅನೇಕ ತಪ್ಪು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಗಳ ಮುಖವಾಡ ಕಳಚಿಬಿದ್ದಿದೆ. ಹೇಗಾದರೂ ಬೆಲೆಬಾಳುವ ನಿವೇಶನ ಕಬಳಿಸಬೇಕು ಎಂದುಕೊಂಡು ನಿಯಮ ಗಾಳಿಗೆ ತೂರಿ ಅಕ್ರಮ ನಡೆಸಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ಜನತೆಗೆ ಉತ್ತರಿಸಬೇಕು. ಈ ಹಗರಣಕ್ಕೆ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: 2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ!

ಮಹದೇವಪ್ಪನವರೇ ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಎಂದ ಸಿಎಂ, ಬಡ ಹೆಣ್ಮಕ್ಕಳಿಗೆ 2 ಸಾವಿರ ಕೊಟ್ಟರೆ, ತಮ್ಮ ಪತ್ನಿಗೆ 2 ಕೋಟಿಗೂ ಹೆಚ್ಚು ಮೌಲ್ಯದ 14 ನಿವೇಶನಗಳನ್ನು ಪಡೆದಿದ್ದಾರೆ. 63-64 ಕೋಟಿಗೂ ಹೆಚ್ಚು ಬೆಲೆಯ ನಿವೇಶನ ಪಡೆದುದನ್ನು ರಾಜ್ಯದ ಜನರೂ ಪ್ರಶ್ನೆ ಮಾಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಮಳೆಯಿಂದ ಜೀವಕಳೆ, ಕಬಿನಿ ಡ್ಯಾಂ ಭರ್ತಿಗೆ ಎರಡೇ ಅಡಿ ಬಾಕಿ – ಯಾವ್ಯಾವ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

ಅವ್ಯವಹರಿಸಿ ಪರಿಹಾರ ಕೇಳಿದ ಮೊದಲ ಸಿಎಂ ಇವರೇ:
ತಮ್ಮ ಅವಧಿಯಲ್ಲಿ ಅವ್ಯವಹಾರ ನಡೆಸಿ, ತಾವೇ ಪರಿಹಾರ ಕೇಳಿರುವ ಮೊದಲ ಮುಖ್ಯಮಂತ್ರಿ ಇವರು. ಮೈಸೂರಿನ ಕೆಸರೇ ಗ್ರಾಮದ 3.16 ಎಕರೆ ಜಮೀನಿಗೆ ಬದಲಾಗಿ ತಮ್ಮ ಪತ್ನಿಗೆ 14 ನಿವೇಶನ ಮಂಜೂರು ಮಾಡಿಸಿಕೊಂಡಿದ್ದಾರೆ. ಅದರ ಬೆಲೆ 62 ಕೋಟಿ ರೂ. ಬರಬೇಕಿದ್ದು, 18 ಕೋಟಿಯ ನಿವೇಶನ ಪಡೆದುದ್ದಾಗಿ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿಗಳು 2013ರ ಚುನಾವಣಾ ಅಫಿಡವಿಟ್‍ನಲ್ಲಿ 3.16 ಎಕರೆ ಭೂಮಿಯನ್ನು ಉಲ್ಲೇಖಿಸಿಲ್ಲ. ಇದು ಚುನಾವಣೆ ನಿಯಮಗಳ ಉಲ್ಲಂಘನೆ. ಇದೆಲ್ಲವನ್ನೂ ಪರಿಶೀಲಿಸಿ ಚುನಾವಣಾ ಆಯೋಗಕ್ಕೆ ದೂರು ಕೊಡುವ ಕುರಿತು ನಿರ್ಧರಿಸುತ್ತೇವೆ ಎಂದು ಬಿ.ವೈ ವಿಜಯೇಂದ್ರ ಅವರು ತಿಳಿಸಿದರು.

18 ಕೋಟಿ ರೂ. ನಿವೇಶನ ಲಭಿಸಿದೆ. ಆದರೆ, 62 ಕೋಟಿ ರೂ. ಮೌಲ್ಯದ ನಿವೇಶನಗಳು ಸಿಗಬೇಕಿತ್ತು ಎಂದು ತಪ್ಪು ಮಾಹಿತಿ ಕೊಟ್ಟಿದ್ದಾರೆ. ಮೂಡಾ ಹಗರಣದಲ್ಲಿ 2 ಪ್ರಕರಣಗಳಿವೆ. ಸಿಎಂ ಧರ್ಮಪತ್ನಿಗೆ ಕೊಟ್ಟ 14 ನಿವೇಶನಗಳದ್ದು ಒಂದು ಪ್ರಕರಣ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಓಡೋಡಿ ತರಾತುರಿಯಲ್ಲಿ ಮೈಸೂರಿಗೆ ಹೋಗಿ ಮುಡಾ ಅಧಿಕಾರಿಗಳ ಸಭೆ ನಡೆಸಿದ್ದರು. ಸಭೆಯಲ್ಲಿ ಮಾಹಿತಿ ಪಡೆದು ಎಲ್ಲ ಅಧಿಕಾರಿಗಳನ್ನೂ ಏಕಾಏಕಿ ವರ್ಗಾವಣೆ ಮಾಡಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದರು.

ಇದು ಅತಿದೊಡ್ಡ ಭ್ರಷ್ಟಾಚಾರ ಹಗರಣ:
5 ಸಾವಿರ ಕೋಟಿ ರೂ.ಗಿಂತಲೂ ಹೆಚ್ಚು ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ. ಹಗರಣದಲ್ಲಿ ಭಾಗಿಯಾದವರನ್ನು ಶಿಕ್ಷಿಸುವುದನ್ನು ತಪ್ಪಿಸಲು ಹಾಗೂ ರಕ್ಷಿಸಲು ಭೈರತಿ ಸುರೇಶ್ ಮುಂದಾಗಿದ್ದಾರೆ. ಮೂಡಾ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿ ವರದಿ ಕೊಟ್ಟ ಜಿಲ್ಲಾಧಿಕಾರಿಯನ್ನೂ ತರಾತುರಿಯಲ್ಲಿ ವರ್ಗಾವಣೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಭೈರತಿ ಸುರೇಶ್ ಅವರು ಈ ಹಗರಣ ಮುಚ್ಚಿ ಹಾಕಲು ಎಲ್ಲ ಕಡತಗಳನ್ನು ಬೆಂಗಳೂರಿಗೆ ಒಯ್ದಿದ್ದಾರೆ. ಹಗರಣ ಮುಚ್ಚಿ ಹಾಕುವ ಕೆಲಸ ನಡೆಯುತ್ತಲೇ ಇದೆ. ಸಿಎಂ ಕೂಡ ಮೈಸೂರು ಜಿಲ್ಲೆಯವರು. ಅತಿ ದೊಡ್ಡ ಭ್ರಷ್ಟಾಚಾರ ಹಗರಣವಿದು. ಎಲ್ಲ ಕಡತ ಮುಚ್ಚಿಡಲು ಭೈರತಿ ಸುರೇಶ್ ಮುಂದಾಗಿದ್ದಾರೆ ಎಂದ ಅವರು, ದೇವನೂರು ಜಮೀನಿನ ಬೆಲೆ ಬಗ್ಗೆ ಸಿಎಂ ಮಾತನಾಡುತ್ತಾರೆ. ಗೈಡ್‍ಲೈನ್ ಮೌಲ್ಯ 1,300 ರೂ. ಇದ್ದರೆ 9 ಸಾವಿರ ಮಾರುಕಟ್ಟೆ ಮೌಲ್ಯ ಇದೆ. 2 ಸೈಟಿಗೆ ಮಾತ್ರ ಅವರು ಅರ್ಹರಾಗಿದ್ದರು ಎಂದು ಪುನರುಚ್ಚರಿಸಿದರು.

ಮೂಡಾ ಅವ್ಯವಹಾರಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳ ವರದಿಯ ಬಳಿಕವೂ 15-6-2024ರಲ್ಲಿ ಸುಮಾರು 42 ಸೈಟ್‍ಗಳನ್ನು ಒಬ್ಬರಿಗೆ ಬದಲಿಯಾಗಿ ಕೊಟ್ಟಿದ್ದಾರೆ. ಇಂಥ ಸಾವಿರಾರು ನಿವೇಶನಗಳನ್ನು ಈ ಸರ್ಕಾರ ಕಾನೂನುಬಾಹಿರವಾಗಿ ಕೊಟ್ಟಿದೆ. ಬಡವರು, ದಲಿತರು, ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ನಿವೇಶನಗಳನ್ನು ತಮಗೆ ಬೇಕಾದಂತೆ ಹಂಚಿದ್ದಾರೆ. ಸಿಬಿಐ ತನಿಖೆ ಮಾತ್ರವಲ್ಲದೇ ಮುಖ್ಯಮಂತ್ರಿಗಳು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರಲ್ಲದೇ ಸದನದಲ್ಲೂ ಈ ವಿಚಾರ ಕೈಗೆತ್ತಿಕೊಳ್ಳುತ್ತೇವೆ. ಸದನದ ಹೊರಗೆ ಕೂಡ ಈ ಸಂಬಂಧ ಬಿಜೆಪಿಯಿಂದ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

ವಾಲ್ಮೀಕಿ ನಿಗಮದ ಹಗರಣ ಸಂಬಂಧ ಪ್ರಶ್ನೆಗೆ ಉತ್ತರಿಸಿದ ಅವರು, ದಲಿತರಿಗೆ ಮೀಸಲಿಟ್ಟ ಹಣವನ್ನು ಚುನಾವಣೆಗೆ ಬಳಸಿಕೊಂಡಿದ್ದಾರೆ. ದದ್ದಲ್, ನಾಗೇಂದ್ರರನ್ನು ಎಸ್‍ಐಟಿ ತನಿಖೆಗೆ ಕರೆಯಲು ಬಿಜೆಪಿ ಪ್ರತಿಭಟನೆಯೇ ಕಾರಣ. ಆದರೂ, ಇದು ತಿಪ್ಪೆ ಸಾರಿಸುವ ಕೆಲಸ. ಇಡಿ ಇವತ್ತು ದಾಳಿ ಮಾಡಿದ್ದನ್ನು ನಾವು ಸ್ವಾಗತಿಸುತ್ತೇವೆ. ಎಸ್‍ಐಟಿ ನಿಧಾನವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರವು ಸಚಿವರು, ಶಾಸಕರನ್ನು ರಕ್ಷಿಸಲು ಮುಂದಾಗಿತ್ತು ಎಂದು ದೂರಿದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪತ್ರದ ಬಳಿಕ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ. ಒಂದೆಡೆ ಎಸ್‍ಐಟಿ ತನಿಖೆ ನಡೆದರೆ, ಇಡಿ ದಾಳಿಯೂ ಆಗಿದೆ. ಇತಿಹಾಸದಲ್ಲಿ ಕಂಡು ಕೇಳರಿಯದ ಹಗರಣ ಇದಾಗಿದೆ. ದಲಿತರಿಗೆ ಮೀಸಲಿಟ್ಟ ಹಣವನ್ನು ದುರುಪಯೋಗ ಮಾಡಿ, ಹೊರರಾಜ್ಯಕ್ಕೆ ವರ್ಗಾವಣೆ ಮಾಡಿ, ಚುನಾವಣೆಗಳಿಗೆ ಹಣ ದುರ್ಬಳಕೆ ಮಾಡಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು. ಇದನ್ನೂ ಓದಿ: ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಊರ್ವಶಿ ರೌಟೇಲಾಗೆ ಏಟು- ಆಸ್ಪತ್ರೆಗೆ ದಾಖಲು 

TAGGED:BY VijayendraCBI InvestigationKarnataka govtMUDA Scamsiddaramaiahಕರ್ನಾಟಕ ಸರ್ಕಾರಬಿಜೆಪಿಮುಡಾ ಹಗರಣವಿಜಯೇಂದ್ರಸಿದ್ದರಾಮಯ್ಯಸಿಬಿಐ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
3 hours ago
ed enters into nagamangala land scam
Crime

ನಾಗಮಂಗಲ ಭೂ ಹಗರಣಕ್ಕೆ ಇಡಿ ಎಂಟ್ರಿ

Public TV
By Public TV
4 hours ago
PREGNENT
Bengaluru City

ಭ್ರೂಣ ಹತ್ಯೆ ತಡೆಗೆ ಸರ್ಕಾರದ  ದಿಟ್ಟ ಕ್ರಮ – ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

Public TV
By Public TV
4 hours ago
Ishan Kishan Suryakumar Yadav
Cricket

ಸೂರ್ಯ, ಕಿಶನ್‌ ಸ್ಫೋಟಕ ಆಟಕ್ಕೆ ಪಾಕ್‌ ದಾಖಲೆ ಉಡೀಸ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ

Public TV
By Public TV
4 hours ago
Chickpea
Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
By Public TV
5 hours ago
Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?