Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: MUDA Scam | ಸಿಎಂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್‌ – ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | MUDA Scam | ಸಿಎಂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್‌ – ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ!

Bengaluru City

MUDA Scam | ಸಿಎಂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್‌ – ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ!

Public TV
Last updated: August 31, 2024 5:40 pm
Public TV
Share
4 Min Read
siddaramaiah 1 2
SHARE

ಬೆಂಗಳೂರು: ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಹೈಕೋರ್ಟ್‌ನಲ್ಲಿ ಇನ್ನೆರಡು ದಿನಗಳ ಕಾಲ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ಸೆಪ್ಟೆಂಬರ್‌ 2ಕ್ಕೆ ಹೈಕೋರ್ಟ್‌ (Karnataka High Court )ಮುಂದೂಡಿದೆ.

ಸೋಮವಾರ ಮಧ್ಯಾಹ್ನ 2:30ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಲಾಗಿದೆ. ಆ ಮೂಲಕ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್‌ ಮುಂದುವರಿಸಿದೆ.

Thawar Chand Gehlot

ದೂರುದಾರ ಟಿ.ಜೆ.ಅಬ್ರಹಾಂ ಪರ ಹಿರಿಯ ವಕೀಲ ರಂಗನಾಥ್ ರೆಡ್ಡಿ ವಾದ ಮುಗಿಸುತ್ತಿದ್ದಂತೆ ಮತ್ತಷ್ಟು ವಕೀಲರಿಂದ ವಾದ ಮಂಡನೆಗೆ ಮನವಿ ಮಾಡಲಾಯಿತು. ಇದಕ್ಕೆ ಇಡೀ ದಿನ ವಾದ ಮಂಡನೆಗೆ ಅವಕಾಶ ಕೊಟ್ಟಿದ್ದೀನಿ ಎಂದು ಗರಂ ಆದರು.

ಈ ವೇಳೆ ಮಧ್ಯಪ್ರವೇಶಿಸಿದ ಅಬ್ರಹಾಂ ಪರ ವಕೀಲರಾದ ರಂಗನಾಥ್‌ ರೆಡ್ಡಿ, ರಾಜ್ಯಪಾಲರ ಮುಂದೆ ಯಾವುದೇ ಜನಪ್ರತಿನಿಧಿಗಳ ಪ್ರಾಸಿಕ್ಯೂಷನ್ ಅನುಮತಿ ಬಾಕಿ ಇಲ್ಲ ಎಂದು ಹೇಳಿದರು. ಅದಕ್ಕೆ ನಿಮಗೆ ಹೇಗೆ ಗೊತ್ತಾಯ್ತು? ಅಂತ ಜಡ್ಜ್‌ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ರಂಗನಾಥ್‌ ರೆಡ್ಡಿ ಅವರು ಆರ್‌ಟಿಐ ಮೂಲಕ ಮಾಹಿತಿ ಪಡೆದುಕೊಳ್ಳಲಾಗಿದೆ. ಎಲ್ಲಾ ಅರ್ಜಿಗಳನ್ನ ವಿಲೇವಾರಿ ಮಾಡಲಾಗಿದೆ. ರಾಜ್ಯಪಾಲರ ಮುಂದೆ ಸದ್ಯ ಯಾವುದೇ ಪ್ರಾಸಿಕ್ಯೂಷನ್ ಮನವಿ ಅರ್ಜಿ ಬಾಕಿ ಇಲ್ಲ ಎಂದು ವಾದ ಮಂಡಿಸಿದರು.

ಈ ವೇಳೆ ಎ.ಜಿ ಶಶಿಕಿರಣ್ ಶೆಟ್ಟಿ ಅವರಿಂದ ವಾದಕ್ಕೆ ಮನವಿ ಮಾಡಲಾಯಿತು. ಇದಕ್ಕೆ ಜಡ್ಜ್‌ ದಿನ ಬೇಕಿದ್ರೆ 3:30ಕ್ಕೆ ವಿಚಾರಣೆಗೆ ತೆಗೆದುಕೊಳ್ತೀನಿ, ಅದಕ್ಕೂ ಮೊದಲು ಸಾಧ್ಯವಿಲ್ಲ ಎಂದರು. ಈ ವೇಳೆ ಪ್ರತಿವಾದಿಗಳ ವಾದಕ್ಕೆ ಉತ್ತರ ಕೊಡಲು ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಸಮಯಾವಕಾಶ ನೀಡುವಂತೆ ಕೋರಿದರು. ನಂತರ ಕೋರ್ಟ್‌, ಸೋಮವಾರಕ್ಕೆ (ಸೆ.2) ವಿಚಾರಣೆ ಮುಂದೂಡಿತು.

ಪ್ರಭುಲಿಂಗ ನಾವದಗಿ ಪ್ರಬಲ ವಾದ ಮಂಡನೆ:
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಾಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅನುಮತಿ ನೀಡಿದ್ದರು. ತಮ್ಮ ವಿರುದ್ಧ ತನಿಖೆಗೆ ಒಪ್ಪಿಗೆ ಸೂಚಿಸಿರುವ ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕುರಿತು ವಿಚಾರಣೆ ಶನಿವಾರ ಮುಂದುವರಿಯಿತು.

ತುಷಾರ್ ಮೆಹ್ತಾ ಮತ್ತು ಸಿಂಗ್ ವಾದ ಮುಕ್ತಾಯಗೊಳಿಸುತ್ತಿದ್ದಂತೆ ಪ್ರಭುಲಿಂಗ ನಾವದಗಿ ಅವರು ದೂರುದಾರ ಪ್ರದೀಪ್ ಕುಮಾರ್ ಪರ ವಾದ ಮಂಡಿಸಿದರು. ಈ ವೇಳೆ ಜಡ್ಜ್‌ ತುಂಬಾ ಜನ ವಾದ ಮಂಡನೆ ಮಾಡಿದ್ದೀರಿ, ಈ ಕೇಸ್‌ನಲ್ಲಿ ಸಿಎಂ ಪಾತ್ರದ ಬಗ್ಗೆ ಹೇಳಿ – ಅವರು ಈ ಪ್ರಕರಣದಲ್ಲಿ ಹೇಗೆ ಇದ್ದಾರೆ? ಅಂತ ಪ್ರಶ್ನೆ ಮಾಡಿದರು. ಈ ವೇಳೆ ಪ್ರಕರಣದಲ್ಲಿ ಸಿಎಂ ಪಾತ್ರವಿಲ್ಲ ಎಂದು ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು.

ಸಿಎಂ ವಿರುದ್ದ ಆರೋಪ ಇದ್ದಾಗ ರಾಜ್ಯಪಾಲರು ಸ್ವತಂತ್ರವಾಗಿ ನಿರ್ಧರಿಸಬಹುದು:
ಆದಾಗ್ಯೂ ಪ್ರಭುಲಿಂಗ್ ವಾದ ಮುಂದುವರಿಸಿದರು. ಮುಖ್ಯಮಂತ್ರಿಗಳ ಪಾತ್ರ, ಕ್ಯಾಬಿನೆಟ್ ನಿರ್ಣಯದ ಬಗ್ಗೆ ವಾದ ಮಂಡಿಸುತ್ತೇನೆ ಎಂದರು. ಕೆಲಸ ಸಂದರ್ಭಗಳಲ್ಲಿ ಕ್ಯಾಬಿನೆಟ್ ರಾಜ್ಯಪಾಲರಿಗೆ ಸಲಹೆ ನೀಡುವ ಅರ್ಹತೆ ಕಳೆದುಕೊಳ್ಳುತ್ತದೆ ಎಂದು ಆರ್.ಎಸ್ ನಾಯಕ್ ಪ್ರಕರಣ ಉಲ್ಲೇಖಿಸಿದರು. ತಮಗಿರುವ ಆಸಕ್ತಿಯ ಕಾರಣಕ್ಕೆ ಸಂಪುಟದ ಸಚಿವರು ಪ್ರಕರಣದಲ್ಲಿ ಪಕ್ಷಪಾತಿಗಳಾಗುವ ಕಾರಣದಿಂದಾಗಿ ರಾಜ್ಯಪಾಲರಿಗೆ ಸಲಹೆ ನೀಡುವ ಅಧಿಕಾರದಿಂದ ವಂಚಿತರಾಗುತ್ತಾರೆ ಎನ್ನುವ ಪೂರ್ವ ತೀರ್ಪೊಂದನ್ನು ಉಲ್ಲೇಖಿಸಿದರು. ರಾಜ್ಯಪಾಲರು ಕ್ಯಾಬಿನೆಟ್ ಸಲಹೆ ಪರಿಗಣಿಸುವ ವಿಚಾರವೇ ಇಲ್ಲ. ಸಿಎಂ ವಿರುದ್ದ ಆರೋಪ ಇದ್ದಾಗ ರಾಜ್ಯಪಾಲರು ಸ್ವತಂತ್ರವಾಗಿ ನಿರ್ಧಾರ ಮಾಡಬಹುದು ಎಂದು ಸುಪ್ರೀಂ ಕೋರ್ಟ್‌ನ ಎರಡು ತೀರ್ಪು ಗಳಿವೆ ಎಂದು ಕೋರ್ಟ್‌ ಗಮನಕ್ಕೆ ತಂದರು.

ಸಿಎಂ ಪ್ರಾಸಿಕ್ಯೂಷನ್ ವಿಚಾರದಲ್ಲಿ ಕ್ಯಾಬಿನೆಟ್ ನಿರ್ಧಾರ ಸಮಂಜಸವಲ್ಲ. ಇದರಿಂದ ಮೇಲ್ನೋಟಕ್ಕೆ ಪಕ್ಷಪಾತದ ಭಾವನೆ ಬರಲಿದೆ ಅಂತ ಸುಪ್ರೀಂ ಕೋರ್ಟ್‌ನ ಎ.ಕೆ.ಕ್ರೈಪಾಕ್ ಕೇಸ್ ಉಲ್ಲೇಖಿಸಿ ವಾದಮಂಡನೆ ಮಾಡಿದರು. ಸಂವಿಧಾನದ ವಿಧಿ 163 ಅಡಿಯಲ್ಲಿ ಸಿಎಂ ಕೂಡಾ ಕ್ಯಾಬಿನೆಟ್‌ನ ಭಾಗ. ಹೀಗಾಗಿ ಸಿಎಂ ಹೊರತಾದ ಕ್ಯಾಬಿನೆಟ್ ಇರಲು ಸಾಧ್ಯವಿಲ್ಲ. ಆದ್ದರಿಂದ ಕ್ಯಾಬಿನೆಟ್ ನಿರ್ಣಯವನ್ನು ರಾಜ್ಯಪಾಲರು ಪರಿಗಣಿಸಬೇಕಿಲ್ಲ ಎಂದು ವಾದಿಸಿದರು.

Thawar Chand Gehlot 2

ರಾಜ್ಯಪಾಲರ ಕ್ರಮ ಪ್ರಶ್ನಿಸಲು ಆರೋಪಿಗೆ ಅವಕಾಶವಿಲ್ಲ:
ಮುಂದುವರಿದು, 2018 ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆ.17 ಎ ಮತ್ತು 19 ತಿದ್ದುಪಡಿ ಮಾಡಲಾಗಿದೆ. ಆದರೆ ಸೆ.17 ಎ ನಲ್ಲಿ ಆರೋಪಿಗೆ ನೋಟಿಸ್ ನೀಡಲು ಅವಕಾಶವಿಲ್ಲ. ಸೆ.19 ಅಡಿಯಲ್ಲಿ ನೋಟಿಸ್ ನೀಡಲು ಅವಕಾಶವಿದೆ. ಆರೋಪಿಗೆ ನೋಟಿಸ್ ನೀಡಿ ತನಿಖೆಗೆ ಅವಕಾಶ ನೀಡಬಾರದು. ನೋಟಿಸ್ ನೀಡಿದರೆ ತನಿಖೆಯೇ ಪೂರ್ವಾಗ್ರಹಕ್ಕೊಳಗಾಗಲಿದೆ. 17 ಎ ಹಂತದಲ್ಲಿ ರಾಜ್ಯಪಾಲರ ಕ್ರಮ ಪ್ರಶ್ನಿಸಲು ಆರೋಪಿಗೆ ಅವಕಾಶವಿಲ್ಲ. ಎಫ್‌ಐಆರ್ ದಾಖಲಾದ ಬಳಿಕವಷ್ಟೇ ಆರೋಪಿಗೆ ಅದನ್ನು ಪ್ರಶ್ನಿಸುವ ಹಕ್ಕು ಬರಲಿದೆ ಎಂದು ಪ್ರಬಲ ವಾದ ಮಂಡನೆ ಮಾಡಿದರು.

ತನಿಖೆಗೆ ಕೊಟ್ಟ ಆದೇಶದಲ್ಲೇ ರಾಜ್ಯಪಾಲರು ಉಲ್ಲೇಖ ಮಾಡಿದ್ದಾರೆ. ಮೇಲ್ನೋಟಕ್ಕೆ ಇದರಲ್ಲಿ ಅಕ್ರಮ ನಡೆದಿದೆ ಅಂತ, ಆದೇಶ ಪ್ರತಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಸರ್ಕಾರಕ್ಕೆ ತನಿಖೆಯ ಅವಶ್ಯಕತೆ ಇದೆ ಅನಿಸಿದೆ. ಹೀಗಾಗಿ ನ್ಯಾಯಾಂಗ ತನಿಖಗೆ ಆದೇಶವನ್ನು ನೀಡಿದ್ದಾರೆ. ನಿವೃತ್ತ ನ್ಯಾಯಾಧೀಶ ದೇಸಾಯಿ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಾ ಇದೆ ಎಂದರು. ಇದೇ ವೇಳೆ ಮುಡಾ ಅಕ್ರಮ ತನಿಖೆಗಾಗಿ ನೇಮಿಸಲಾಗಿರುವ ಏಕಸದಸ್ಯ ಆಯೋಗ ಮತ್ತು ತನಿಖಾ ತಂಡದ ಕಾರ್ಯವ್ಯಾಪ್ತಿಯಲ್ಲಿ ನಿಯಮ 6,7,8ರ ಬಗ್ಗೆ ಆಕ್ಷೇಪಣೆಗಳ ಬಗ್ಗೆ ನಾವದಗಿ ನ್ಯಾಯಾಲಯದ ಗಮನಸೆಳೆದರು. ಮೇಲ್ನೋಟಕ್ಕೆ ಅಕ್ರಮವನ್ನು ಪರಿಗಣಿಸಲಾಗಿದೆ ಎನ್ನುವ ಅಂಶ ಸರ್ಕಾರದ ಆದೇಶಗಳಲ್ಲಿ ಇರುವ ಬಗ್ಗೆಯೂ ನ್ಯಾಯಾಧೀಶರ ಗಮನಕ್ಕೆ ತಂದರು.

ರಾಜ್ಯಪಾಲರು ಕಾರ್ಯವಿಧಾನ ಅನುಸರಿಸಿಲ್ಲ ಎನ್ನುವುದು ಬೇರೆ, ಅದರೆ ವಿವೇಚನೆ ಬಳಸಿಲ್ಲ ಎನ್ನಲಾಗದು. ತನಿಖೆಗೆ ನೇಮಿಸಿರುವ ಸರ್ಕಾರದ ಆದೇಶಗಳನ್ನು ರಾಜ್ಯಪಾಲರು ಗಮನಿಸಿದ್ದಾರೆ, ಹಾಗಾಗಿ ಅವರು ವಿವೇಚನೆ ಬಳಸಿಲ್ಲ ಎನ್ನಲಾಗದು ಎಂದು ವಾದಿಸಿದರು. ನಾವದಗಿ ಅವರ ಬಳಿಕ ದೂರುದಾರ ಟಿ.ಜೆ.ಅಬ್ರಹಾಂ ಪರ ಹಿರಿಯ ವಕೀಲ ರಂಗನಾಥ್ ರೆಡ್ಡಿ ವಾದ ಮಂಡಿಸಿದರು.

TAGGED:Karnataka High CourtMUDA Scam Casesiddaramaiahಕರ್ನಾಟಕ ಹೈಕೋರ್ಟ್ಮುಡಾಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
11 minutes ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
37 minutes ago
LPG Gas Shortage
Bagalkot

ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

Public TV
By Public TV
56 minutes ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 11-03-2026

Public TV
By Public TV
1 hour ago
supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?