Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮುಡಾ ಮಾಜಿ ಆಯುಕ್ತನ ಹೆಸ್ರಲ್ಲಿ 198, ಎಂಎಲ್‌ಸಿ ಹೆಸ್ರಲ್ಲಿ 128 ಬೇನಾಮಿ ಸೈಟ್ – 631 ಸೈಟುಗಳ ಮಾಹಿತಿ ಕೇಳಿದ ಇಡಿ

Public TV
Last updated: January 18, 2025 6:25 pm
Public TV
Share
5 Min Read
MUDA SITE
SHARE

– ಬೇನಾಮಿ ವಹಿವಾಟು ನೋಡಿ ಬೆಚ್ಚಿಬಿದ್ದ ಇಡಿ

ಮೈಸೂರು: ಈಗಾಗಲೇ 300 ಕೋಟಿ ರೂ. ಮೌಲ್ಯದ 143 ಸೈಟ್‌ಗಳನ್ನು ಜಪ್ತಿ ಮಾಡಿರೋ ಇಡಿ, ಸದ್ಯದಲ್ಲೇ ಮುಡಾ ಸ್ಥಿರಾಸ್ತಿ (Immovable Properties) ಜಪ್ತಿಯ ಭಾಗ-2 ಕಾರ್ಯಾಚರಣೆ ಶುರು ಮಾಡುವ ಸಾಧ್ಯತೆ ಇದೆ. 631 ಮುಡಾ ನಿವೇಶನಗಳ ಬಗ್ಗೆ ಮಾಹಿತಿ ನೀಡುವಂತೆ ಇಡಿ (ED) ಕೇಳಿದೆ.

MUDA SITE 2

ಕಳೆದ ಡಿಸೆಂಬರ್ 16ರಂದೇ ಮುಡಾಗೆ ಇಡಿ ಅಧಿಕಾರಿಗಳು ಬರೆದಿರುವ ಪತ್ರ ʻಪಬ್ಲಿಕ್ ಟಿವಿʼಗೆ (PUBLiC TV) ಲಭ್ಯವಾಗಿದೆ. ಅಕ್ರಮ ಹಣ ವರ್ಗಾವಣೆ ಹಿನ್ನೆಲೆಯಲ್ಲಿ ನಿವೇಶನಗಳ ವಿವರ ಕೇಳಿದ್ದು, ಮುಡಾ ಅಧಿಕಾರಿಗಳನ್ನ ಸಂಪರ್ಕ ಮಾಡಿ ಮತ್ತೊಂದು ಲಿಸ್ಟ್ ಕಳುಹಿಸುವಂತೆ ಸೂಚನೆ ನೀಡಿದ್ದಾರೆ. ಅಕ್ರಮ ಹಣ ವ್ಯವಹಾರ ಸಂಬಂಧ ಸಿಕ್ಕ ದಾಖಲೆಗಳ ಆಧಾರದಲ್ಲಿ ಲಿಸ್ಟ್ ಕೇಳಿದ್ದು, ಜಾರಿ ನಿರ್ದೇಶನಾಲಯ ಮುಡಾ ಕಚೇರಿಯಲ್ಲಿ ಭ್ರಷ್ಟರ ಬೇಟೆ ಮುಂದುವರಿಸಿದೆ. ಇದನ್ನೂ ಓದಿ: ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ – ವಿಜಯೇಂದ್ರ ಆಗ್ರಹ

ಎಂಎಲ್‌ಸಿ ಹೆಸ್ರಲ್ಲಿ 128 ಸೈಟು:
ಮುಡಾ ಸೈಟು ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕಪ್ಪು ಹಣದ ವಹಿವಾಟು ಹೆಚ್ಚಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. 631 ಸೈಟುಗಳ ಖರೀದಿಯಲ್ಲಿ ದೊಡ್ಡಮಟ್ಟದಲ್ಲಿ ಕಪ್ಪು ಹಣದ ವಹಿವಾಟು ನಡೆದಿದೆ ಎಂದು ಇಡಿ ಮೂಲಗಳು ತಿಳಿಸಿವೆ. ಅಲ್ಲದೇ ಮುಡಾ ಮಾಜಿ ಆಯುಕ್ತನ ಹೆಸರಲ್ಲಿ 198, ಮೈಸೂರಿನ ಎಂಎಲ್‌ಸಿ ಒಬ್ಬರಿಗೆ ಸೇರಿದೆ ಎನ್ನಲಾದ 128 ಸೈಟುಗಳ ದಾಖಲೆಗಳು ಪತ್ತೆಯಾಗಿವೆ. ಮೂಡಾ ನಗರ ಯೋಜನೆ ಅಧಿಕಾರಿ ಒಬ್ಬರಿಗೆ ಸೇರಿದ 92 ಬೇನಾಮಿ ಸೈಟಿನ ದಾಖಲೆಗಳೂ ಪತ್ತೆಯಾಗಿವೆ. ಮುಡಾದಲ್ಲಿ ಬೇನಾಮಿ ಆಸ್ತಿ ವಹಿವಾಟು ಕಂಡು ಇಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಇದನ್ನೂ ಓದಿ: ಸಿದ್ರಾಮಣ್ಣ ಏನೇನು ಬೆಲೆ ಜಾಸ್ತಿ ಮಾಡ್ತಿರೋ ಒಟ್ಟಿಗೆ ಮಾಡಿ ಬಿಡಿ – ಅಶೋಕ್

ಮಾಜಿ ಆಯುಕ್ತರ ಕುಟುಂಬಸ್ಥರ ಹೆಸರಲ್ಲಿ ಆಸ್ತಿಗಳು ಪತ್ತೆ:
ಮೈಸೂರಿನ ರಿಯಲ್ ಎಸ್ಟೇಟ್ ಏಜೆಂಟ್ ಹೆಬ್ಬೆಟ್ ಜಯರಾಮ್ ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಬೇನಾಮಿ ಆಗಿದ್ದಾರಾ ಎಂಬ ಅನುಮಾನ ದಟ್ಟವಾಗಿದೆ. ಜಯರಾಮ್ ಮನೆ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ನಿರಂತರ 70 ಗಂಟೆ ರೇಡ್ ಮಾಡಿದ್ದರು. ಆಗ ಜಯರಾಮ್ ಮನೆಯಲ್ಲಿ ಬಹುತೇಕ ಬೇನಾಮಿ ದಾಖಲೆಗಳು ಸಿಕ್ಕಿವೆ. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಹೆಸರಿಲ್ಲಿ ಬೇನಾಮಿ ನಡೆದಿದೆ ಎನ್ನಲಾಗುತ್ತಿದ್ದು, ಮುಡಾ ಮಾಜಿ ಆಯುಕ್ತ ದಿನೇಶ್ ಕುಟುಂಬಸ್ಥರ ಹೆಸರಿನಲ್ಲಿ ಆಸ್ತಿಗಳು ಇವೆ ಎನ್ನಲಾಗಿದೆ.

ರಿಯಲ್ ಎಸ್ಟೇಟ್ ಏಜೆಂಟ್ ಹೆಬ್ಬೆಟ್ ಜಯರಾಮ್ ವಿಚಾರಣೆ ವೇಳೆ ಮತ್ತೊಂದು ಸ್ಫೋಟಕ ವಿಚಾರ ಬಯಲಾಗಿದ್ದು, ಪ್ರಾಥಮಿಕ ವಿಚಾರಣೆಯಲ್ಲಿ ಹಲವರ ಹೆಸರು ಬಾಯಿಬಿಟ್ಟಿದ್ದಾನೆ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಸಂಬಂಧಿ ತೇಜಸ್ ಗೌಡ ಹೆಸರನ್ನು ಜಯರಾಮ್ ತಿಳಿಸಿದ್ದಾನೆ. ಹೀಗಾಗಿಯೆ ಹೆಬ್ಬೆಟ್ ಜಯರಾಮ್ ಮನೆ ಕಚೇರಿ ಮೇಲೆ ರೇಡ್ ಆಗುತ್ತಿದ್ದಂತೆ ಮುಡಾ ಮಾಜಿ ಆಯುಕ್ತ ದಿನೇಶ್ ಎಸ್ಕೇಪ್ ಆಗಿದ್ದರು. ಹೆಬ್ಬೆಟ್ ಜಯರಾಮ್ ನಡೆಸುತ್ತಿದ್ದ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದಲ್ಲಿ ದಿನೇಶ್ ಕುಟುಂಬಸ್ಥರೆ ನಿರ್ದೇಶಕರಾಗಿದ್ದಾರೆ ಎನ್ನಲಾಗಿದೆ.

ಮುಡಾ ಅಕ್ರಮಕ್ಕೆ `ಕೋಕನಟ್’ ಕೋಡ್‌ವರ್ಡ್:
ಬೇನಾಮಿ ಡೀಲ್ ವಹಿವಾಟಿಗೆ ಹೆಬ್ಬೆಟ್ ಜಯರಾಮ್ ಇಟ್ಟಿದ್ದ ಹೆಸರು ಕೋಕನಟ್. ಅಧಿಕಾರಿಗಳಿಗೆ ರಾಜಕಾರಣಿಗಳಿಗೆ ಕೋಕನಟ್ ಹೆಸರಿನಲ್ಲೆ ಜಯರಾಮ್ ದುಡ್ಡು ಕಳುಹಿಸುತ್ತಿದ್ದನಂತೆ. ಜಯರಾಮ್ ವಾಟ್ಸಪ್‌ ಚಾಟ್‌ನಲ್ಲಿ ಮಹತ್ತರ ವಿಚಾರ ಇಡಿಗೆ ಸಿಕ್ಕಿದೆ. ಒಂದು ಕೋಕನಟ್ ಎಂದರೆ ಒಂದು ಲಕ್ಷ. 50 ಕೋಕನಟ್ ಎಂದರೆ 50 ಲಕ್ಷ. 100 ಕೋಕನಟ್ ಎಂದರೆ 1 ಕೋಟಿ. ಹೀಗೆ ಹಲವು ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ ಕೋಕನಟ್ ಹೆಸರಿನಲ್ಲಿ ಹೆಬ್ಬೆಟ್ ಜಯರಾಮ್ ಹಣ ಕಳುಹಿಸಿದ್ದ ಎನ್ನಲಾಗುತ್ತಿದ್ದು, ಎಲ್ಲಾ ದಾಖಲೆಗಳನ್ನು ಇಡಿ ಸೀಜ್ ಮಾಡಿದೆ.

ಸಿಎಂ ರಾಜೀನಾಮೆಗೆ ಬಿಗಿಪಟ್ಟು ಹಿಡಿದ ಬಿಜೆಪಿ
ಜಾರಿ ನಿರ್ದೇಶನಾಲಯ 143 ಮುಡಾ ಬೇನಾಮಿ ಸೈಟ್‌ಗಳು ಸೀಜ್ ಮಾಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು ಹಿಡಿದಿದೆ. ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಅಂತ ಆಗ್ರಹಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರದಿಂದ ಸಮ್ಮತಿ

ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ.. ಆದ್ರೆ, ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ ಅಂತ ಆರೋಪಿಸಿರೋ ಡಿಸಿಎಂ ಡಿಕೆ ಶಿವಕುಮಾರ್, ಇನ್ವೆಸ್ಟಿಗೇಷನ್ ಲಾಂಗ್ ಪ್ರೊಸೆಸ್ ಆಗಿದೆ.. ಅದು ಕೋರ್ಟ್ ಟ್ರಯಲ್ ಮಾಡೋದು.. ಅದನ್ನ ನಾನು ನೀವು ಟ್ರಯಲ್ ಮಾಡೋದಲ್ಲ.. ಸಿಎಂ ಪತ್ನಿ ಆಗಲಿ.. ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ ಅಂತ ಹೇಳಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ..

ಒಟ್ನಲ್ಲಿ ಮುಡಾ ಹಗರಣ ವಿಚಾರದಲ್ಲಿ ಒಂದು ಹಂತದ ವಿಚಾರಣೆ ಮುಗಿದಿದ್ದು, ಬೇನಾಮಿ ಆಸ್ತಿ ಮಾಡಿದವರಿಗೆ ಮಾರಿ ಹಬ್ಬ ಶುರುವಾಗಿದೆ. ಮತ್ತೊಂದೆಡೆ ರಾಜಕೀಯ ವಾಕ್ಸಮರವೂ ಜೋರಾಗಿದ್ದು, ವಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ.. ಆದ್ರೆ, ಪವರ್ ಫೈಟ್ ನಡುವೆಯೂ ಸಿಎಂ ಪರ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ಯಾಟ್ ಬೀಸಿದ್ದು, ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ – ಕೇಂದ್ರದ ಒತ್ತಾಸೆಯಿಂದ ಇವಿ ವಾಹನ ಮಾರಾಟ ಹೆಚ್ಚಳ: ಹೆಚ್‌ಡಿಕೆ

`ಪಬ್ಲಿಕ್ ಟಿವಿ’ಯಲ್ಲಿ ಬಿಗ್ ಎಕ್ಸ್‌ಕ್ಲೂಸಿವ್‌
ಮುಡಾದ 143 ಬೇನಾಮಿ ಸೈಟ್‌ಗಳನ್ನು ಇಡಿ ಮುಟ್ಟುಗೋಲು ಹಾಕಿದ್ದು, ಇವು ಪ್ರಭಾವಿಗಳಿಗೆ ಸೇರಿದ್ದ ನಿವೇಶನಗಳಾಗಿವೆ. ಮುಟ್ಟುಗೋಲು ಹಾಕಿಕೊಂಡ 143 ಸೈಟ್‌ಗಳು ಯಾರಿಗೆ ಸೇರಿದ್ದು? ಯರ‍್ಯಾರ ಎಷ್ಟೆಷ್ಟು ಸೈಟ್‌ಗಳು ಮುಟ್ಟುಗೋಲಾಗಿವೆ ಅನ್ನೋ ಎಕ್ಸ್‌ಕ್ಲೂಸಿವ್‌ ಮಾಹಿತಿ ʻಪಬ್ಲಿಕ್ ಟಿವಿʼಗೆ ಲಭ್ಯವಾಗಿದೆ.

ಮುಡಾ ಮುಟ್ಟುಗೋಲು ಸೈಟ್ ಲಿಸ್ಟ್:
* ಅಬ್ದುಲ್ ವಾಜಿದ್- 42 ಸೈಟ್
* ಮಂಜುನಾಥ್- 33 ಸೈಟ್
* ರವಿಕುಮಾರ್- 35 ಸೈಟ್
* ಚಾಮುಂಡೇಶ್ವರಿ ಲೇಔಟ್- 21 ಸೈಟ್
* ಜಯರಾಮ್- 9 ಸೈಟ್

ಸೈಟ್ ಮುಟ್ಟುಗೋಲು ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಹಿ ಕೃಷ್ಣ, ಮೂಡಾ ಹಗರಣದಲ್ಲಿ ಇಡಿ ಜಪ್ತಿ ಮಾಡಿರುವ ಇವರೆಗಿನ ಆಸ್ತಿ ಕೇವಲ ಸ್ಯಾಂಪಲ್ ಅಷ್ಟೆ. ಮುಂದಿನ ದಿನಗಳಲ್ಲಿ 50:50 ಅನುಪಾತದಲ್ಲಿ ಪಡೆದ ಎಲ್ಲಾ ಸೈಟ್ ಗಳನ್ನು ಇಡಿ ಜಪ್ತಿ ಮಾಡುತ್ತದೆ ಅಂತ ತಿಳಿಸಿದ್ದಾರೆ. ಅಲ್ಲದೇ ಇಡಿ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬ ಪಡೆದ 14 ಸೈಟ್ ಅಕ್ರಮ ಅನ್ನೋದು ಸ್ಪಷ್ಟವಾಗಿದೆ. ಲೋಕಾಯುಕ್ತ ತನಿಖೆಯಲ್ಲೂ ಸಿಎಂ ಕುಟುಂಬ ಪಡೆದ 14 ಸೈಟ್ ಅಕ್ರಮ ಎಂದೇ ವರದಿ ಬರಬೇಕು. ಲೋಕಾಯುಕ್ತ ತನಿಖೆ ಇದಕ್ಕೆ ವ್ಯತಿರಿಕ್ತವಾದರೆ ನ್ಯಾಯಾಲಯ ಅದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಹೇಳಿದ್ದಾರೆ.

TAGGED:EDED raidMUDA ScamMUDA Sitemysurusiddaramaiahಇಂಡಿಮುಡಾ ಸೈಟುಮುಡಾ ಹಗರಣಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

vijay raghavendra 2
ವಿಷ್ಣುವರ್ಧನ್ ಸ್ಮಾರಕ ನೆಲಸಮ: ವಿಜಯ್ ರಾಘವೇಂದ್ರ ಬೇಸರ
Cinema Latest Top Stories
Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories

You Might Also Like

PM Modi Wang Yi
Latest

ಪ್ರಧಾನಿ ಮೋದಿ ಭೇಟಿಯಾದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ

Public TV
By Public TV
6 hours ago
kiadb farmers protest
Bengaluru Rural

KIADB ಭೂಸ್ವಾಧೀನ ವಿರೋಧಿಸಿ ಆನೇಕಲ್‌ನಲ್ಲಿ ರೈತರಿಂದ ಬೃಹತ್ ಪ್ರತಿಭಟನೆ

Public TV
By Public TV
6 hours ago
siddaramaiah cabinet meeting
Bengaluru City

ದಲಿತ ಸಮುದಾಯ 3 ಗುಂಪಾಗಿ ವರ್ಗೀಕರಿಸಿ ಮೀಸಲಾತಿ ಹಂಚಿಕೆ ಜಾರಿಗೆ ಸಂಪುಟ ನಿರ್ಧಾರ

Public TV
By Public TV
6 hours ago
AI Image
Belgaum

ಧಾರಾಕಾರ ಮಳೆ – ಆ.20ರಂದು ಯಾವ್ಯಾವ ಜಿಲ್ಲೆಯ ಶಾಲೆಗೆ ರಜೆ?

Public TV
By Public TV
6 hours ago
AI Image
Latest

ಕೇಂದ್ರದಿಂದ `ಆನ್‌ಲೈನ್ ಗೇಮಿಂಗ್ ತಡೆ’ ಮಸೂದೆಗೆ ಅನುಮೋದನೆ

Public TV
By Public TV
6 hours ago
DK Shivakumar 5
Bengaluru City

ಕಳಸಾ ಬಂಡೂರಿ ಯೋಜನೆ ಮೂಲಕ ನಮ್ಮ ಪಾಲಿನ ನೀರು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ: ಡಿಕೆಶಿ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?