Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸತತ 35 ಗಂಟೆಗಳ ಇಡಿ ದಾಳಿ ಅಂತ್ಯ – 2 ದಿನ, 5 ಅಧಿಕಾರಿಗಳಿಂದ ಮಹತ್ವದ ದಾಖಲೆ ಸಂಗ್ರಹ!

Public TV
Last updated: October 30, 2024 8:38 am
Public TV
Share
3 Min Read
MUDA 1
SHARE

– ಇ.ಡಿ ಕೇಳಿದ 9 ಪ್ರಶ್ನೆಗಳು `ಪಬ್ಲಿಕ್ ಟಿವಿ’ಗೆ ಲಭ್ಯ

ಮೈಸೂರು: ಮುಡಾ ಹಗರಣ ಹಿನ್ನೆಲೆ ಇಡಿ ಟೀಂ ಬೆಂಗಳೂರು ಮತ್ತು ಮೈಸೂರಿನಲ್ಲಿ ಇಡಿ ದಾಳಿ (ED Raid) ಮಾಡಿದೆ. ದಾಳಿ ವೇಳೆ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ ರಾಕೇಶ್ ಪಾಪಣ್ಣ ಹಾಗೂ ಮುಡಾ ಮಾಜಿ ಆಯುಕ್ತ ನಟೇಶ್ (DB Natesh) ವಿಚಾರಣೆ ಮುಕ್ತಾಯ ಮಾಡಿ ಪ್ರಮುಖ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಇದರ ಜೊತೆಗೆ ಅಧಿಕಾರಿಗಳು ತಮ್ಮ ರಣಬೇಟೆ ಮುಂದುವರಿಸಲಿದ್ದಾರೆ.

MUDA 2

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಆಕ್ರಮ ಹಂಚಿಕೆ ಹಗರಣದ (MUDA Scam) ತನಿಖೆಯನ್ನು ಇಡಿ ಚುರುಕುಗೊಳಿಸಿದೆ. ಕಳೆದೆರಡು ದಿನಗಳಿಂದ ಇಡಿ ಅಧಿಕಾರಿಗಳು ಬೆಂಗಳೂರು ಮೈಸೂರಿನ 9 ಕಡೆಗಳಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ರಾಕೇಶ್ ಪಾಪಣ್ಣ (Rakesh Papanna) ಕೆಲವು ರಾಜಕಾರಣಿಗಳ ಬೇನಾಮಿ ಇರಬಹುದು ಹಾಗೂ ಮುಡಾದ ಹಲವು ವ್ಯವಹಾರಗಳಲ್ಲಿ ರಾಕೇಶ್ ಮಧ್ಯಸ್ಥಿಕೆ ವಹಿಸಿದ್ದರು ಎಂಬ ಹಿನ್ನೆಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. 2 ದಿನಗಳ ಕಾಲ 5 ಅಧಿಕಾಗಳಿಂದ ಸತತ 35 ಗಂಟೆಗಳ ತನಿಖೆ ನಡೆಸಿ ಬಳಿಕ ಇಡಿ ಅಧಿಕಾರಿಗಳು ವಾಪಸ್ ಆಗಿದ್ದಾರೆ.

ED MUDA

ಇತ್ತ ಬೆಂಗಳೂರಿನ (Bengaluru) ಮಲ್ಲೇಶ್ವರ 10ನೇ ಕ್ರಾಸ್‌ನಲ್ಲಿರುವ ಮುಡಾ ಮಾಜಿ ಆಯುಕ್ತ ನಟೇಶ್ ಮನೆಯಲ್ಲಿ ಮಂಗಳವಾರ ಬೆಳ್ಳಿಗ್ಗೆ 8 ಗಂಟೆಯಿಂದ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ರು. ನಟೇಶ್ ಮುಡಾ ಆಯುಕ್ತರಾಗಿದ್ದಾಗ ಸಿಎಂ ಪತ್ನಿಗೆ ಸೈಟ್ ಹಂಚಿಕೆಯಾಗಿದ್ದರ ಬಗ್ಗೆ ದಾಖಲೆ ತಡಕಾಡಿದ್ರು. ಆದ್ರೆ ಇಡಿ ತನಿಖೆಗೆ ಮಾಜಿ ಆಯುಕ್ತ ನಟೇಶ್ ಸಹಕರಿಸದೇ ನಾನು ಪ್ರಕರಣದಲ್ಲಿ ತಪ್ಪೇ ಮಾಡಿಲ್ಲ. ಸರ್ಕಾರದ ಆದೇಶ ಚಾಚು ತಪ್ಪದೆ ಪರಿಪಾಲನೆ ಮಾಡಿದ್ದೀನಿ. ಬಿಲ್ಡರ್ ಮಂಜುನಾಥ್ ಕಾನೂನಾತ್ಮಕವಾಗಿ ಲೇಔಟ್ ನಿರ್ಮಾಣ ಮಾಡಿದ್ದಾರೆ. 50:50 ಅನುಪಾತದಲ್ಲಿ ಯಾವುದೇ ಅವ್ಯವಹಾರ ಮಾಡಿಲ್ಲವೆಂದರು. ಸಂಜೆವರೆಗೂ ನಟೇಶ್ ಮನೆಯಲ್ಲಿ ಶೋಧ ಮಾಡಿದ ಅಧಿಕಾರಿಗಳು ಎರಡು ಬ್ಯಾಗ್‌ನಲ್ಲಿ ದಾಖಲೆಗಳನ್ನ ಕೊಂಡೊಯ್ದರು. ತನಿಖೆಗೆ ಸಹಕರಿಸದ ಕಾರಣ ನಟೇಶ್‌ನನ್ನು ಅಧಿಕಾರಿಗಳು ವಶಕ್ಕೆ ಪಡೆದ್ರು. ನಂತರ ಶಾಂತಿನಗರದ ಇಡಿ ಕಚೇರಿಗೆ ವಿಚಾರಣೆ ಮಾಡಿ ಕಳುಹಿಸಿದ್ದಾರೆ.

MUDA

ಪ್ರಕರಣಕ್ಕೆ ಸಂಬಂಧಿಸಿಂತೆ ಮುಂದಿನ ವಾರ ವಿಚಾರಣೆಗೆ ಹಾಜರಾಗಲು ರಾಕೇಶ್ ಪಾಪಣ್ಣಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಮುಡಾ ಹಗರಣದ ತನಿಖೆಯಲ್ಲಿ ಇನ್ನು ಯರ‍್ಯಾರಿಗ ಹಬ್ಬ ಕಾದಿದೆ ನೋಡಬೇಕಿದೆ. ಇದನ್ನೂ ಓದಿ: ಭಾರತದಲ್ಲಿ ವಾಯು ಮಾಲಿನ್ಯದಿಂದ ವರ್ಷಕ್ಕೆ 33000 ಸಾವು – ಬೆಂಗ್ಳೂರಿನ ಸ್ಥಿತಿ ಏನು? 

ಇಡಿ ಅಧಿಕಾರಿಗಳ ಪ್ರಶ್ನೆಗಳು ಪಬ್ಲಿಕ್ ಟಿವಿಗೆ ಲಭ್ಯ:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಸೈಟು ಹಂಚಿಕೆ ವಿಚಾರವಾಗಿ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳಿದೆ ಎಂಬ ಮಾಹಿತಿ `ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ. ಜಯರಾಮ್ ಎಂಬವರಿಗೆ ಸೇರಿದ್ದ ಎಂಎಂಜಿ ಕನ್ಸ್‌ಸ್ಟ್ರಕ್ಷನ್‌ ಕಚೇರಿ ಹಾಗೂ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದಲ್ಲೇ ಅಧಿಕಾರಿಗಳು ಹೇಳಿಕೆಯನ್ನ ದಾಖಲು ಮಾಡಿಕೊಂಡಿದ್ದಾರೆ. ಪ್ರತಿಯೊಂದು ಪ್ರಶ್ನೆ ಮತ್ತು ಉತ್ತರವನ್ನು ಕಚೇರಿಯಲ್ಲೇ ಕುಳಿತು ಟೈಪ್ ಮಾಡಿಕೊಂಡಿದ್ದಾರೆ. ಜೊತೆಗೆ ದಾಖಲೆ ಪರಿಶೀಲನೆಯ ನಂತರ ಅನುಮಾನದ ಮೇಲೆ ಒಂದುಷ್ಟು ಪ್ರಶ್ನೆಗಳನ್ನ ಕೇಳಿದ್ದಾರೆ. `ಇ.ಡಿ ಕೇಳಿದ ಪ್ರಶ್ನೆಗಳು ಉನ್ನತ ಮೂಲಗಳಿಂದ `ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ. ಇದನ್ನೂ ಓದಿ: ಯಶ್ ‘ಟಾಕ್ಸಿಕ್’ ಸಿನಿಮಾಗಾಗಿ ಮರ ಕಡಿದ ಆರೋಪ – ಸಚಿವರ ಆರೋಪಕ್ಕೆ ಚಿತ್ರತಂಡದ ಸ್ಪಷ್ಟನೆ ಏನು?

MUDA ED Raid

ಇ.ಡಿ ಪ್ರಶ್ನೆಗಳೇನು?
1. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ? ಎಷ್ಟು ಬ್ಯಾಂಕ್ ಅಕೌಂಟ್ ಗಳನ್ನ ಹೊಂದಿದ್ದೀರಾ?
2. ಸಂಘದ ಸಾಮಾನ್ಯ ಸಭೆ ಯಾವಾಗ ನಡೆಸಿದ್ದೀರ? ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಯಾವುದು?
3. ಸಹಕಾರ ಸಂಘದ ನಿರ್ದೇಶಕರ ವಿವರ ತಿಳಿಸಿ?
4. ಇಲ್ಲಿಯವರೆಗೆ ಎಷ್ಟು ಲೇಔಟ್ ನಿರ್ಮಾಣ ಮಾಡಿದ್ದೀರಾ?
5. ಎಷ್ಟು ಜನರಿಂದ ಮುಂಗಡವಾಗಿ ಹಣ ಪಡೆದಿದ್ದೀರಾ?
6. ಇನ್ನೂ ಎಷ್ಟು ಜನರಿಗೆ ನಿವೇಶನ ಕೊಡಬೇಕು?
7. ಹಲವು ಬ್ಯಾಂಕ್ ಖಾತೆಗಳಿಗೆ ಕೆವೈಸಿ ಲಿಂಕ್ ಆಗಿಲ್ಲ, ದಾಖಲೆಗಳು ಇಲ್ಲದಿದ್ದರು ಹೇಗೆ ವ್ಯವಹಾರ ಮಾಡುತ್ತಿದ್ದೀರಿ?
8. ಮುಡಾದಿಂದ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘಕ್ಕೆ 50:50 ಅನುಪಾತದಡಿ ಮುಡಾದಿಂದ ಎಷ್ಟು ನಿವೇಶನ ಬಂದಿದೆ?
9 ಕಚೇರಿಯಲ್ಲಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ ಪ್ರಶ್ನೆಗಳನ್ನ ಕೇಳುತ್ತಿರುವ ಇಡಿ ಅಧಿಕಾರಿಗಳು.

TAGGED:bengaluruED raidMUDAMUDA Scammysurusiddaramaiahಇಡಿ ದಾಳಿಬೆಂಗಳೂರುಮುಡಾಮುಡಾ ಹಗರಣಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

kiccha sudeep birthday Bigg Boss promo released
ಬಿಗ್‌ ಬಾಸ್‌ ಪ್ರೋಮೋ ರಿಲೀಸ್‌ – ಸ್ಪರ್ಧಿಗಳ ಬಗ್ಗೆ ಮಾಹಿತಿಯೂ ಔಟ್‌
Cinema Latest Main Post TV Shows
Pushpa Arunkumar Deepika Das
ನಮ್ಮನೆ ಅವ್ರ ಮನೆ ಒಂದೇ, ನಾವೆಲ್ಲ ಒಂದೇ ಕುಟುಂಬದವರು: ಯಶ್‌ ತಾಯಿ ಪುಷ್ಪ ಅರುಣ್‌ಕುಮಾರ್
Cinema Latest Sandalwood
Actresses request for posthumous Karnataka Ratna award for late Dr. Vishnuvardhan Sarojadevi
ದಿ.ಡಾ.ವಿಷ್ಣುವರ್ಧನ್, ಸರೋಜಾದೇವಿಯವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಗೆ ನಟಿಯರ ಮನವಿ
Bengaluru City Cinema Karnataka Latest Sandalwood Top Stories
darshan ballari jail 1
ಬಳ್ಳಾರಿಯಿಂದ ಪದೇ ಪದೇ ಕರೆತರಲು ಸಾಧ್ಯವಿಲ್ಲ: ದರ್ಶನ್‌ ಪರ ವಕೀಲ
Cinema Court Latest Main Post
Bharathi vishnuvardhan
ವಿಷ್ಣು ಸ್ಮಾರಕ ವಿಚಾರ – ನಾಳೆ ಸಿಎಂ ಭೇಟಿಯಾಗಲಿರುವ ಭಾರತಿ ವಿಷ್ಣುವರ್ಧನ್
Cinema Karnataka Latest National Sandalwood Top Stories

You Might Also Like

Sudeeps fan gifts house to poor woman in Belagavi 2
Belgaum

ಕಿಚ್ಚನ ಅಭಿಮಾನಿಯಿಂದ ಬಡ ಮಹಿಳೆಗೆ ಸೂರು ಉಡುಗೊರೆ!

Public TV
By Public TV
33 minutes ago
End of BBMP era 500 members to be elected to Greater Bengaluru Authority
Bengaluru City

ಇತಿಹಾಸದ ಪುಟ ಸೇರಿದ ಬಿಬಿಎಂಪಿ – ಜಿಬಿಎಗೆ ಆಯ್ಕೆಯಾಗಲಿದ್ದಾರೆ 500 ಸದಸ್ಯರು

Public TV
By Public TV
2 hours ago
KC Veerendra Pappi ED Raid
Chitradurga

‘ಕೈ’ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇ.ಡಿ ದಾಳಿ – ಆರು ಐಷಾರಾಮಿ ಕಾರುಗಳು ವಶಕ್ಕೆ

Public TV
By Public TV
2 hours ago
Koppal Mother death 1
Districts

ಸಂತಾನಹರಣ ಚಿಕಿತ್ಸೆ ವೇಳೆ ತಾಯಿ ಸಾವು – ಅನಸ್ತೇಶಿಯಾ ನೀಡದೇ ಶಸ್ತ್ರಚಿಕಿತ್ಸೆ ಮಾಡಿದ್ದಾಗಿ ಕುಟುಂಬಸ್ಥರ ಆರೋಪ

Public TV
By Public TV
4 hours ago
Bagalkote District Magistrates property seized for not paying compensation to farmers
Bagalkot

ರೈತರಿಗೆ ಪರಿಹಾರ ಹಣ ನೀಡದ ಸರ್ಕಾರ – ಬಾಗಲಕೋಟೆ ಜಿಲ್ಲಾಧಿಕಾರಿಗಳ ವಸ್ತುಗಳು ಜಪ್ತಿ

Public TV
By Public TV
4 hours ago
Chitradurga Croploss
Chitradurga

ಚಿತ್ರದುರ್ಗದಲ್ಲಿ ನಿರಂತರ ಮಳೆಗೆ ಬೆಳೆಹಾನಿ – ಜಮೀನುಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?