Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ

Bengaluru City

MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ

Public TV
Last updated: September 24, 2024 2:48 pm
Public TV
Share
4 Min Read
Siddaramaiah 7
SHARE

– ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದೆ
– ನನ್ನ ವಿರುದ್ಧ ರಾಜಕೀಯ ಸಂಚು

ಬೆಂಗಳೂರು: ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸಿಎಂ ಹೇಳಿದ್ದೇನು?
ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ಇದನ್ನೂ ಓದಿ: ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ – ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌

ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.

ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ಬಿಜೆಪಿ, ಜೆಡಿಎಸ್ (BJP, JDS) ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.

ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ಬೆಳಕಿಗೆ ಬಂದಿದ್ದು ಹೇಗೆ?

ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.

ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ.

ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.

ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.

ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ.

ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ.

TAGGED:bjpcongressjdskarnatakaMUDA Scamಕರ್ನಾಟಕಕಾಂಗ್ರೆಸ್ಜೆಡಿಎಸ್ಬಿಜೆಪಿಮುಡಾ ಹಗರಣ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
25 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟಗಳ ರದ್ದು

Public TV
By Public TV
47 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
2 hours ago
Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?