ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ (MUDA Scam) ತನಿಖಾಧಿಕಾರಿ ಬದಲಾಯಿಸುವಂತೆ ನಾನು ಅರ್ಜಿ ಹಾಕುತ್ತೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಹೇಳಿದ್ದಾರೆ.
ಮೂಡಾ ಹಗರಣ ಪ್ರಕರಣದಲ್ಲಿ ಜನ ಪ್ರತಿನಿಧಿ ನ್ಯಾಯಾಲಯದ ಆದೇಶದಂತೆ ಇಂದು ಮೈಸೂರು ಲೋಕಾಯುಕ್ತರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕಿದೆ. ಈ ವರದಿಯ ಅಂಶಗಳು ಖುದ್ದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಮೇಲೆಯೇ ಪ್ರಭಾವ ಬೀರುವ ಸಾಧ್ಯತೆ ಇದೆ. ಇದನ್ನೂ ಓದಿ: ಪತ್ನಿಯನ್ನು ಕೊಂದು ನಾಪತ್ತೆಯಾಗಿದ್ದ ಪತಿ, ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧನ
ಈ ಬಗ್ಗೆ ದೂರದಾರ ಸ್ನೇಹಮಯಿ ಕೃಷ್ಣ ಈ ಬಗ್ಗೆ ಪ್ರತಿಕ್ರಿಯಿಸಿ ಲೋಕಾಯುಕ್ತ ಇಂದು ಕೂಡ ಅಂತಿಮ ವರದಿ ಸಲ್ಲಿಸುವುದು ಅನುಮಾನ ಇದೆ. ಅವರು ಮತ್ತೆ ಸಮಯವನ್ನು ಕೇಳುತ್ತಾರೆ. ನನಗೆ ಲೋಕಾಯುಕ್ತ ಎಸ್ಪಿ ಬಗ್ಗೆ ಬಹಳಷ್ಟು ಅನುಮಾನವಿದ್ದು ತನಿಖಾಧಿಕಾರಿ ಬದಲಾಯಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇನೆ ಎಂದು ಹೇಳಿದ್ದಾರೆ.