Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: MUDA Scam| ಸಿಎಂ ತಕ್ಷಣ ರಾಜೀನಾಮೆ ನೀಡಬೇಕು, ಸಿಬಿಐಗೆ ನೀಡದಿದ್ರೆ ಕೇಸ್‌ ಮುಚ್ಚಿ ಹಾಕ್ತಾರೆ: ಛಲವಾದಿ ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | MUDA Scam| ಸಿಎಂ ತಕ್ಷಣ ರಾಜೀನಾಮೆ ನೀಡಬೇಕು, ಸಿಬಿಐಗೆ ನೀಡದಿದ್ರೆ ಕೇಸ್‌ ಮುಚ್ಚಿ ಹಾಕ್ತಾರೆ: ಛಲವಾದಿ ನಾರಾಯಣಸ್ವಾಮಿ

Districts

MUDA Scam| ಸಿಎಂ ತಕ್ಷಣ ರಾಜೀನಾಮೆ ನೀಡಬೇಕು, ಸಿಬಿಐಗೆ ನೀಡದಿದ್ರೆ ಕೇಸ್‌ ಮುಚ್ಚಿ ಹಾಕ್ತಾರೆ: ಛಲವಾದಿ ನಾರಾಯಣಸ್ವಾಮಿ

Public TV
Last updated: October 18, 2024 6:21 pm
Public TV
Share
2 Min Read
Chalavadi Narayanaswamy
SHARE

– ನಿಗಮವನ್ನು ತಿಂದು ತೇಗಿದವರು ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದಾರೆ
– ವಾಲ್ಮೀಕಿ ಜಯಂತಿಯನ್ನು ಪಶ್ಚಾತ್ತಾಪ ದಿನವನ್ನಾಗಿ ಆಚರಿಸಬೇಕಿತ್ತು

ಬೆಂಗಳೂರು: ಮೈಸೂರು ಮುಡಾ (MUDA) ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ (CBI) ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಆಗ್ರಹಿಸಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನಿಖೆಯನ್ನು ಸಿಬಿಐಗೆ ಕೊಡದೇ ಇದ್ದಲ್ಲಿ ಕೇಸನ್ನು ಸಂಪೂರ್ಣವಾಗಿ ಮುಚ್ಚಿ ಹಾಕುವ ವ್ಯವಸ್ಥೆ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ತಿಳಿಸಿದರು.

ಕಾಂಗ್ರೆಸ್ಸಿನವರಿಗೆ ಮಾನವೀಯತೆ ಇದ್ದರೆ ವಾಲ್ಮೀಕಿ ಜಯಂತಿಯನ್ನು (Valmiki Jayanti) ಪಶ್ಚಾತ್ತಾಪ ದಿನ ಎಂದು ಆಚರಣೆ ಮಾಡಬೇಕಿತ್ತು ಎಂದ ಅವರು, ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

siddaramaiah 9

ಎಲ್ಲ ಕಡತಗಳನ್ನು ಹೆಲಿಕಾಪ್ಟರ್‌ನಲ್ಲಿ ತುಂಬಿಕೊಂಡು ಬಂದವರನ್ನೂ ತನಿಖೆಗೆ ಒಳಪಡಿಸಬೇಕು. ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು. ಮಾನ್ಯ ಸುರೇಶ್ ಅವರೂ ರಾಜೀನಾಮೆ ನೀಡಬೇಕು. ಇಲ್ಲವಾದರೆ ಇಡಿ. ಅಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಬಂಧಿಸಲಿ ಎಂದು ಛಲವಾದಿ ಒತ್ತಾಯಿಸಿದರು. ಇದನ್ನೂ ಓದಿ: ಮುಡಾದಲ್ಲಿ ಬರೋಬ್ಬರಿ 5,000 ಕೋಟಿ ಅವ್ಯವಹಾರ ಆಗಿದೆ – ಶಾಸಕ ಎ ಮಂಜು ಹೊಸ ಬಾಂಬ್‌

ತಿಂದು ತೇಗಿದ್ದಾರೆ:
ಭ್ರಷ್ಟಾಚಾರ (Corruption) ಅಪರಾಧವಲ್ಲ ಎಂಬ ಮನಸ್ಥಿತಿಗೆ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಪಕ್ಷ ಬಂದ ಹಾಗಿದೆ. ಕುರಿಗಳನ್ನು ಕಾಯಲು ತೋಳನನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದಂತಿದೆ. ಇವತ್ತು ಇಷ್ಟೊಂದು ಭ್ರಷ್ಟಾಚಾರ ನಡೆಯುತ್ತಿದ್ದರೂ ಜೈಲಿನಿಂದ ಬಂದವರು ವಿಜೃಂಭಿಸಿ ಬರುತ್ತಿದ್ದಾರೆ. ನಿನ್ನೆ ತಾನೇ ವಾಲ್ಮೀಕಿ ಜಯಂತಿ ನಡೆದಿದೆ. ಸಿದ್ದರಾಮಯ್ಯನವರು ವಾಲ್ಮೀಕಿ ಜಯಂತಿ ಮಾಡುವಾಗ ನನಗೇ ನಾಚಿಕೆ ಅನಿಸಿತ್ತು. ವಾಲ್ಮೀಕಿ ನಿಗಮವನ್ನು ತಿಂದು ತೇಗಿದವರು ವಾಲ್ಮೀಕಿ ಜಯಂತಿ ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.

ಇಂದು ಬೆಳಿಗ್ಗೆ ಮುಡಾ ಕಚೇರಿ, ತಾಲೂಕು ಕಚೇರಿ ಮತ್ತು ದೇವರಾಜು ಅವರ ಮನೆಗೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮೂರು ಬಾರಿ ಮುಡಾ ಕಡತಗಳನ್ನು ಕೇಳಿದ್ದರೂ ಅಧಿಕಾರಿಗಳು ತಿರಸ್ಕರಿಸಿದ್ದೇ ಇದಕ್ಕೆ ಕಾರಣ ಎಂದು ವಿವರಿಸಿದರು.

 

ಈ ಹಗರಣದಲ್ಲಿ ಸತ್ಯ ಹೊರಗಡೆ ಬರುವುದು ರಾಜ್ಯ ಸರ್ಕಾರಕ್ಕೆ ಬೇಕಾಗಿಲ್ಲ. ಮುಡಾ ನಿವೇಶನಗಳನ್ನು ಅವಶ್ಯಕತೆ ಇಲ್ಲದಿದ್ದರೂ ವಾಪಸ್ ಕೊಡಲಾಗಿದೆ. ಅಧ್ಯಕ್ಷರಾಗಿದ್ದ ಮರಿಗೌಡರನ್ನು ಎತ್ತಂಗಡಿ ಮಾಡಿಸಲಾಗಿದೆ. ಅಲ್ಲಿನ ಅಧಿಕಾರಿಗಳನ್ನು ಬೇರೆ ಬೇರೆ ಇಲಾಖೆಗಳಿಗೆ ಕಳುಹಿಸಲಾಗಿದೆ. ಮುಡಾದಲ್ಲಿ ಅಪಾರವಾದ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಇದೆಲ್ಲವೂ ತೋರಿಸುತ್ತದೆ ಎಂದು ವಿಶ್ಲೇಷಿಸಿದರು.

ಮುಖ್ಯಮಂತ್ರಿ ಕುಟುಂಬವೇ ಪಾಲ್ಗೊಂಡ ಇಂಥ ಹಗರಣವನ್ನು ಮುಚ್ಚಿ ಹಾಕುವ ಉದ್ದೇಶ ಸರ್ಕಾರದ್ದು. ಮೊದಲು ಎಸ್‍ಐಟಿಗೆ ತನಿಖೆಯನ್ನು ಕೊಡಲಾಗಿತ್ತು. ಕೋರ್ಟ್ ಆದೇಶವಾಗಿದ್ದರೂ ಎಸ್‍ಐಟಿ ಈ ಕೇಸನ್ನು ವಾಪಸ್ ಪಡೆದಿಲ್ಲ. ಐಎಎಸ್ ಅಧಿಕಾರಿಗಳ ತಂಡ ತನಿಖೆ ಮಾಡಲಿದೆ ಎಂದು ಹೇಳಲಾಗಿತ್ತು. ಅದನ್ನೂ ವಾಪಸ್ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.

ಲೋಕಾಯುಕ್ತ ಕೂಡ ತನ್ನ ಕೆಲಸ ಪ್ರಾರಂಭಿಸಿತ್ತು. ಆದರೆ ಲೋಕಾಯುಕ್ತದ ಬಗ್ಗೆ ನನಗೆ ನನ್ನದೇ ಆದ ಅನುಮಾನವಿದೆ. ಇದುವರೆಗೂ ಕೂಡ ಯಾರನ್ನೂ ಕರೆದು ತನಿಖೆಗೆ ಒಳಪಡಿಸಿಯೇ ಇಲ್ಲ. ಕೋರ್ಟ್ ಆದೇಶಗಳನ್ನು ಮೀರಿ ಲೋಕಾಯುಕ್ತ ಇದರಲ್ಲಿ ಒಳಗೊಳ್ಳುತ್ತಿದೆ ಎಂದು ಅನುಮಾನ ಕಾಡುತ್ತಿದೆ ಎಂದು ನಾರಾಯಣಸ್ವಾಮಿ ಅನಿಸಿಕೆ ವ್ಯಕ್ತಪಡಿಸಿದರು.

 

TAGGED:cbichalavadi narayanaswamyMUDAValmiki Jayantiಛಲವಾದಿ ನಾರಾಯಣಸ್ವಾಮಿಮುಡಾವಾಲ್ಮೀಕಿ ನಿಗಮಸಿಬಿಐ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
17 minutes ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
29 minutes ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
43 minutes ago
Fake Govt job
Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
By Public TV
53 minutes ago
Kapila Tree Cut 2
Crime

ಕಪಿಲಾ ನದಿ ದಂಡೆಯಲ್ಲಿ 45 ಮರಗಳ ನಾಶ – ಆರೋಪಿ ಬಂಧನ

Public TV
By Public TV
1 hour ago
Mangaluru Rowdy Sheeter Murder 1
Crime

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು – ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?