ಅರಣ್ಯ ಅಧಿಕಾರಿಗಳ ಜೊತೆ ಗೂಂಡಾವರ್ತನೆ ತೋರಿದ ಮೂಡಿಗೆರೆ ಶಾಸಕ!

Public TV
1 Min Read
CKM MLA

ಚಿಕ್ಕಮಗಳೂರು: ಅಧಿಕಾರಿಗಳ ಮೇಲೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಗೂಂಡಾವರ್ತನೆ ತೋರಿಸಿದ್ದು, ಈ ಮೂಲಕ ಹುಲಿ ಉಗುರು ಮಾರಾಟಗಾರರ ಬೆಂಬಲಕ್ಕೆ ಬಿಜೆಪಿ ಶಾಸಕರು ನಿಂತಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

ಅರಣ್ಯ ಅಧಿಕಾರಿಗಳು ಹುಲಿ ಉಗುರು ಮಾರುತ್ತಿದ್ದ ವೆಂಕಟೇಶ್, ರಂಜಿತ್ ಹಾಗೂ ಶಿವಕುಮಾರ್ ಅವರನ್ನು ಬಂಧಿಸಿದ್ದರು. ಇದರಿಂದ ಕೋಪಗೊಂಡು ತನ್ನ ಹಿಂಬಾಲಕರನ್ನ ಬಂಧಿಸಿದಕ್ಕೆ ಶಾಸಕ ಎಂ.ಪಿ ಕುಮಾರಸ್ವಾಮಿ ಫುಲ್ ಗರಂ ಆಗಿ ಅರಣ್ಯಾಧಿಕಾರಿಗಳ ಜೊತೆ ಜಗಳ ಮಾಡಿ ಅವರಿಗೆ ಅವಾಜ್ ಹಾಕಿದ್ದಾರೆ.

ರಂಪಾಟ ಮಾಡಿಬಿಡುತ್ತೇನೆ. ನನಗೆ ಏನು ಸಮಸ್ಯೆ ಆಗಲ್ಲ. ನನ್ನ ಫೋನ್ ರಿಸೀವ್ ಮಾಡದೇ ಇದ್ದರೆ ಆಫೀಸ್ ಬಾಗಿಲು ಹಾಕಿಸುತ್ತೇನೆ ಎಂದು ಮೂಡಿಗೆರೆ ಅರಣ್ಯ ಇಲಾಖೆ ಕಚೇರಿಯಲ್ಲಿ ಕುಮಾರಸ್ವಾಮಿ ರಂಪಾಟ ಮಾಡಿ ಕಿರುಚಾಟ ಮಾಡಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಈಗ ಹರಿದಾಡುತ್ತಿದ್ದು, ಎಂ.ಪಿ.ಕುಮಾರಸ್ವಾಮಿ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ಕೇಳಿ ಬರುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *