ಗುಡ್ಡ ಕುಸಿತ: ಮಡಿಕೇರಿ-ಸೋಮವಾರಪೇಟೆ ನಡುವಿನ ರಾಜ್ಯ ಹೆದ್ದಾರಿ ಬಂದ್

Public TV
1 Min Read
MDK ROAD BUNDH AV 5 copy

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಮಡಿಕೇರಿ ತಾಲೂಕಿನ ಹಾಲೇರಿ ಗ್ರಾಮದ ರಸ್ತೆ ಮೇಲೆಯೇ ಗುಡ್ಡ ಕುಸಿದು ಪರಿಣಾಮ ರಾಜ್ಯ ಹೆದ್ದಾರಿ ಬಂದ್ ಆಗಿದೆ.

ಗುಡ್ಡದ ಮಣ್ಣು ಕುಸಿದ ಪರಿಣಾಮ ಮಡಿಕೇರಿ – ಸೋಮವಾರಪೇಟೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಕಳೆದ ವರ್ಷ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮತ್ತೆ ಗುಡ್ಡ ಕುಸಿದಿದೆ. ಕತ್ತಲಾಗಿರುವ ಹಿನ್ನೆಲೆಯಲ್ಲಿ ಹಾಗೂ ನಿರಂತರ ಮಳೆ ಆಗುತ್ತಿರುವುದರಿಂದ ತೆರವು ಕಾರ್ಯಾಚರಣೆ ನಡೆಸಲು ತೊಡಕಾಗಿದೆ. ನಾಳೆ ಮುಂಜಾನೆ ವೇಳೆಗೆ ರಸ್ತೆ ಮೇಲಿನ ಮಣ್ಣನ್ನು ತೆರವು ಮಾಡುವ ಸಾಧ್ಯತೆ ಇದೆ.

ಇಂದು ಮುಂಜಾನೆಯಿಂದ ಬಿಡುವು ನೀಡಿದ್ದ ಮಳೆ ಸಂಜೆಯ ವೇಳೆಗೆ ಬಿಟ್ಟು ಬಿಡದೆ ಸುರಿದಿತ್ತು. ಮಳೆಯ ಪರಿಣಾಮ ಗುಡ್ಡ ಕುಸಿತ ಸಂಭವಿಸಿದ್ದು, ಈ ಮಾರ್ಗ ಬಂದ್ ಆಗಿರುವುದರಿಂದ ವಾಹನ ಸವಾರರು ಪರ್ಯಾಯ ಮಾರ್ಗವನ್ನು ಬಳಕೆ ಮಾಡುತ್ತಿದ್ದಾರೆ. ಮಡಿಕೇರಿಯಿಂದ ಸಿಂಕೋನ ಮಾರ್ಗವಾಗಿ ಸೋಮವಾರಪೇಟೆ ತೆರಳಬಹುದಾಗಿದೆ.

MDK ROAD BUNDH AV 2 copy

Share This Article
Leave a Comment

Leave a Reply

Your email address will not be published. Required fields are marked *