ಕನ್ನಡದ ಹೆಸರಾಂತ ನಿರ್ದೇಶಕ ನರ್ತನ್ ‘ಮಫ್ತಿ’ (Mufti) ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಸೈ ಎನಿಸಿಕೊಂಡರು. ಸದ್ಯ ‘ಭೈರತಿ ರಣಗಲ್’ (Bhairathi Rangal) ಸಿನಿಮಾಗೆ ತಯಾರಿ ಮಾಡ್ತಿರುವ ಈ ಸಂದರ್ಭದಲ್ಲಿ ರಾಮ್ ಚರಣ್ ಜೊತೆ ಸಿನಿಮಾ ಮಾಡುವ ಬಗ್ಗೆ ನರ್ತನ್ ಪಬ್ಲಿಕ್ ಟಿವಿ ಡಿಜಿಟಲ್ಗೆ ಸ್ಪಷ್ಟನೆ ನೀಡಿದ್ದಾರೆ.
2017ರಲ್ಲಿ ‘ಮಫ್ತಿ’ (Mufti) ಸಿನಿಮಾಗೆ ಶಿವರಾಜ್ಕುಮಾರ್ (Shivarajkumar) ನಿರ್ದೇಶನ ಮಾಡುವ ಮೂಲಕ ಬೆಳಕಿಗೆ ಬಂದ ಪ್ರತಿಭೆ ನರ್ತನ್. ಮೊದಲ ಸಿನಿಮಾದಲ್ಲೇ ತಾನೆಂತಹ ನಿರ್ದೇಶಕ ಎಂಬುದನ್ನ ಸಾಬೀತುಪಡಿಸಿದ್ದರು. ಮಫ್ತಿ ಚಿತ್ರ ಗಲ್ಲಾಪೆಟ್ಟಿಗೆ ಕೋಟಿ ಕೋಟಿ ಕಲೆಕ್ಷನ್ ಮಾಡುವ ಮೂಲಕ ಹಿಸ್ಟರಿ ಕ್ರಿಯೆಟ್ ಮಾಡ್ತು. ಶಿವಣ್ಣ, ಶ್ರೀಮುರಳಿ ನಟನೆ ಅದೆಷ್ಟರ ಮಟ್ಟಿಗೆ ಮೋಡಿ ಮಾಡಿತ್ತೋ ಅದೇ ತರಹ ನರ್ತನ್ ಕಥೆ, ಡೈರೆಕ್ಷನ್ಗೆ ಕೂಡ ಪ್ರೇಕ್ಷಕರು ಫುಲ್ ಮಾರ್ಕ್ಸ್ ಕೊಟ್ಟಿದ್ದರು. ಇದನ್ನೂ ಓದಿ:ರಸ್ತೆ ಅಪಘಾತ : ಕಿರುತೆರೆ ಖ್ಯಾತ ನಟಿ ವೈಭವಿ ಉಪಾಧ್ಯಾಯ ದುರ್ಮರಣ
‘ಮಫ್ತಿ’ ಸಿನಿಮಾದ ಪ್ರೀಕ್ವೇಲ್ ತೆರೆಗೆ ತರಲು ಸಿದ್ಧತೆ ನಡೆಯುತ್ತಿದೆ. ‘ಭೈರತಿ ರಣಗಲ್’ ಚಿತ್ರದ ಮೂಲಕ ಅಸಲಿ ಕಥೆಯನ್ನ ಬಿಚ್ಚಿಡಲು ನರ್ತನ್ ಸಿದ್ಧತೆ ಮಾಡಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ಕೂಡ ಹವಾ ಕ್ರಿಯೇಟ್ ಮಾಡಿದೆ. ‘ಭೈರತಿ ರಣಗಲ್’ ಸಿನಿಮಾ ಇದೇ ಮೇ 26ಕ್ಕೆ ಮುಹೂರ್ತ ಕೂಡ ಫಿಕ್ಸ್ ಆಗಿದೆ. ಜೂನ್ ಮೊದಲ ವಾರದಲ್ಲಿ ಈ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ. ಹೀಗಿರುವಾಗ ರಾಮ್ ಚರಣ್ (Ramcharan) ಜೊತೆ ನರ್ತನ್ ಸಿನಿಮಾ ಮಾಡ್ತಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಅಷ್ಟಕ್ಕೂ ಈ ವಿಚಾರ ನಿಜಾನಾ.? ಈ ಬಗ್ಗೆ ನಿರ್ದೇಶಕ ನರ್ತನ್ ಪಬ್ಲಿಕ್ ಟಿವಿ ಡಿಜಿಟಲ್ಗೆ ಸ್ಪಷ್ಟನೆ ನೀಡಿದ್ದಾರೆ.
ನಟ ರಾಮ್ ಚರಣ್ ಅವರನ್ನ ಭೇಟಿಯಾಗಿ ಕಥೆ ಹೇಳಿರುವದು ನಿಜ, ಒಂದಿಷ್ಟು ಹಂತದ ಮಾತುಕತೆಯಾಗಿದೆ. ಆದರೆ ರಾಮ್ ಚರಣ್ ಜೊತೆ ಸಿನಿಮಾ ಮಾಡುವ ಬಗ್ಗೆ ಫೈನಲ್ ಆಗಿಲ್ಲ. ‘ಭೈರತಿ ರಣಗಲ್’ ಸಿನಿಮಾ ಮುಗಿಯುವವರೆಗೂ ಬೇರೆ ಪ್ರಾಜೆಕ್ಟ್ ಮಾಡೋದಕ್ಕೆ ಹೋಗಲ್ಲ. ಸದ್ಯ ನನ್ನ ಗಮನ ಏನೇ ಇದ್ದರೂ ಶಿವಣ್ಣ ಜೊತೆಗಿನ ಸಿನಿಮಾ ಅಂತಾ ನರ್ತನ್ (Narthan) ಸ್ಪಷ್ಟನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ರಾಮ್ ಚರಣ್ ಜೊತೆಗಿನ ಸಿನಿಮಾ ಅಂತಿಮ ಆಗಿದ್ದಲ್ಲಿ ಅಧಿಕೃತವಾಗಿ ತಿಳಿಸುವೆ ಎಂದು ಮಾತನಾಡಿದ್ದಾರೆ.
ಶೃತಿ ನಾಗೇಶ್, ಪಬ್ಲಿಕ್ ಟಿವಿ ಡಿಜಿಟಲ್