ಆಷಾಢ ಮಾಸದಲ್ಲಿ ಹೊಸಬರ ತಂಡವೊಂದು ಒಟ್ಟಿಗೆ ಎರಡು ಸಿನಿಮಾಗಳ ಮುಹೂರ್ತ ಆಚರಿಸಿಕೊಂಡಿದೆ. ಮೊದಲನೆಯದಾಗಿ ’ಬಾಲಿ’ ಚಿತ್ರದ ಕ್ರೀಡೆ ಕುರಿತ ಕಥೆಯಲ್ಲಿ ಹದಿಹರೆಯದ ಹಳ್ಳಿಯ ಬಡ ಕುಟುಂಬದ ಹುಡುಗಿಯೊಬ್ಬಳು ಓಟಗಾರ್ತಿಯಾಗಿ ಗುರಿ ಸಾಧಿಸಲು ಹೋಗುತ್ತಾಳೆ. ಅವಳ ಹಾದಿಯಲ್ಲಿ ಸಫಲ ಆಗುತ್ತಾಳಾ ಎನ್ನುವುದು ಒಂದು ಎಳೆಯ ಸಾರಾಂಶವಾಗಿದೆ. ಜೊತೆಗೆ ಶಾಲೆಯ ಅಂಶಗಳು ಇರಲಿದೆ.
ಕುಮಾರಿ ಹರಿಣಿ ಜಯರಾಜ್ ಮೂಲತಃ ಅಥ್ಲೇಟ್ ಆಗಿದ್ದು, ಅದಕ್ಕೆ ತಕ್ಕಂತೆ ಪಾತ್ರ ಸಿಕ್ಕಿರುವುದರಿಂದ ಸಹಜವಾಗಿ ಖುಷಿಯಾಗಿದೆ. ಕ್ರೀಡಾ ಮಾರ್ಗದರ್ಶಿಯಾಗಿ ಉತ್ತರಭಾರತದ ನೀರಜ್ಕುಮಾರ್, ತಾಯಿಯಾಗಿ ಮೀನಾಕಿರಣ್, ಸಂದೀಪ್ಮಲಾನಿ, ಪ್ರಶಾಂತ್ ಮುಂತಾದವರು ಅಭಿನಯಿಸುತ್ತಿದ್ದಾರೆ. ರಚನೆ,ಚಿತ್ರಕಥೆ, ಸಾಹಿತ್ಯ ಹಾಗೂ ನಿರ್ದೇಶನ ಮಾಡುತ್ತಿರುವ ಗನಿದೇವ್ ಕಾರ್ಕಳ ಅವರು ಅಕ್ಷರ ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಜಯಕುಮಾರ್ ಭಕ್ತವತ್ಸಲಂ-ಯೋಗಿತ ಬಾಲಿ ಸಹ ನಿರ್ಮಾಪಕರುಗಳಾಗಿ ಗುರುತಿಸಿಕೊಂಡಿದ್ದಾರೆ. ಸಂಗೀತ ಅಮೋಘ್ ಕೊಡಂಗಾಲ ಅವರದಾಗಿದೆ. ಕುಂದಾಪುರ, ಮಂಗಳೂರು, ಬೆಂಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ. ಇದನ್ನೂ ಓದಿ:ಟ್ವೀಟರ್ನಲ್ಲಿ ಯಶ್ ಹೆಸರು ಟ್ರೇಂಡಿಂಗ್: ಯಶ್ 19ನೇ ಚಿತ್ರದ ಅಪ್ಡೇಟ್ ಇಲ್ಲಿದೆ
ಎರಡನೆಯದಾಗಿ ’ಏಕಮ್’ ಚಿತ್ರವು ಬಹುಕಥಾ ಹೊಂದಿದೆ. ಅಕ್ಷರಾ ಪ್ರೊಡಕ್ಷನ್ ಮೂಲಕ ಗಣಿದೇವ್ ಕಾರ್ಕಳ ನಿರ್ಮಾಣ ಮಾಡುತ್ತಿದ್ದಾರೆ. ಧಾರಾವಾಹಿ ಮತ್ತು ಒಂದಷ್ಟು ಚಿತ್ರಗಳಿಗೆ ಕೆಲಸ ಮಾಡಿದ ಅನುಭವ ಇರುವ ವಿದ್ಯತ್ ಶಿವ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಹಾಲಿವುಡ್ನ ಅಲೆಜಾಂಡ್ರೆ ಇನರುತು ನಿರ್ದೇಶನದ ’ಬೆಬಲ್’ ಚಿತ್ರದ ಪ್ರೇರಣೆಯಿಂದ ನಿರ್ದೇಶಕರು ಕಥೆಯನ್ನು ರಚಿಸಿದ್ದಾರೆ.
ಐದು ಜನರ ಜೀವನದ ಕಥೆಯಲ್ಲಿ ಒಬ್ಬ ವ್ಯಕ್ತಿಯಿಂದ ಆಗುವಂತ ಅನಾಹುತಗಳು ಇನ್ನೊಬ್ಬ ವ್ಯಕ್ತಿಗೆ ಬರುವಂತ ಘರ್ಷಣೆಗಳು ಒಂದಕ್ಕೊಂದು ಪ್ರಾರಂಭದಿಂದಲೇ ಲಿಂಕ್ ಆಗುತ್ತಾ ಹೋಗುತ್ತದೆ. ಜೊತೆಗೆ ಸುಂದರ ಪ್ರೀತಿ ಕಥೆಯಲ್ಲಿ ತೊಂದರೆಗಳು ಬರುತ್ತವೆ. ಅದರಿಂದ ಹೇಗೆ ಹೊರಗೆ ಬರುತ್ತಾರೆ. ಇಂತಹುದೇ ಜಾನರ್ ಅಂಥ ಹೇಳಲಿಕ್ಕ ಆಗುವುದಿಲ್ಲ. ಪ್ರೀತಿ, ರಕ್ತಪಾತ, ಫ್ಯಾಂಟಸಿ ಹೀಗೆ ತರಹೇವಾರಿ ಕಥೆಗಳು ಇರಲಿದೆ. ಸಂಗೀತ ಸಂಯೋಜಿಸುತ್ತಿರುವ ಅಮೋಘ್ ಕೊಡಂಗಾಲ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಉಳಿದಂತೆ ಶಹನ, ಹರೀಶ್ರಾಮ್, ಮೀನಾಕಿರಣ್, ಹರೀಶ್ರಾಮ್, ಐಶ್ವರ್ಯ ಮುಂತಾದವರು ನಟಿಸುತ್ತಿದ್ದಾರೆ. ಛಾಯಾಗ್ರಹಣ ಅಲನ್ಭರತ್, ಸಂಕಲನ ಸ್ಟೀಫೆನ್ ಅವರದಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.