ಬದರಿನಾಥ್, ಕೇದಾರನಾಥಕ್ಕೆ ಮುಖೇಶ್ ಅಂಬಾನಿ ಭೇಟಿ – ದೇಗುಲದ ಟ್ರಸ್ಟ್‌ಗೆ 5 ಕೋಟಿ ದೇಣಿಗೆ

Public TV
1 Min Read
mukesh ambani 1

ಡೆಹ್ರಾಡೂನ್: ಖ್ಯಾತ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಖೇಶ್ ಅಂಬಾನಿ (Mukesh Ambani) ಅವರು ಗುರುವಾರ ಬದರಿನಾಥ್ (Badrinath) ಮತ್ತು ಕೇದಾರನಾಥ (Kedarnath) ಧಾಮಕ್ಕೆ ಭೇಟಿ ನೀಡಿದರು. ಈ ವೇಳೆ  ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿಗೆ 5 ಕೋಟಿ ದೇಣಿಗೆ ನೀಡಿದ್ದಾರೆ.

ದೇವಾಲಯಕ್ಕೆ ಭೇಟಿ ನೀಡಿದ ಅಂಬಾನಿ ಅವರ ಜೊತೆಗೆ ಪುತ್ರ ಅನಂತ್ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ರಾಧಿಕಾ ಮರ್ಚೆಂಟ್ ಅವರು ಆಗಮಿಸಿದ್ದರು. ಅಂಬಾನಿ ಅವರನ್ನು ದೇವಾಲಯದ ಅಧಿಕಾರಿಗಳು ಬರಮಾಡಿಕೊಂಡ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಹಿಜಬ್ ಭರವಸೆ ಬಲವಾಗಿದೆ – ನ್ಯಾ. ದುಲಿಯಾ ತೀರ್ಪಿಗೆ ಆಲಿಯಾ ಅಸ್ಸಾದಿ ಮೆಚ್ಚುಗೆ

ಕಳೆದ ಕೆಲವು ವಾರಗಳಿಂದ ಹಲವಾರು ದೇವಸ್ಥಾನಗಳಿಗೆ ಅಂಬಾನಿ ಅವರು ಭೇಟಿ ನೀಡಿದ್ದಾರೆ. ಕಳೆದ ತಿಂಗಳು ಮೂರು ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು ಮತ್ತು ದೇವಾಲಯದ ಟ್ರಸ್ಟ್‌ಗಳಿಗೆ ಇಷ್ಟೇ ಮೊತ್ತವನ್ನು ದೇಣಿಗೆ ನೀಡಿದರು. ಇದನ್ನೂ ಓದಿ: ಕೇರಳದಲ್ಲಿ ನರಬಲಿ ಕೇಸ್‌ – ಮಾಟ ಮಂತ್ರ ತಡೆಗೆ ಕಠಿಣ ಕಾನೂನು: ಕೇರಳ ಸರ್ಕಾರ ನಿರ್ಧಾರ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *