Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಖ್ಯಮಂತ್ರಿ ಚಂದ್ರು ಅವನೇನು ಮುಖ್ಯಮಂತ್ರಿಯೋ, ಪ್ರಧಾನ ಮಂತ್ರಿಯೋ: ಕಾಶಪ್ಪನವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಮುಖ್ಯಮಂತ್ರಿ ಚಂದ್ರು ಅವನೇನು ಮುಖ್ಯಮಂತ್ರಿಯೋ, ಪ್ರಧಾನ ಮಂತ್ರಿಯೋ: ಕಾಶಪ್ಪನವರ್

Bagalkot

ಮುಖ್ಯಮಂತ್ರಿ ಚಂದ್ರು ಅವನೇನು ಮುಖ್ಯಮಂತ್ರಿಯೋ, ಪ್ರಧಾನ ಮಂತ್ರಿಯೋ: ಕಾಶಪ್ಪನವರ್

Public TV
Last updated: August 22, 2021 4:32 pm
Public TV
Share
3 Min Read
KASHAPPANAVAR
SHARE

ಬಾಗಲಕೋಟೆ: ಮೀಸಲಾತಿಗೆ ಅಪಸ್ವರ ಎತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಚಂದ್ರು ಅವನೇನು ಮುಖ್ಯಮಂತ್ರಿಯೋ, ಪ್ರಧಾನ ಮಂತ್ರಿಯೋ ಎಂದು ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

MukhyMantriChandru1

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಚಂದ್ರು ಅವನೇನು ಮುಖ್ಯಮಂತ್ರಿಯೋ, ಪ್ರಧಾನ ಮಂತ್ರಿಯೋ? ಪಂಚಮಸಾಲಿ ಸಮುದಾಯ ಮೀಸಲಾತಿ ಬೇಡ ಅನ್ನೋದಕ್ಕೆ ಇವರ್ಯಾರು? ನಮಗೆ ಮೀಸಲಾತಿ ಬೇಕಿದೆ, ಇದಕ್ಕಾಗಿಯೇ ರಾಜ್ಯದಲ್ಲಿ ಪಾದಯಾತ್ರೆ ಮಾಡಿದ್ದೇವೆ. 10 ಲಕ್ಷ ಜನ ಸೇರಿಸಿ ಸಮಾವೇಶ ಮಾಡಿ ನ್ಯಾಯ ಕೇಳಿದ್ದೇವೆ. ನಮಗೆ ಮೀಸಲಾತಿ ಬೇಡ ಅನ್ನೋಕೆ ಇವರ್ಯಾರು? ನೀವು ನಿಮ್ಮಷ್ಟಕ್ಕೆ ಹೋರಾಟ ಮಾಡಿ, ಆದರೆ ನಮ್ಮ ತಂಟೆಗೆ ಬಂದರೆ ಸುಮ್ಮನೆ ಕೂರೋಕಾಗಲ್ಲ. ಜನ ಕೇಳ್ತಾರೆ ಅಂತ ಬಾಯಿಗೆ ಬಂದಂತೆ ಮಾತನಾಡೋಕೆ ಇವನ್ಯಾರು? ಮೀಸಲಾತಿ ಬೇಡ ಅನ್ನೋಕೆ ಇವನಿಗೆ ರೈಟ್ಸ್ ಕೊಟ್ಟೋರು ಯಾರು? ಅವರು ಉದ್ದಾರ ಆಗಿರಬಹುದು, ಸಂವಿಧಾನಾತ್ಮಕವಾಗಿ ಹಕ್ಕಿದೆ ಮೀಸಲಾತಿ ಕೇಳುತ್ತೇವೆ. ಅಗಸ್ಟ್ 26ರಿಂದ ಮಲೆ ಮಹದೇಶ್ವರ ಬೆಟ್ಟದಿಂದ ಮತ್ತೇ ಜಾಗೃತಿ ಸಭೆ ಆರಂಭಿಸುತ್ತೇವೆ ಎಂದರು.ಇದನ್ನೂ ಓದಿ: ಬಲಿಷ್ಠ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ

Reservation CM Bommai 3 1

ಬಸನಗೌಡ ಪಾಟೀಲ್ ಯತ್ನಾಳ್ ಸಚಿವ ಸ್ಥಾನ ಕೈ ತಪ್ಪಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿ.ಪಿ ಯೋಗೇಶ್ವರ್‍ಗೆ ಮಂತ್ರಿ ಸ್ಥಾನ ನೀಡಬಾರದು ಎಂದು ಬಿಎಸ್‍ವೈ ಪಟ್ಟು ಹಿಡಿದಿದ್ದರು ಎಂದು ಸುದ್ದಿ ಕೇಳಿ ಬಂತು. ಯತ್ನಾಳ್ ಸಣ್ಣವರಲ್ಲ, ಅವರಿಗೆ ಶಕ್ತಿಯಿದೆ, ತಾಕತ್ತಿದೆ. ಯತ್ನಾಳ್ ಜೊತೆ ಅವರ ಸಮಾಜವಿದೆ. ಅವರೇ ಮುಂದೆ ಮುಖ್ಯಮಂತ್ರಿ ಯಾಕೆ ಆಗಬಾರದು? ಬಿಜೆಪಿ ಪಕ್ಷದ ಬಗ್ಗೆ ನಾನು ಮಾತನಾಡಲ್ಲ. ನಮ್ಮದು ಪಕ್ಷಾತೀತ ಪಂಚಮಸಾಲಿ ಮೀಸಲಾತಿ ಹೋರಾಟ. ನಮ್ಮ ಹೋರಾಟದಲ್ಲಿ ನಾನು ಕಾಂಗ್ರೆಸ್ ಪಕ್ಷದವನಾದರೂ ಕೂಡಾ ಪಕ್ಷ ಬದಿಗೊತ್ತಿ ನಿಂತಿದ್ದೇನೆ. ಯತ್ನಾಳ್, ರಾಜೂಗೌಡರಿಗೆ ಮಂತ್ರಿಸ್ಥಾನ ನೀಡಬೇಕಿತ್ತು. ಆದರೆ ಅದು ಅವರ ವೈಯಕ್ತಿಕ ವಿಚಾರ ಯತ್ನಾಳ್ ಬಿಜೆಪಿಯ ಹಿರಿಯ ಮನುಷ್ಯ. ಅವರ ವಿಷಯದಲ್ಲಿ ಕುತಂತ್ರ ನಡೆಸಿದೆ. ಕುತಂತ್ರ ಇದ್ದೆ ಇರುತ್ತದೆ. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ್ದಕ್ಕೆ ಯತ್ನಾಳ್ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ. ಯಡಿಯೂರಪ್ಪ ನವರೇ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಂತ್ರಿಸ್ಥಾನ ಕೊಡಬಾರದು ಎಂದಿದ್ದಾರೆ ಎಂದರು. ಇದನ್ನೂ ಓದಿ: ಬೋವಿ ಸ್ವಾಮೀಜಿ, ನಾರಾಯಣಸ್ವಾಮಿ ನಡುವೆ ತಾರಕಕ್ಕೇರಿದ ಒಳಮೀಸಲಾತಿ ಸಮರ

BASAVANAGOWDA PATIL YATHNAL medium

ರಾಜಕೀಯ ಪ್ರೇರಿತ ಕೇಸ್:
ನಿನ್ನೆ ಇಳಕಲ್ ಪಟ್ಟಣಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಜಾಮೀನು ಸಿಗುತ್ತೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಸೋಮವಾರ ಸಿಗಬಹುದು ಎಂದುಕೊಂಡಿದ್ವಿ ಆದರೆ ನಿನ್ನೆ ಸಿಕ್ಕಿದೆ. ಜೈಲಿನಿಂದ ಬಿಡುಗಡೆಯಾದ ಬಳಿಕ ವಿನಯ್ ಕುಲಕರ್ಣಿಯವರು ಬೆಂಗಳೂರಿಗೆ ಹೊರಟಿದ್ದರು. ಸ್ನೇಹಿತರಿಂದ ವಿಷಯ ತಿಳಿದು ಮಾರ್ಗಮಧ್ಯೆ ಮನೆಗೆ ಬರಮಾಡಿಕೊಂಡೆ. ಚಹಾ ಕುಡಿದು ಹೋಗಿ ಎಂದು ಮನವಿ ಮಾಡಿದ್ದೆ, ಭೇಟಿ ವೇಳೆ ಯಾವುದೇ ಚರ್ಚೆ ಆಗಿಲ್ಲ. ಅವರೊಬ್ಬರು ಸಮಾಜದ ಮುಖಂಡರು ಸಮಾಜ ಅವರ ಜೊತೆ ಇದೆ ಎಂದು ಅಂದೆ ಸ್ಪಷ್ಟಪಡಿಸಿದ್ದೆ. ಏನೋ ದುರದೃಷ್ಟ ಉದ್ದೇಶ ಪೂರ್ವಕವಾಗಿ ಅವರ ಮೇಲೆ ಪ್ರಕರಣ ಹಾಕಲಾಗಿದೆ. ಸುಮಾರು 10 ತಿಂಗಳ ಕಾಲ ಜೈಲುಶಿಕ್ಷೆ ಅನುಭವಿಸುವ ಪರಿಸ್ಥಿತಿ ಬಂತು. ಅವರಿಗೆ ಅನ್ಯಾಯ ಆಗಿದೆ ಭಗವಂತ ಅವರಿಗೆ ನ್ಯಾಯ ಕೊಡುತ್ತಾನೆ. ನ್ಯಾಯಾಲಯಕ್ಕೆ ನಾವು ಗೌರವ ಕೋಡುತ್ತೇವೆ. ವಿನಯ್ ಕುಲಕರ್ಣಿ ಬಿಡುಗಡೆ ವೇಳೆ ಕೋವಿಡ್ ನಿಯಮ ಉಲ್ಲಂಘನೆಗೆ ಪ್ರಕರಣ ದಾಖಲಾಗಿರುವುದು ರಾಜಕೀಯ ಕುತಂತ್ರ. ಶ್ರೀರಾಮುಲು ಜನ ಸೇರಿಸಿ ಜಾತ್ರೆ ಮಾಡಿದರೆ ಅವರಿಗೆ ಕೇಸ್ ಹಾಕಿದ್ರಾ? ನನ್ನ ಮೇಲೂ ಕೇಸ್ ಹಾಕಿದ್ದಾರೆ. ಸಣ್ಣಪುಟ್ಟ ಕಾರ್ಯಕ್ರಮ ಮಾಡಿದರೆ ಕೇಸ್ ಹಾಕುತ್ತಾರೆ. ಇದು ದ್ವೇಷದ ರಾಜಕೀಯ, ಇವತ್ತು ಅವರು ಮಾಡಿದರೆ ನಾಳೆ ನಾವು ಮಾಡುತ್ತೇವೆ ಎಂದರು.

TAGGED:bagalkotebjpChandrucongressMukhyamanthri ChandruPublic TVVijayanand KashappanavarVinay KulkarniYatnalYediyurappaಪಂಚಮಸಾಲಿ ಮೀಸಲಾತಿಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಮುಖ್ಯಮಂತ್ರಿ ಚಂದ್ರುವಿಜಯಾನಂದ ಕಾಶಪ್ಪನವರ್ವಿನಯ್ ಕುಲಕರ್ಣಿ
Share This Article
Facebook Whatsapp Whatsapp Telegram

Cinema news

RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories
rashmika mandanna 6
ರಶ್ಮಿಕಾ ಮೇಲೆ ಮತ್ತೆ ಕನ್ನಡ ಫ್ಯಾನ್ಸ್ ಗರಂ
Cinema Latest Sandalwood
Yash
ಹೊಸ ವರ್ಷಕ್ಕೆ ಯಶ್‌ ವಿಶ್‌ – ಈ ಬಾರಿ ಫ್ಯಾನ್ಸ್‌ ಜೊತೆ ಬರ್ತ್‌ಡೇ ಆಚರಿಸಿಕೊಳ್ತಾರಾ?
Cinema Latest Sandalwood Top Stories
Sanvi Sudeep 1
ʻನನ್ನ ದೇಹ ಚರ್ಚೆಯ ವಿಷಯವಲ್ಲʼ – ಮಗಳು ಸಾನ್ವಿ ಹೇಳಿಕೆ ಸಮರ್ಥಿಸಿಕೊಂಡ ಸುದೀಪ್
Bengaluru City Cinema Latest Sandalwood Top Stories

You Might Also Like

Banner Fight in front of Janardhana Reddys house congress activist killed in gunfire Ballari
Bellary

ರೆಡ್ಡಿ ಮನೆ ಮುಂದೆ ಬ್ಯಾನರ್‌ ಗಲಾಟೆ – ಗುಂಡೇಟಿಗೆ ಕೈ ಕಾರ್ಯಕರ್ತ ಬಲಿ, ನಿಷೇಧಾಜ್ಞೆ ಜಾರಿ

Public TV
By Public TV
2 hours ago
01
Big Bulletin

ಬಿಗ್‌ ಬುಲೆಟಿನ್‌ 01 January 2026 ಭಾಗ-1

Public TV
By Public TV
2 hours ago
02
Big Bulletin

ಬಿಗ್‌ ಬುಲೆಟಿನ್‌ 01 January 2026 ಭಾಗ-2

Public TV
By Public TV
2 hours ago
03
Big Bulletin

ಬಿಗ್‌ ಬುಲೆಟಿನ್‌ 01 January 2026 ಭಾಗ-3

Public TV
By Public TV
2 hours ago
JanardhanaReddy
Bellary

ನನ್ನ ಹತ್ಯೆಗೆ ನಾರಾ ಭರತ್ ರೆಡ್ಡಿ ಯತ್ನ: ಬುಲೆಟ್‌ ಪ್ರದರ್ಶಿಸಿದ ರೆಡ್ಡಿ

Public TV
By Public TV
3 hours ago
Haveri Milk
Chikkaballapur

ಚಿಕ್ಕಬಳ್ಳಾಪುರ | ಹಾಲು ಉತ್ಪಾದಕ ರೈತರಿಗೆ ನ್ಯೂ ಇಯರ್ ಗಿಫ್ಟ್ – ಲೀಟರ್‌ಗೆ 1 ರೂ. ಹೆಚ್ಚಳ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?