Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂಬೈ ದಾಳಿಕೋರ ಅಮೆರಿಕದಿಂದ ಗಡಿಪಾರು – ನಾಳೆ ಬೆಳಗ್ಗೆ ಭಾರತಕ್ಕೆ ರಾಣಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮುಂಬೈ ದಾಳಿಕೋರ ಅಮೆರಿಕದಿಂದ ಗಡಿಪಾರು – ನಾಳೆ ಬೆಳಗ್ಗೆ ಭಾರತಕ್ಕೆ ರಾಣಾ

Latest

ಮುಂಬೈ ದಾಳಿಕೋರ ಅಮೆರಿಕದಿಂದ ಗಡಿಪಾರು – ನಾಳೆ ಬೆಳಗ್ಗೆ ಭಾರತಕ್ಕೆ ರಾಣಾ

Public TV
Last updated: April 9, 2025 12:13 pm
Public TV
Share
2 Min Read
Tahawwur Rana Mumbai Taj Hotel Attack
SHARE

ಮುಂಬೈ: 2008 ರ ಮುಂಬೈ ಭಯೋತ್ಪಾದಕ ದಾಳಿಯ (Mumbai Attack) ಸಂಚುಕೋರ ತಹವ್ವೂರ್ ರಾಣಾನನ್ನು (Tahawwur Rana) ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು ಗುರುವಾರ ಬೆಳಗ್ಗೆ ಭಾರತಕ್ಕೆ (India) ಬರಲಿದ್ದಾನೆ.

ಗುಪ್ತಚರ ಮತ್ತು ತನಿಖಾ ಅಧಿಕಾರಿಗಳ ವಿಶೇಷ ತಂಡ ಈಗಾಗಲೇ ಅಮೆರಿಕದಿಂದ (USA) ವಿಮಾನದಲ್ಲಿ ಕರೆದುಕೊಂಡು ಬರುತ್ತಿದ್ದು ನಾಳೆ ಬೆಳಗ್ಗೆ ಭಾರತಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಅಮೆರಿಕದ ನ್ಯಾಯಾಲಯದ ಶಿಫಾರಸುಗಳಿಗೆ ಅನುಗುಣವಾಗಿ, ದೆಹಲಿ ಮತ್ತು ಮುಂಬೈನ ಎರಡು ಜೈಲುಗಳಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಗಳನ್ನು ಜಾರಿ ಮಾಡಲಾಗಿದೆ. ಭಾರತಕ್ಕೆ ಬಂದ ನಂತರ ರಾಣಾನನ್ನು ರಾಷ್ಟ್ರೀಯ ತನಿಖಾ ದಳ  (ಎನ್‌ಐಎ) ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಿದೆ.

Ajit Doval

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಎನ್‌ಐಎ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಹಸ್ತಾಂತರ ಕಾರ್ಯಾಚರಣೆಯ ಮೇಲ್ವಿಚಾರಣೆ ನೋಡಿಕೊಂಡಿದ್ದಾರೆ.

ತಹಾವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಮೆರಿಕ ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿತ್ತು. ಮುಂಬೈ ದಾಳಿ ಪ್ರಕರಣದಲ್ಲಿ ಬೇಕಾಗಿದ್ದ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಭಾರತ ಮನವಿ ಮಾಡಿತ್ತು. ಭಾರತಕ್ಕೆ ಗಡೀಪಾರು ಮಾಡದಿರಲು ರಾಣಾನಿಗೆ ಇದ್ದ ಕೊನೆಯ ಕಾನೂನು ಅವಕಾಶ ಕೈತಪ್ಪಿದ್ದು, ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತು.  ಇದನ್ನೂ ಓದಿ: ಕಾನೂನು ಸ್ವರೂಪ ಪಡೆದ ʻವಕ್ಫ್ ಬಿಲ್ʼ – ಕೇಂದ್ರ ಅಧಿಸೂಚನೆ

ಇದಕ್ಕೂ ಮೊದಲು, ಸ್ಯಾನ್ ಫ್ರಾನ್ಸಿಸ್ಕೋದ ಯುಎಸ್ ಕೋರ್ಟ್ ಆಫ್ ಅಪೀಲ್ಸ್ ಫಾರ್ ದಿ ನಾರ್ತ್ ಸರ್ಕ್ಯೂಟ್ ಸೇರಿದಂತೆ ಹಲವಾರು ಫೆಡರಲ್ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟದಲ್ಲಿ ತಹಾವೂರ್ ರಾಣಾಗೆ ಸೋಲು ಉಂಟಾಗಿತ್ತು. ಕಳೆದ ವರ್ಷ ನವೆಂಬರ್ 13 ರಂದು ರಾಣಾ ಯುಎಸ್ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದನು.

MUMBAI ATTACK

ತಹಾವೂರ್ ರಾಣಾ ಯಾರು?
ತಹಾವೂರ್ ರಾಣಾ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ. ತನ್ನ ಬಾಲ್ಯದ ಗೆಳೆಯ ಡೇವಿಡ್ ಕೋಲ್ಮನ್ ಹೆಡ್ಲಿ, ದಾವೂದ್ ಗಿಲಾನಿ ಮತ್ತು ಇತರರಿಗೆ ಸಹಕರಿಸಿದ್ದ. ಈ ಮೂಲಕ ಮುಂಬೈನಲ್ಲಿ ಲಷ್ಕರ್ ಭಯೋತ್ಪಾದಕ ದಾಳಿಯ ಯೋಜನೆ ಮತ್ತು ಕಾರ್ಯಗತಗೊಳಿಸಿದ್ದ.

ರಾಣಾ ನವೆಂಬರ್ 11 ಮತ್ತು 21, 2008 ರ ನಡುವೆ ದುಬೈ ಮೂಲಕ ಮುಂಬೈಗೆ ಬಂದಿದ್ದ. ಪೊವೈನಲ್ಲಿರುವ ಹೋಟೆಲ್ ರಿನೈಸಾನ್ಸ್‌ನಲ್ಲಿ ತಂಗಿ ದಾಳಿಗೆ ಬೇಕಾದ ಸಿದ್ಧತೆ ಪರಿಶೀಲಿಸಿದ್ದ. ಈತ ದುಬೈಗೆ ಹೋದ 5 ದಿನಗಳ ಬಳಿಕ ದಾಳಿ ನಡೆದಿತ್ತು. ಇದನ್ನೂ ಓದಿ: ಭಾರತದ ಉದ್ಯಮಿಗೆ ಅಮೆರಿಕದಲ್ಲಿ ಕಹಿ ಅನುಭವ – ಏರ್‌ಪೋರ್ಟ್‌ನಲ್ಲಿ 8 ಗಂಟೆ ಕೂರಿಸಿದ ಆರೋಪ

ಭಾರತವು ಜೂನ್ 2020 ರಲ್ಲಿ ರಾಣಾನನ್ನು ಗಡೀಪಾರುಗಾಗಿ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಈ ವರ್ಷದ ಫೆಬ್ರವರಿಯಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು  ಗಡೀಪಾರು ಮಾಡಲಾಗುವುದು ಎಂದು ದೃಢಪಡಿಸಿದ್ದರು.

ಮುಂಬೈ ದಾಳಿ:
2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

TAGGED:indiaMumbai Attackpakistanತಹವ್ವೂರ್‌ ರಾಣಾಪಾಕಿಸ್ತಾನಭಾರತಮುಂಬೈ ದಾಳಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
25 minutes ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
28 minutes ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
33 minutes ago
DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
1 hour ago
Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
2 hours ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?