Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Mumbai Attack| ರಾಣಾ ವಿರುದ್ಧ ಸಾಕ್ಷಿ ನುಡಿಯಲಿದ್ದಾರೆ ನಿಗೂಢ ವ್ಯಕ್ತಿಗಳು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Mumbai Attack| ರಾಣಾ ವಿರುದ್ಧ ಸಾಕ್ಷಿ ನುಡಿಯಲಿದ್ದಾರೆ ನಿಗೂಢ ವ್ಯಕ್ತಿಗಳು!

Latest

Mumbai Attack| ರಾಣಾ ವಿರುದ್ಧ ಸಾಕ್ಷಿ ನುಡಿಯಲಿದ್ದಾರೆ ನಿಗೂಢ ವ್ಯಕ್ತಿಗಳು!

Public TV
Last updated: April 12, 2025 3:35 pm
Public TV
Share
3 Min Read
Tahawwur Rana 2
SHARE

ನವದೆಹಲಿ: ಮುಂಬೈ ದಾಳಿ (Mumbai Attack) ಪ್ರಕರಣ ಉಗ್ರ ತಹವ್ವೂರ್ ರಾಣಾನ (Tahawwur Hussain Rana) ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ದಳ (NIA) ಆರಂಭಿಸಿದೆ. ಈ ವಿಚಾರಣೆಯ ಸಂದರ್ಭದಲ್ಲಿ ರಾಣಾ ವಿರುದ್ಧ ಸಾಕ್ಷ್ಯ ನುಡಿಯಲು ನಿಗೂಢ ವ್ಯಕ್ತಿಗಳು ಸಾಲುಗಟ್ಟಿ ನಿಂತಿದ್ದಾರೆ ಎಂದು ಎನ್‌ಐಎ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

ಉಗ್ರ ಡೇವಿಡ್‌ ಹೆಡ್ಲಿ (David Headley) ಅಮೆರಿಕ ಪ್ರಜೆಯಾಗಿದ್ದರೆ ರಾಣಾ ಕೆನಡಾದ (Canada) ಪ್ರಜೆಯಾಗಿದ್ದಾನೆ. ಹೀಗಿದ್ದರೂ ಅವರು ಭಾರತಕ್ಕೆ (India) ಆಗಾಗ ಬರುತ್ತಿದ್ದರು. ಇವರು ಬರುವ ವೇಳೆ ಇವರನ್ನು ಸ್ವೀಕರಿಸಿದ ಮತ್ತು ವಸತಿ ವ್ಯವಸ್ಥೆ ಮಾಡಿದ ವ್ಯಕ್ತಿಗಳು ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಾಗುತ್ತಾರೆ. ಇವರು ತಿಳಿಸುವ ಮಾಹಿತಿಗಳು ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಈ ಮೊದಲೇ ಈ ಸಾಕ್ಷಿಗಳು ಹೇಳಿಕೆ ನೀಡಿದ್ದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ. ಭವಿಷ್ಯದಲ್ಲಿ ಲಷ್ಕರ್-ಎ-ತೈಬಾ (LeT) ಸೇರಿದಂತೆ ಯಾವುದೇ ಉಗ್ರ ಸಂಘಟನೆಯಿಂದ ಇವರಿಗೆ ಸಮಸ್ಯೆಯಾಗದೇ ಇರಲು ನ್ಯಾಯಾಲಯದ ದಾಖಲೆಗಳಲ್ಲಿಯೂ ಸಹ ಈ ವ್ಯಕ್ತಿಗಳ ಗುರುತನ್ನು ಗೌಪ್ಯವಾಗಿಡಲಾಗಿತ್ತು.  ಇದನ್ನೂ ಓದಿ: ರಾಣಾ ಇರೋ ಸೆಲ್‌ಗೆ 12 ಅಧಿಕಾರಿಗಳಿಗೆ ಮಾತ್ರ ಪ್ರವೇಶ – ಕೋಟೆಯಾಗಿ ಬದಲಾದ NIA ಕಚೇರಿ

tahawwur rana photo

ಭಾರತೀಯ ತನಿಖಾಧಿಕಾರಿಗಳು ರಾಣಾನನ್ನು ವಿಚಾರಣೆ ನಡೆಸುತ್ತಿರುವುದು ಇದೇ ಮೊದಲು. ಜೂನ್ 2010 ರಲ್ಲಿ ಎನ್‌ಐಎ ಅಮೆರಿಕದಲ್ಲಿ ರಾಣಾನ ಬಾಲ್ಯ ಸ್ನೇಹಿತ ಡೇವಿಡ್‌  ಹೆಡ್ಲಿಯನ್ನು ವಿಚಾರಣೆ ನಡೆಸಿತ್ತು. ಈ ನಿಗೂಢ ಸಾಕ್ಷಿ ರಾಣಾ ಮತ್ತು ಡೇವಿಡ್‌ ಹೆಡ್ಲಿಯೊಂದಿಗೆ ಸಂಬಂಧ ಹೊಂದಿದ್ದು, ರಾಣಾನ ಪಾತ್ರವನ್ನು ಪತ್ತೆಹಚ್ಚುವಲ್ಲಿ ಸಾಕ್ಷಿಯ ಹೇಳಿಕೆ ಪ್ರಮುಖ ಪಾತ್ರವಹಿಸಲಿದೆ ಮೂಲಗಳು ತಿಳಿಸಿವೆ.

ಎನ್‌ಐಎ ತನಿಖಾ ವಿವರಗಳ ಪ್ರಕಾರ 2006ರ ವೇಳೆಗೆ ದಾಳಿಯ ಯೋಜನೆ ನಡೆಯುತ್ತಿದ್ದಾಗ, ಹೆಡ್ಲಿ ಮೊದಲು ಎಲ್‌ಇಟಿ ನಾಯಕರು ಮತ್ತು ಇತರ ಸಹ ಸಂಚುಕೋರರನ್ನು ಭೇಟಿ ಮಾಡಲು ಪಾಕಿಸ್ತಾನಕ್ಕೆ ಹೋಗಿದ್ದ. ಈ ವೇಳೆ ಆತನಿಗೆ ತಾಜ್ ಮಹಲ್ ಹೋಟೆಲ್ ಸೇರಿದಂತೆ ಮುಂಬೈನ ಸಾಮಾನ್ಯ ವಿಡಿಯೋಗಳನ್ನು ತೆಗೆದುಕೊಂಡು ಬರುವಂತೆ ಸೂಚನೆ ಸಿಕ್ಕಿತ್ತು.

ಈ ಸೂಚನೆಯಂತೆ ಸೆಪ್ಟೆಂಬರ್ 2006 ರಲ್ಲಿ ಹೆಡ್ಲಿ ಭಾರತಕ್ಕೆ ಆಗಮಿಸಿದ್ದ ಮತ್ತು ಪಾಕಿಸ್ತಾನ ಉಗ್ರರು ಕೇಳಿದ್ದ ವಿಡಿಯೋಗಳನ್ನು ಚಿತ್ರೀಕರಿಸಿದ್ದ. ಈ ಭೇಟಿಯ ಸಮಯದಲ್ಲಿ ರಾಣಾನ ಆಪ್ತ ವ್ಯಕ್ತಿಯೊಬ್ಬರು ಹೆಡ್ಲಿಯನ್ನು ಸ್ವಾಗತಿಸಿದ್ದರು. ಆ ವ್ಯಕ್ತಿಗೆ ರಾಣಾನಿಂದ ಕರೆ ಬಂದಿತ್ತು. ಈ ಕರೆಯ ನಂತರ ಆ ವ್ಯಕ್ತಿ ಹೆಡ್ಲಿ ಮತ್ತು ಇತರ ಇತರ ಲಾಜಿಸ್ಟಿಕ್ಸ್ ವ್ಯವಸ್ಥೆ ಮಾಡಿದ್ದರು.

ಮುಂಬೈನಲ್ಲಿರುವ ರಾಣಾನ ವಲಸೆ ಕಾನೂನು ಕಚೇರಿಯೊಂದಿಗೆ ಸಂಬಂಧ ಹೊಂದಿದ್ದ ಇತರ ವ್ಯಕ್ತಿಗಳನ್ನು ಸಹ ಎನ್‌ಐಎ ಈ ಬಾರಿ ಪ್ರಶ್ನಿಸಲಿದೆ. ಇದನ್ನೂ ಓದಿ: ರಾಣಾ ಕರೆತಂದ ವಿಮಾನಕ್ಕೆ ನೀಡಲಾಗಿತ್ತು ಡಮ್ಮಿ ಕೋಡ್‌, ಮಧ್ಯೆ 11 ಗಂಟೆ ಪಿಟ್‌ ಸ್ಟಾಪ್‌!

nia 2

ರಾಣಾ ಶೀಘ್ರದಲ್ಲೇ ಸಾಕ್ಷಿಯೊಂದಿಗೆ ಭಾರತದಲ್ಲಿನ ಆತನ ಸಂಪರ್ಕಗಳು ಮತ್ತು ಹೆಡ್ಲಿ ಭೇಟಿ ನೀಡಿದ ಸ್ಥಳಗಳು ಮತ್ತು 2006 ಮತ್ತು 2009 ರ ನಡುವೆ ಭಾರತಕ್ಕೆ ಹಲವಾರು ಬಾರಿ ಭೇಟಿ ನೀಡಿದಾಗ ಆತ ಯಾರನ್ನು ಸಂಪರ್ಕ ಮಾಡಿದ್ದ? ಆ ವ್ಯಕ್ತಿಗಳನ್ನೂ ಎನ್‌ಐಎ ವಿಚಾರಣೆ ನಡೆಸಲಿದೆ.

ರಾಣಾ ಪಾಕಿಸ್ತಾನದಲ್ಲಿದ್ದ ಹೆಡ್ಲಿಯ ದಾಳಿಯ ರೂವಾರಿಗಳ ಜೊತೆ ಕೆಲಸ ನೇರವಾಗಿ ಸಂವಹನ ಮಾಡುತ್ತಿದ್ದ. ಹೀಗಾಗಿ ಆರಂಭಿಕ ಹಂತದ ವಿಚಾರಣೆಯಲ್ಲಿ ರಾಣಾ ಮತ್ತು ಹೆಡ್ಲಿ ನಡುವಿನ ಸಂಬಂಧದ ಬಗ್ಗೆ ಕೇಳಲಾಗುತ್ತದೆ.

ವಿಶೇಷ ನ್ಯಾಯಾಲಯ 18 ದಿನಗಳ ಕಾಲ ಕಸ್ಟಡಿಗೆ ನೀಡಿದ ಬಳಿಕ ಮುಂಬೈ ದಾಳಿ (Mumbai Attack) ಪ್ರಕರಣ ಆರೋಪಿ ಉಗ್ರ ತಹವ್ವೂರ್ ಹುಸೇನ್ ರಾಣಾನನ್ನು ದೆಹಲಿಯಲ್ಲಿರುವ ರಾಷ್ಟ್ರೀಯ ತನಿಖಾ ದಳದ (NIA) ಪ್ರಧಾನ ಕಚೇರಿಯಲ್ಲಿ ಬಂಧಿಸಿ ಇಡಲಾಗಿದೆ.

ಎನ್‌ಐಎ ಕಟ್ಟಡದ ನೆಲ ಮಹಡಿಯಲ್ಲಿರುವ 14*14 ಅಡಿ ಅಳತೆಯ ಕೋಣೆಗೆ ಸಿಸಿಟಿವಿ (CCTV) ಹಾಕಲಾಗಿದ್ದು ಪ್ರತಿಯೊಂದು ಚಲನವಲನಗಳನ್ನು ಗಮನಿಸಲಾಗುತ್ತದೆ. ಈ ಕೊಠಡಿಯಲ್ಲೇ ಎಲ್ಲಾ ತನಿಖಾ ಸಂಸ್ಥೆಗಳು ರಾಣಾನನ್ನು ವಿಚಾರಣೆಗೆ ಒಳಪಡಿಸಲಿವೆ.

TAGGED:David HeadleyMumbai AttackTahawwur Ranaಎನ್‍ಐಎಡೇವಿಡ್‌ ಹೇಡ್ಲಿತಹಾವ್ವೂರ್‌ ರಾಣಾಮುಂಬೈ ದಾಳಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
7 hours ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
7 hours ago
Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
8 hours ago
Medical student commits suicide by jumping from apartment in Mangaluru
Crime

ಗೆಳತಿಯ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
8 hours ago
Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
9 hours ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?