Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Mumbai Hostage | 17 ಮಕ್ಕಳನ್ನ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರೋಪಿ ಪೊಲೀಸರ ಗುಂಡಿಗೆ ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | Mumbai Hostage | 17 ಮಕ್ಕಳನ್ನ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರೋಪಿ ಪೊಲೀಸರ ಗುಂಡಿಗೆ ಬಲಿ

Crime

Mumbai Hostage | 17 ಮಕ್ಕಳನ್ನ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರೋಪಿ ಪೊಲೀಸರ ಗುಂಡಿಗೆ ಬಲಿ

Public TV
Last updated: October 30, 2025 6:08 pm
Public TV
Share
Mumbai Kidnap
SHARE

ಮುಂಬೈ: ವಾಣಿಜ್ಯ ನಗರಿ ಮುಂಬೈನ ಪೊವೈ ಪ್ರದೇಶದಲ್ಲಿರುವ (Powai Area) ಆರ್‌ಎ ಸ್ಟುಡಿಯೋನಲ್ಲಿ 17 ಮಕ್ಕಳನ್ನ ಒತ್ತೆಯಾಳಾಗಿ (Mumbai Hostage) ಇರಿಸಿಕೊಂಡಿದ್ದ ಆರೋಪಿ ರೋಹಿತ್‌ ಆರ್ಯ ಪೊಲೀಸರ ಗುಂಡಿಗೆ (Police Fire) ಬಲಿಯಾಗಿದ್ದಾನೆ. ಮೇಲ್ನೋಟಕ್ಕೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದೆ.

ಕಾರ್ಯಾಚರಣೆ ಸಮಯದಲ್ಲಿ ಪೊಲೀಸರು ಆರ್ಯ (Rohit Arya) ಮೇಲೆ ಗುಂಡು ಹಾರಿಸಿದ್ದರು, ಗಂಭೀರ ಸ್ಥಿತಿಯಲ್ಲಿದ್ದ ಆರೋಪಿಯನ್ನ ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದ್ರೆ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಆರ್ಯ ಮೃತಪಟ್ಟಿದ್ದಾನೆ ಅಂತ ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ. ಘಟನೆ ಬಗ್ಗೆ ಪೊಲೀಸರ ತನಿಖೆ ಮುಂದುವರಿದಿದೆ.

Mumbai Kidnap 2

17 ಮಕ್ಕಳ ಅಪಹರಣ ಒಂದು ಸಿನಿಮೀಯ ಕಥೆ
ಗುರುವಾರ ಮುಂಬೈನ ಪೊವೈನಲ್ಲಿರುವ ಆರ್‌ಎ ಸ್ಟುಡಿಯೋಗೆ (RA Studios) ಆಡಿಷನ್‌ಗಾಗಿ ಮಕ್ಕಳನ್ನ ಕರೆಯಲಾಗಿತ್ತು. ಅಲ್ಲಿಂದಲೇ ಮಕ್ಕಳನ್ನ ಅಪಹರಿಸಲಾಗಿತ್ತು. ತಾನು 17 ಮಕ್ಕಳನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವ ಬಗ್ಗೆ ರೋಹಿತ್‌ ಆರ್ಯ ವಿಡಿಯೋ ಸಂದೇಶವೊಂದನ್ನ ಹರಿಬಿಟ್ಟಿದ್ದ. ಪೊವೈ ಪ್ರಾಂತ್ಯದ ಮಗ್ಗುಲಲ್ಲಿರುವ ಕಟ್ಟಡವೊಂದರಲ್ಲಿ ತನ್ನದೊಂದು ಸ್ವಂತ ಸ್ಟುಡಿಯೋ ಇದ್ದು ಅದರಲ್ಲಿ ಮಕ್ಕಳನ್ನ ಹಿಡಿದಿಟ್ಟುಕೊಂಡಿರುವುದಾಗಿ ಆತ ವಿಡಿಯೋ ಸಂದೇಶದಲ್ಲಿ ಹೇಳಿದ್ದ. ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗ್ತಿದ್ದಂತೆ ಎಚ್ಚೆತ್ತ ಪೊಲೀಸರು ಆತನಿರುವ ಕಟ್ಟಡ ಪತ್ತೆ ಹಚ್ಚಿ, ಮಕ್ಕಳನ್ನು ರಕ್ಷಿಸಿದ್ರು. ಈ ವೇಳೆ ಪೊಲೀಸರು ಗುಂಡು ಹಾರಿಸಿದ್ದು ಆರ್ಯನಿಗೆ ತಾಗಿದೆ.

ಹಣ ಬೇಕಿಲ್ಲ, ಉಗ್ರವಾದಿಯೂ ಅಲ್ಲ
ವಿಡಿಯೋ ಸಂದೇಶದಲ್ಲಿ ಆತ ಮಕ್ಕಳನ್ನು ಹಿಡಿದಿಟ್ಟುಕೊಂಡಿದ್ದಕ್ಕೆ ಪ್ರತಿಯಾಗಿ ಹಣಕ್ಕಾಗಿ ಆಗ್ರಹ ಮಾಡಿರಲಿಲ್ಲ. ಅಲ್ಲದೆ, ತಾನು ಉಗ್ರವಾದಿಯೂ ಅಲ್ಲ ಎಂಬುದು ವಿಡಿಯೋದ ಆರಂಭದಲ್ಲೇ ಹೇಳಿದ್ದ. ನನ್ನ ಹೆಸರು ರೋಹಿತ್ ಆರ್ಯ. ನನಗೆ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಸಾಗಿದೆ. ಆದರೆ, ಸಾಯಲು ಇಷ್ಟವಿಲ್ಲ. ಅದರ ಬದಲಿಗೆ, ನಾನು ಸುಮಾರು 17 ಮಕ್ಕಳನ್ನು ಅಪಹರಿಸಿ ತಂದು ಹಿಡಿದಿಟ್ಟುಕೊಂಡಿದ್ದೇನೆ ಎಂದು ವಿಡಿಯೋನಲ್ಲಿ ಹೇಳಿದ್ದ. ನನ್ನದು ತುಂಬಾ ಸರಳ ಬೇಡಿಕೆಗಳಿವೆ. ಅವುಗಳನ್ನು ಈಡೇರಿಸಿದ್ರೆ ಸಾಕು. ಈ ಸಮಾಜದ ಕೆಲವರ ಬಳಿ ಮಾತನಾಡಬೇಕಿದೆ. ಕೆಲವು ನೈತಿಕ ಪ್ರಶ್ನೆಗಳನ್ನು ನಾನು ಕೆಲವರಲ್ಲಿ ಕೇಳಬೇಕಿದೆ. ಯಾರ ಬಳಿ ಕೇಳಬೇಕು ಎಂಬುದನ್ನು ನಾನು ಹೇಳುತ್ತೇನೆ. ಅಲ್ಲಿಯವರೆಗೆ ಪೊಲೀಸರಾಗಲೀ ಅಥವಾ ಯಾರೇ ಆಗಲಿ ಸಾವಧಾನದಿಂದ ಇರಬೇಕು. ಇಲ್ಲವಾದ್ರೆ, ನಾನು ನನ್ನೊಂದಿಗೆ ಈ ಮಕ್ಕಳಿರುವ ಸ್ಟುಡಿಯೋಕ್ಕೆ ಬೆಂಕಿ ಹಾಕುತ್ತೇನೆ. ಅಕಸ್ಮಾತ್ ನಾನು ಸತ್ತರೆ, ಈ ಮಕ್ಕಳಿರುವ ಸ್ಟುಡಿಯೋಕ್ಕೆ ಬೇರೆ ಯಾರಾದರೂ ಬೆಂಕಿ ಹಾಕುತ್ತಾರೆ. ಹಾಗಾಗಿ, ಪೊಲೀಸರು ಎಚ್ಚರಿಕೆಯಿಂದ ಇರಬೇಕು. ಸ್ವಲ್ಪ ಏನಾದರೂ ನನಗೆ ತೊಂದರೆ ನೀಡಲು ಯತ್ನಿಸಿದರೆ, ನನಗೆ ತಲೆ ಕೆಡುತ್ತದೆ ಎಂದು ಹೇಳಿದ್ದ.

ಆತನೊಬ್ಬ ಮಾನಸಿಕ ಅಸ್ವಸ್ಥ
ಬಂಧಿತ ಆರ್ಯನಿಂದ ನಕಲಿ ಗನ್ ವಶಕ್ಕೆ ಪಡೆಯಲಾಗಿದೆ. ಗನ್ ಮಾದರಿಯದ್ದಾಗಿತ್ತಷ್ಟೇ ನಿಜವಾದ ಗನ್ ಆಗಿರಲಿಲ್ಲ. ಆದರೂ ಅದನ್ನು ತೋರಿಸಿ ಆತ ಮಕ್ಕಳನ್ನು ಅಪಹರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಮಂಡಿಸಿರುವ ಡಿಮ್ಯಾಂಡ್ ಗಳನ್ನು ನೋಡಿದ್ರೆ ಆತ ಮಾನಸಿಕವಾಗಿ ಅಸ್ವಸ್ಥ ಎಂದೆನಿಸುತ್ತಿದೆ. ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿದ ಮೇಲಷ್ಟೇ ಗೊತ್ತಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೇ ಅದೇ ಸ್ಥಳದಲ್ಲಿ ಅನುಮಾನಾಸ್ಪದ ರಾಸಾಯನಿಕ ವಸ್ತುಗಳೂ ಕೂಡ ಪತ್ತೆಯಾಗಿದೆ. ಸದ್ಯ ಮಕ್ಕಳೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

TAGGED:Children RescuedGun FightMumbai CopsMumbai Hostageಮಕ್ಕಳು ಒತ್ತೆಯಾಳುಮುಂಬೈಮುಂಬೈ ಪೊಲೀಸ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
2 hours ago
virat kohli 2
Cricket

ಕೊಹ್ಲಿ, ಪಡಿಕ್ಕಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ತವರಲ್ಲಿ ಆರ್‌ಸಿಬಿಗೆ 5 ವಿಕೆಟ್‌ಗಳ ಜಯ

Public TV
By Public TV
2 hours ago
Bengaluru should become the capital of agricultural technology like IT Siddaramaiah
Bengaluru City

ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿದ್ದರಾಮಯ್ಯ

Public TV
By Public TV
3 hours ago
Arvind Kejriwal 1
Latest

ಚಡ್ಡಾ ಜೊತೆ ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು – ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್‌

Public TV
By Public TV
3 hours ago
Sai Sudharsan
Cricket

ಆರ್‌ಸಿಬಿ ವಿರುದ್ಧ ಶತಕ ಸಿಡಿಸಿ ಕ್ರಿಸ್ ಗೇಲ್ ದಾಖಲೆ ಮುರಿದ ಸಾಯಿ ಸುದರ್ಶನ್

Public TV
By Public TV
4 hours ago
Chikkamagaluru Rain
Chikkamagaluru

ಚಿಕ್ಕಮಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಗಾಳಿ ಮಳೆ

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?