Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಪ್ರೀಂಗೆ ಇಂದು 2 ಮಹತ್ವದ ಪತ್ರ- ಹೊರ ಬೀಳುತ್ತಾ `ಮಹಾ’ಸರ್ಕಾರ ರಚನೆಯ ಸೀಕ್ರೆಟ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸುಪ್ರೀಂಗೆ ಇಂದು 2 ಮಹತ್ವದ ಪತ್ರ- ಹೊರ ಬೀಳುತ್ತಾ `ಮಹಾ’ಸರ್ಕಾರ ರಚನೆಯ ಸೀಕ್ರೆಟ್?

Latest

ಸುಪ್ರೀಂಗೆ ಇಂದು 2 ಮಹತ್ವದ ಪತ್ರ- ಹೊರ ಬೀಳುತ್ತಾ `ಮಹಾ’ಸರ್ಕಾರ ರಚನೆಯ ಸೀಕ್ರೆಟ್?

Public TV
Last updated: November 25, 2019 7:29 am
Public TV
Share
2 Min Read
MAHA 2 1
SHARE

ಮುಂಬೈ: ಮಹಾರಾಷ್ಟ್ರದ ಅಚ್ಚರಿ ಸರ್ಕಾರಕ್ಕೆ ಇಂದು ನಿರ್ಣಾಯಕ ದಿನ. ಶಿವಸೇನೆಯ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ. ಅಲ್ಲದೆ ಸರ್ಕಾರ ರಚನೆ ಬಗ್ಗೆ ಇದ್ದ ಗೊಂದಲಗಳು ಕೂಡ ಬಗೆಹರಿಯಲಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ರಚನೆಗೆ ಅವಕಾಶ ನೀಡಿದ ರಾಜ್ಯಪಾಲರ ನಡೆ ಪ್ರಶ್ನಿಸಿ ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಮುಂದುವರಿಸಲಿದೆ. ನ್ಯಾ. ಎನ್.ವಿ ರಮಣ ನೇತೃತ್ವದ ವಿಚಾರಣೆ ನಡೆಯಲಿದ್ದು ಇಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹಾಗೂ ಕೇಂದ್ರ ಸರ್ಕಾರದ ಪರ ವಕೀಲರು ಸರ್ಕಾರ ರಚನೆಗೆ ಸಂಬಂಧಿಸಿದ ಎರಡು ಪ್ರಮುಖ ಪತ್ರಗಳನ್ನು ಸುಪ್ರೀಂಕೋರ್ಟಿಗೆ ನೀಡಲಿದ್ದಾರೆ.

maharashtra 1

ಸರ್ಕಾರ ರಚನೆಗೆ ಸಂಬಂಧಿಸಿದಂತೆ ಎರಡು ಪತ್ರ ಸಲ್ಲಿಸಲು ಸುಪ್ರೀಂಕೋರ್ಟ್ ಕೇಳಿದ್ದು ಬಿಜೆಪಿ ಮತ್ತು ಮಹಾರಾಷ್ಟ್ರ ರಾಜ್ಯಪಾಲರು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಬಿಜೆಪಿ ಮತ್ತು ಎನ್‍ಸಿಪಿ ಶಾಸಕರ ಬೆಂಬಲ ಪತ್ರದೊಂದಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ಯಾವಾಗ ಅನ್ನೋದರ ಬಗ್ಗೆ ಫಡ್ನವಿಸ್ ಸುಪ್ರೀಂಕೋರ್ಟ್ ಅಫಿಡವಿಟ್ ಸಲ್ಲಿಸಬೇಕಿದೆ. ಇತ್ತ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನಿಸಿದ್ದು ಹಾಗೂ ರಾಷ್ಟ್ರಪತಿ ಆಳ್ವಿಕೆ ಹಿಂದೆ ಪಡೆದ ಪ್ರಕ್ರಿಯೆ ಏನು ಅನ್ನೋದರ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟಿಗೆ ಮಾಹಿತಿ ನೀಡಬೇಕಿದೆ. ಈ ಎರಡು ಪತ್ರಗಳಿಂದ ರಾತ್ರೋರಾತ್ರಿ ಸರ್ಕಾರ ರಚನೆ ಆಗಿದ್ದು ಹೇಗೆ ಅನ್ನೋ ಮಹಾ ಸೀಕ್ರೆಟ್ ಅಧಿಕೃತವಾಗಿ ಬಯಲಾಗುವ ಸಂಭವ ಇದೆ.

MAHA 1 1

ಸುಪ್ರೀಂಕೋರ್ಟ್, ಬಹುಮತ ಸಾಬೀತಿಗೆ ಸೂಚಿಸುವ ಸಾಧ್ಯತೆಗಳಿದ್ದು ಬಿಜೆಪಿ ಈಗಾಗಲೇ ಕಾರ್ಯಪವೃತ್ತವಾಗಿದೆ. ಕಾಂಗ್ರೆಸ್, ಶಿವಸೇನೆ ಸೇರಿ ಅಜಿತ್ ಪವಾರ್ ಮೂಲಕ ಎನ್‍ಸಿಪಿ ಶಾಸಕರಿಗೆ ಕಲಮಪಡೆ ನಾಯಕರು ಗಾಳ ಹಾಕುತ್ತಿದ್ದಾರೆ. ಹೇಗಾದರೂ ಮಾಡಿ ಬಹುಮತ ತೋರಿಸಬೇಕು ಎಂದು ಬಿಜೆಪಿ ಹೆಣಗಾಡುತ್ತಿದೆ. ಈ ನಡುವೆ ಸೋಮವಾರ ತಡರಾತ್ರಿ ಫಡ್ನವಿಸ್-ಅಜಿತ್ ಪವಾರ್ ಮಹತ್ವದ ಸಭೆ ನಡೆಸಿದರು.

ಬಿಜೆಪಿಯ ರಣತಂತ್ರಗಳಿಗೆ ಚೆಕ್‍ಮೆಟ್ ಇಡಲು ಕರ್ನಾಟಕದ ಟ್ರಬಲ್ ಶೂಟರ್ ಡಿಕೆಶಿಯನ್ನು ಎಐಸಿಸಿ ರಂಗಕ್ಕೆ ಇಳಿಸಿದೆ. ನಿನ್ನೆ ತಡರಾತ್ರಿ ಡಿಕೆಶಿ ಮುಂಬೈಗೆ ಬಂದಿಳಿದಿದ್ದು, ಇಡೀ ರಾತ್ರಿ ಶಾಸಕರನ್ನು ರಕ್ಷಿಸುವ ಬಗ್ಗೆ ಮಹಾ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಇದನ್ನೂ ಓದಿ; ಭಾನುವಾರ ನಮಗೂ ರಜೆ ಆದರೂ ವಿಚಾರಣೆ ಮಾಡುತ್ತಿದ್ದೇವೆ – ಸುಪ್ರೀಂ ಕೋರ್ಟ್

MAHA 4

ಮತ್ತೊಂದೆಡೆ ರೆಸಾರ್ಟಿಗೆ ತೆರಳಿರುವ ಮುಖಂಡರು ಶಾಸಕರ ಜೊತೆಗೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಮತ್ತು ಶಾಸಕರನ್ನು ಒಟ್ಟಾಗಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆ, ಅಜಿತ್ ಪವಾರ್ ಬಿಜೆಪಿ ಜೊತೆ ಗುರುತಿಸಿಕೊಂಡಿಯೂ ತಾನಿನ್ನೂ ಎನ್‍ಸಿಪಿಯಲ್ಲೇ ಇದ್ದೇನೆ. ತಮ್ಮ ನಾಯಕ ಶರದ್ ಪವಾರ್, ನಾವು ಬಿಜೆಪಿ ಜೊತೆಗೂಡಿ ಸ್ಥಿರ ಸರ್ಕಾರ ನೀಡುತ್ತೇವೆ ಎಂದು ಟ್ವೀಟ್ ಮಾಡಿ ಗೊಂದಲ ಬೇರೆ ಸೃಷ್ಟಿಸಿದ್ದಾರೆ. ಆದರೆ ಶರದ್ ಪವಾರ್ ಇದನ್ನು ತಳ್ಳಿಹಾಕಿದ್ದು, ಬಿಜೆಪಿ ಜೊತೆ ಸೇರೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ಬಹುಮತ ಸಾಬೀತಿಗೆ ಸುಪ್ರೀಂಕೋರ್ಟ್ ಯಾವಾಗ ಸೂಚಿಸುತ್ತೋ ಅನ್ನೋ ಆತಂಕದಲ್ಲಿ ಬಿಜೆಪಿ ಇದ್ದರೆ ಮತ್ತೊಂದು ಕಡೆ ಶಾಸಕರನ್ನು ಉಳಿಸಿಕೊಂಡರೆ ಎಂದು ಶಿವಸೇನೆ ಕಾಂಗ್ರೆಸ್ ಎನ್ ಸಿಪಿ ತಂತ್ರಗಳನ್ನು ಮಾಡುತ್ತಿದೆ. ಇದೆಲ್ಲದರ ನಡುವೆ ಇಂದು ಸುಪ್ರೀಂಕೋರ್ಟ್ ನೀಡುವ ತೀರ್ಪು ಮಹತ್ವದಾಗಿದ್ದು ಏನು ಹೇಳುತ್ತೆ ಎಂದು ಕಾದು ನೋಡಬೇಕು. ಇದನ್ನೂ ಓದಿ: ಮಹಾರಾಷ್ಟ್ರದಿಂದಲೇ ಬಿಜೆಪಿಯ ಅಂತ್ಯ ಆರಂಭ: ಶಿವಸೇನೆ

TAGGED:governmentmaharastramumbaiPublic TVsupremecourtಪಬ್ಲಿಕ್ ಟಿವಿಮಹಾರಾಷ್ಟ್ರಮುಂಬೈಸರ್ಕಾರಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
29 minutes ago
Dinesh Gundu Rao 4
Bengaluru City

ರೋಗಿಗಳಿಗೆ ತೊಂದರೆ ಆಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ: ದಿನೇಶ್ ಗುಂಡೂರಾವ್

Public TV
By Public TV
33 minutes ago
Ranjitha
Chikkamagaluru

ಹೋಂ ಸ್ಟೇಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನಾಲ್ಕು ತಿಂಗಳ ಬಳಿಕ ಮಾಲೀಕನ ವಿರುದ್ಧ ಎಫ್‌ಐಆರ್‌

Public TV
By Public TV
35 minutes ago
Mohammad Siraj 1
Cricket

ಸೂಪರ್‌-8 ಗೂ ಮುನ್ನ ಟೀಂ ಇಂಡಿಯಾಕ್ಕೆ ಗಾಯದ ಚಿಂತೆ – ಪ್ರಾಕ್ಟೀಸ್‌ ವೇಳೆ ಪಾಂಡ್ಯ ಮಾಡಿದ್ದೇನು?

Public TV
By Public TV
38 minutes ago
snehamayi krishna
Bengaluru City

20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

Public TV
By Public TV
45 minutes ago
Satish Jarkiholi 1
Latest

ಹೈಕಮಾಂಡ್ ತಾರ್ಕಿಕ ನಿರ್ಧಾರಕ್ಕೆ ಬಂದಿದೆ, ಶೀಘ್ರ ನಿರ್ಧಾರ ಪ್ರಕಟಿಸಬಹುದು: ಸತೀಶ್ ಜಾರಕಿಹೊಳಿ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?