ಮಂಬೈ: ರಾಜೀನಾಮೆ ನೀಡಿ ಮಂಬೈ ಸೇರಿಕೊಂಡಿರುವ ಶಾಸಕರು ಪ್ರಸಿದ್ಧ ಸಿದ್ಧಿವಿನಾಯಕ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಇಂದು ಮುಂಬೈನ ರೆನೈಸಿನ್ ಹೋಟೆಲ್ನಿಂದ ಹೊರ ಬಂದ ರೆಬೆಲ್ ಶಾಸಕರಾದ ಬಿ.ಸಿ ಪಾಟೀಲ್, ಭೈರತಿ ಬಸವರಾಜ, ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರು ಸಂಕಷ್ಟ ನಿವಾರಿಸಲು ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.
ಮುಂಬೈನ ಬಾಂದ್ರದಲ್ಲಿರುವ ಸಿದ್ಧಿವಿನಾಯಕ ದರ್ಶನ ಪಡೆದ 4 ಶಾಸಕರು, ನಂತರ ಮುಂಬೈನ ದಾದರ್ ನಲ್ಲಿರುವ ಗೋವಾ ಪೋರ್ಚುಗೀಸ್ ಹೋಟೆಲಿನಲ್ಲಿ ಊಟ ಮುಗಿಸಿ ಮತ್ತೆ ರೆನೈಸಿನ್ ಕಡೆ ತೆರಳಿದರು.