ಬೀದಿ ಶ್ವಾನಗಳಿಗೆ ಆಹಾರ ನೀಡಿ ಮಾನವೀಯತೆ ಮರೆದ ಸಹೋದರಿಯರು

1 Min Read

ಮುಂಬೈ: ಕೊರೊನಾ ಎಫೆಕ್ಟ್ ನಿಂದ ಆಹಾರವಿಲ್ಲದೆ ಬಳಲುತ್ತಿದ್ದ ಬೀದಿ ನಾಯಿಗಳಿಗೆ ಊಟ ಹಾಕಿ ಮಹಾರಾಷ್ಟ್ರದ ನಾಗ್ಪುರದ ಸಹೋದರಿಯರು ಮಾನವೀಯತೆ ಮೆರೆದಿದ್ದಾರೆ.

ಕೊರೊನಾ ವೈರಸ್ ಭೀತಿಯಿಂದ ದೇಶವನ್ನು ಕಾಪಾಡಲು ಪ್ರಧಾನಿ ಮೋದಿ ಲಾಕ್‍ಡೌನ್ ಮಾಡಿದ್ದಾರೆ. ಇದರಿಂದ ದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಸಮಯದಲ್ಲಿ ಜನರಿಗೆ ತಿನ್ನಲು ಆಹಾರ ಸಿಗದೆ ಪರಾದಡುತ್ತಿದ್ದಾರೆ. ಇನ್ನೂ ಬೀದಿ ಶ್ವಾನಗಳು, ಪಕ್ಷಿಗಳು ಕೂಡ ಆಹಾರ ಸಿಗದೇ ಸಂಕಷ್ಟಕ್ಕೆ ಸಿಲುಕಿವೆ.

ಹೀಗೆ ಆಹಾರವಿಲ್ಲದೇ ಸಂಕಷ್ಟದಲ್ಲಿ ಸಿಲುಕಿರುವ ಶ್ವಾನಗಳಿಗೆ ಮಹಾರಾಷ್ಟ್ರದ ಸಹೋದರಿಯರಾದ ಕಾಜಲ್ ಮತ್ತು ದಿಶಾ ನಾಗ್ಪುರದಲ್ಲಿರುವ ಬೀದಿ ನಾಯಿಗಳಿಗೆ ತಮ್ಮ ಮನೆಯಿಂದ ಬಾಕ್ಸ್‍ಗಳಲ್ಲಿ ಊಟವನ್ನು ತೆಗೆದುಕೊಂಡು ಹೋಗಿ ನೀಡುತ್ತಿದ್ದಾರೆ. ತಮ್ಮ ಬಗ್ಗೆ ಮಾತ್ರ ಯೋಚಿಸುವ ಜನರ ಮಧ್ಯೆ ಬೀದಿಶ್ವಾನಗಳ ಕಷ್ಟವನ್ನು ಅರ್ಥ ಮಾಡಿಕೊಂಡ ಸಹೋದರಿಯರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ವಿಚಾರವಾಗಿ ಮಾತನಾಡಿರುವ ಸಹೋದರಿಯರು, ಲಾಕ್ ಡೌನ್ ಆಗಿರುವುರಿಂದ ಯಾವ ಜನರು ಹೊರಗೆ ಬರುತ್ತಿಲ್ಲ. ಹೀಗಾಗಿ ಬೀದಿಯಲ್ಲಿರುವ ಶ್ವಾನಗಳಿಗೆ ಆಹಾರ ಸಿಗುತ್ತಿಲ್ಲ. ನಾವು ನಮ್ಮ ಬಗ್ಗೆ ಮಾತ್ರ ಯೋಚನೆ ಮಾಡುತ್ತೇವೆ. ನಮಗಾಗಿ ಸರ್ಕಾರ ಊಟದ ವ್ಯವಸ್ಥೆ ಮಾಡುತ್ತದೆ. ಆದರೆ ಈ ಶ್ವಾನಗಳು ಹಸಿವಿನಿಂದ ಸಾಯಬೇಕಾ? ಕೇವಲ ನಮ್ಮ ಬಗ್ಗೆ ನಾವು ಯೋಚಿಸಿದರೆ ಸಾಲದು ಇವುಗಳ ಬಗ್ಗೆಯೂ ಯೋಚಿಸಬೇಕು ಎಂದು ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ರಾಜ್ಯದಲ್ಲಿ ದೊಡ್ಡ ಮಟ್ಟದ ಬಿಕ್ಕಟ್ಟನ್ನು ಎದುರುಸುತ್ತಿದ್ದೇವೆ. ಆದರೆ ಈ ಪ್ರಾಣಿಗಳು ಹಸಿವಿನಿಂದ ಸಾಯುವುದನ್ನು ಹೇಗೆ ನೋಡುವುದು. ಈ ರೀತಿಯ ಸಮಯದಲ್ಲಿ ನಾವು ಅವುಗಳನ್ನು ಹಸಿವಿನಿಂದ ಸಾಯಲು ಬಿಡಬಾರದು. ಕಷ್ಟದ ಪರಿಸ್ಥಿತಿಯಲ್ಲಿ ಅವುಗಳಿಗೆ ಆಹಾರ ನೀಡುವುದು ಮತ್ತು ಅವುಗಳನ್ನು ಪೋಷಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಕಾಜಲ್ ಮತ್ತು ದಿಶಾ ತಿಳಿಸಿದ್ದಾರೆ.

ಕೊರೊನಾ ವೈರಸ್ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕಾರಣ ಪ್ರಧಾನಿ ಮೋದಿ ಅವರು ದೇಶವನ್ನು ಏಪ್ರಿಲ್ 14ರವರಗೆ ಲಾಕ್‍ಡೌನ್ ಮಾಡಿದ್ದಾರೆ. ಕೊರೊನಾ ವೈರಸ್ ಸೋಂಕಿನಿಂದ ಭಾರತದಲ್ಲಿ ಇಲ್ಲಿಯವರಗೆ 20 ಜನ ಸಾವನ್ನಪ್ಪಿದ್ದಾರೆ. ಭಾರತದಲ್ಲಿ 761 ಜನರಿಗೆ ಈ ವೈರಸ್ ತಗುಲಿದೆ.

Share This Article
Leave a Comment

Leave a Reply

Your email address will not be published. Required fields are marked *