ಚಿಕ್ಕಬಳ್ಳಾಪುರ: ರಾಜ್ಯದಲ್ಲಡೆ ಬರಗಾಲ ತಾಂಡವವಾಡುತ್ತಿದೆ. ಚಿಕ್ಕಬಳ್ಳಾಪುರದಲ್ಲೂ ಬರ ಎದರಾಗಿದೆ. ಆದರೆ ಚಿಕ್ಕಬಳ್ಳಾಪುರ ನಗರಸಭೆಗೆ ಮಾತ್ರ ಬರ ಬಂದಿಲ್ಲ.
ನಗರಸಭೆಯ ಬಜೆಟ್ ಮೀಟಿಂಗ್ ಬಳಿಕ ಎಲ್ಲಾ ಸದಸ್ಯರಿಗೂ ಹಾಗೂ ಸಿಬ್ಬಂದಿಗೆ ಬಾಡೂಟ ಆಯೋಜನೆ ಮಾಡಲಾಗಿದೆ. ನಗರಸಭೆ ಆವರಣದಲ್ಲಿ ಖಾದ್ಯಗಳನ್ನು ತಯಾರಿ ಮಾಡಿ ಭರ್ಜರಿ ಬಾಡೂಟ ಹಾಕಿಸಿದ್ದಾರೆ.
ಚಿಕನ್ ಫ್ರೈ, ಮಟನ್ ಬಿರಿಯಾನಿ, ಫಿಶ್, ಕಬಾಬ್ ಸೇರಿದಂತೆ ವಿವಿಧ ಖಾದ್ಯಗಳನ್ನು ಮಾಡಲಾಗಿದೆ. ಈಗಾಗಲೇ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ಸಮಸ್ಯೆಗಳಿದರೂ ನಗರಸಭೆಯಲ್ಲಿ ಬಾಡೂಟ ಆಯೋಜನೆ ಮಾಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಈ ಬಗ್ಗೆ ನಗರಸಭೆಯವರನ್ನು ಕೇಳಿದರೆ ಎಂದಿನಂತೆ ಇಂದು ಕೂಡ ಊಟ ಆಯೋಜನೆ ಮಾಡಿದ್ದೇವೆ ಎನ್ನುವ ಉತ್ತರ ಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv