ಹುಬ್ಬಳ್ಳಿ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಜನರಿಗೆ ಸಿನಿಮಾ ತೋರಿಸುತ್ತಿದ್ದು, ಆ ಸಿನಿಮಾದಲ್ಲಿ ಯಾರು ಹೀರೋ ಎಂಬುದು ಅವರಿಗೆ ಗೊತ್ತಿಲ್ಲ. ಆದರೆ ಸಿನಿಮಾದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪ ಅವರನ್ನು ವಿಲನ್ ಆಗಿ ಬಿಂಬಿಸುತ್ತಿದ್ದಾರೆ ಎಂದು ಬಿಜೆಪಿ ವರಿಷ್ಠ ಮುರಳೀಧರ್ ರಾವ್ ಸಮ್ಮಿಶ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಪಕ್ಷದ ಸಮಾವೇಶ ಉದ್ದೇಶಿಸಿದ ಮಾತನಾಡಿದ ಅವರು, ರಾಜ್ಯದಲ್ಲಿ ಮಾಡಿಕೊಂಡಿರುವ ಬಂಧನ್ ಹೆಚ್ಚು ಕಾಲ ಉಳಿಯುವುದಿಲ್ಲ. ಇನ್ನು ದೇಶದಲ್ಲಿ ನಿರ್ಮಾಣ ಆಗಿರುವ ಘಟಬಂಧನ್ ಉಳಿಯುತ್ತಾ? 2014ರ ಪಕ್ಷ ಗೆದ್ದಿರುವ ಒಂದು ಸ್ಥಾನವೂ ಕಡಿಮೆ ಆಗದೆ, ಅದಕ್ಕಿಂತ ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ಅಲ್ಲದೇ ದೇಶದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದರೆ ರಾಹುಲ್ ಇದಕ್ಕೆಲ್ಲಾ ಅಡ್ಡಗಾಲು ಹಾಕುತ್ತಿದ್ದಾರೆ. ದೇಶದ ಅಲ್ಪ ಸಂಖ್ಯಾತರ ಅಭಿವೃದ್ಧಿ ಆಗುವುದು ಕಾಂಗ್ರೆಸ್ಗೆ ಬೇಡವಾಗಿದ್ದು, ಮತಗಳು ಮಾತ್ರ ಬೇಕು. ರಾಜ್ಯದಲ್ಲಿ ಜನರ ಆಶೀರ್ವಾದ ಇಲ್ಲದೇ ಇದ್ದರೂ ಕೂಡ ಅಧಿಕಾರಕ್ಕಾಗಿ ಮೈತ್ರಿ ನಡೆಸಿದ್ದಾರೆ. ಆದರೆ ಬಿಜೆಪಿ ದೂರ ಇಡಲು ಮೈತ್ರಿ ಮಾಡಿಕೊಂಡಿದ್ದಾಗಿ ಸುಳ್ಳು ಹೇಳುತ್ತಾರೆ ಟೀಕೆ ಮಾಡಿದರು.
ಇದೇ ವೇಳೆ ರಾಜ್ಯ ಸರ್ಕಾರ ಜನರಿಗೆ ದಿನಕ್ಕೊಂದು ಜಗಳ ನಡೆಸುವ ಮೂಲಕ ದಿನಕ್ಕೊಂದು ಸಿನಿಮಾ ತೋರಿಸುತ್ತಿದೆ. ಆದರೆ ಇದಕ್ಕೆಲ್ಲಾ ಕಾರಣ ಬಿಎಸ್ವೈ ಕಾರಣ ಎಂದೇ ಹೇಳುತ್ತಿದ್ದಾರೆ. ಹೋಟೆಲ್ ನಲ್ಲಿ ಶಾಸಕರು ಬಡಿದಾಡಿಕೊಂಡರು ಕೂಡ ಅವರೇ ಕಾರಣ ಎನ್ನುತ್ತಾರೆ. ಭ್ರಷ್ಟಚಾರದಲ್ಲಿ ತೊಡಗಿರುವ ಸರ್ಕಾರ ಬಿಎಸ್ವೈ ಅವರ ಮೇಲೆ ಏಕೆ ಆರೋಪ ಮಾಡುತ್ತಾರೆ ಎಂದು ಆರ್ಥ ಆಗುತ್ತಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿದರು. ಅಲ್ಲದೇ ದೇಶದಲ್ಲಿ ಮೋದಿ ಅವರ ಕಾರ್ಯಗಳು ಜನರಿಗೆ ಇಷ್ಟವಾಗಿದ್ದು, ಇದಕ್ಕೆ ಇಲ್ಲಿ ಹಾಜರಾಗಿರುವ ಲಕ್ಷ ಲಕ್ಷ ಜನರೇ ಕಾರಣ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv