ಹತ್ಯೆ ಕೇಸ್- ಅಮಾನತುಗೊಂಡ ಬಿಜೆಪಿ ನಾಯಕನ ಅಕ್ರಮ ಹೋಟೆಲ್ ನೆಲಸಮ

Public TV
2 Min Read
Mishri Chand Gupta Madhya Pradesh Jagdish Yadav

ಭೋಪಾಲ್: ಜಗದೀಶ್ ಯಾದವ್ (Jagdish Yadav) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಆಕ್ರೋಶದ ನಡುವೆಯೇ ಅಮಾನತುಗೊಂಡ ಮಧ್ಯ ಪ್ರದೇಶದ ಭಾರತೀಯ ಜನತಾ ಪಕ್ಷದ (BJP) ಮುಖಂಡ ಮಿಶ್ರಿ ಚಂದ್ ಗುಪ್ತಾ (Mishri Chand Gupta) ಅವರ ಅಕ್ರಮ ಹೋಟೆಲ್ (Hotel) ಅನ್ನು ಜಿಲ್ಲಾಡಳಿತ ಮಂಗಳವಾರ ನೆಲಸಮಗೊಳಿಸಿದೆ (Demolish).

ಸಾಗರದಲ್ಲಿರುವ ಗುಪ್ತಾ ಅವರ ಅಕ್ರಮ ಹೋಟೆಲ್ ಅನ್ನು ನೆಲಸಮಗೊಳಿಸಲಾಗಿದೆ. ಇಂದೋರ್‌ನ ವಿಶೇಷ ತಂಡ ಮಂಗಳವಾರ ರಾತ್ರಿ ಸುಮಾರು 60 ಡೈನಮೈಟ್‌ಗಳನ್ನು ಸ್ಫೋಟಿಸಿ ಹೋಟೆಲ್ ಅನ್ನು ಕೆಡವಿದೆ. ಕೆಲವೇ ಸೆಕೆಂಡುಗಳಲ್ಲಿ ಹೋಟೆಲ್ ನೆಲಸಮವಾಗಿದೆ.

ಘಟನೆ ಏನು?: ಡಿಸೆಂಬರ್ 22 ರಂದು ಕೋರೆಗಾಂವ್ ನಿವಾಸಿ ಜಗದೀಶ್ ಯಾದವ್ ಅವರ ಮೇಲೆ ಎಸ್‌ಯುವಿ ಹರಿದು ಮೃತಪಟ್ಟಿದ್ದರು. ಯಾದವ್ ಹತ್ಯೆ ನಡೆಸಿರುವ ಆರೋಪ ಬಿಜೆಪಿ ಮುಖಂಡ ಹಾಗೂ ಅವರ ಕುಟುಂಬದ ಸದಸ್ಯರ ಮೇಲಿತ್ತು. ಇದರಿಂದ ಸಾರ್ವಜನಿಕರು ಗುಪ್ತಾ ವಿರುದ್ಧ ಆಕ್ರೋಶ ಹೊರಹಾಕಿದ್ದು, ಈ ನಡುವೆ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಯಿತು.‌ ಇದನ್ನೂ ಓದಿ: ಮಿಕ್ಸಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್- ಪ್ರೀತಿ ನಿರಾಕರಿಸಿದ್ರಿಂದ ಕೊಲೆಗೆ ನಿರ್ಧರಿಸಿದ್ದೆ ಎಂದ ಆರೋಪಿ

ಘಟನೆಗೆ ಸಂಬಂಧಿಸಿದಂತೆ 8 ಆರೋಪಿಗಳ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಐವರನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಚಂದ್ ಗುಪ್ತಾ ಇನ್ನೂ ಕಾಣೆಯಾಗಿದ್ದಾರೆ.

Mishri Chand Gupta hotel Madhya Pradesh

ಜಗದೀಶ್ ಯಾದವ್ ಸ್ವತಂತ್ರ ಕೌನ್ಸಿಲರ್ ಕಿರಣ್ ಯಾದವ್ ಅವರ ಸೋದರಳಿಯ ಆಗಿದ್ದಾರೆ. ನಾಗರಿಕ ಸಂಸ್ಥೆ ಚುನಾವಣೆಯಲ್ಲಿ ಕಿರಣ್ ಯಾದವ್ ಅವರು ಮಿಶ್ರಿ ಚಂದ್ ಗುಪ್ತಾ ಅವರ ಪತ್ನಿ ಮೀನಾ ಅವರನ್ನು 83 ಮತಗಳಿಂದ ಸೋಲಿಸಿದ್ದರು. ಈ ವೈಷಮ್ಯದಲ್ಲಿ ಜಗದೀಶ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದೀಗ ಗುಪ್ತಾ ಅವರ ಅಕ್ರಮ ಹೋಟೆಲ್ ಅನ್ನು ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ನೆಲಸಮಗೊಳಿಸಲಾಗಿದೆ. ಸಾಗರ್ ಜಿಲ್ಲಾಧಿಕಾರಿ ದೀಪಕ್ ಆರ್ಯ, ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (DIG) ತರುಣ್ ನಾಯಕ್ ಮತ್ತು ಇತರ ಹಿರಿಯ ಅಧಿಕಾರಿಗಳು ನೆಲಸಮ ಸಂದರ್ಭದಲ್ಲಿ ಹಾಜರಿದ್ದರು. ಇದನ್ನೂ ಓದಿ: ತ್ರಿಪುರಾದ ಮಾಜಿ ಸಿಎಂ ಪೂರ್ವಜರ ಮನೆಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *