ಚಿಕ್ಕೋಡಿ: ಉಡುಪಿಯಲ್ಲಿ (Udupi) ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ-ಬೆಳಗಾವಿ ಪೊಲೀಸರು ಮಿಂಚಿನ ಕಾರ್ಯಚರಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ
ಬೆಳಗಾವಿ (Belagavi) ರಾಯಭಾಗ ತಾಲೂಕಿನ ಕುಡಚಿಯಲ್ಲಿ (Kudachi) ಆರೋಪಿ ಪ್ರವೀಣ್ ಅರುಣ್ ಚೌಗಲೇಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರವೀಣ್ ಮೂಲತಃ ಮಹಾರಾಷ್ಟ್ರದ (Maharashtra) ಸಾಂಗ್ಲಿಯವನಾಗಿದ್ದು, ಭಾನುವಾರ ಘಟನೆಯ ಬಳಿಕ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿ ಸಂಬಂಧಿ ಮನೆಯಲ್ಲಿ ತಲೆಮರೆಸಿಕೊಂಡಿದ್ದ. ಇಂದು ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಲು ಮುಂದಾಗಿದ್ದ ವೇಳೆ ಕುಡಚಿ ಪೊಲೀಸರ ಸಹಾಯದಿಂದ ಮಿಂಚಿನ ಕಾರ್ಯಚರಣೆ ನಡೆಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರವೀಣ್ ಮಂಗಳೂರಿನ (Mangaluru) ವಿಮಾನ ನಿಲ್ದಾಣದ ಸಿಆರ್ಪಿಎಸ್ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ – ಒಬ್ಬಳ ಮೇಲಿನ ದ್ವೇಷಕ್ಕೆ ನಾಲ್ವರು ಬಲಿ!
ಭಾನುವಾರ ಮುಂಜಾನೆ ವ್ಯಕ್ತಿಯೊಬ್ಬ ಉಡುಪಿಯ ನೇಜಾರು ಎಂಬಲ್ಲಿ ಒಂದೇ ಕುಟುಂಬದವರಾದ ತಾಯಿ ಹಸೀನಾ (46), ಮಕ್ಕಳಾದ ಅಫ್ನಾನ್ (23), ಅಯ್ನಝ್ (21), ಆಸಿಂ (12) ಎಂಬವರನ್ನು ಕೊಲೆಗೈದಿದ್ದ. ಹರಿತವಾದ ಆಯುಧಗಳಿಂದ ಇರಿದು ನಾಲ್ವರನ್ನು ಕೊಲೆ ಮಾಡಿದ ಈತ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ!
ಇದನ್ನೂ ಓದಿ: ಪಟಾಕಿ ಕಿಡಿಯಿಂದ ಹೊತ್ತಿ ಉರಿದ ಗುಜರಿ ಅಂಗಡಿ
ಇದಾದ ಬಳಿಕ ಗಲಾಟೆ ಸದ್ದು ಕೇಳಿ ಪಕ್ಕದ ಮನೆಯ ಯುವತಿ ತನ್ನ ಮನೆಯಿಂದ ಹೊರ ಬಂದಿದ್ದಾಳೆ. ಆಕೆಯನ್ನೂ ಬೆದರಿಸಿ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಮನೆಯೊಳಗಿದ್ದ ಹಸೀನಾ ಅತ್ತೆಗೂ ತೀವ್ರವಾದ ಗಾಯಗಳಾಗಿವೆ. ಹಸೀನಾ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅವರ ಅನುಪಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದೆ. ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪ್ರವೀಣ್ನನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಬೆಂಕಿ ಹಚ್ಚಿ ಲ್ಯಾಬ್ ಟೆಕ್ನಿಷಿಯನ್ ಹತ್ಯೆ ಪ್ರಕರಣ – ಇಬ್ಬರ ಬಂಧನ