ಸುತ್ತಿಗೆಯಿಂದ ಹೊಡೆದು ವೃದ್ಧ ದಂಪತಿಯ ಬರ್ಬರ ಹತ್ಯೆ

Public TV
1 Min Read
elderly couple

ರಾಮನಗರ: ಹಣಕ್ಕಾಗಿ ವೃದ್ಧ ದಂಪತಿಗಳಿಬ್ಬರನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ ಬಳಿ ನಡೆದಿದೆ.

ಆಶಾ (63) ಹಾಗೂ ರಘುರಾಜ್ (70) ಮೃತ ದಂಪತಿ. ರಘುರಾಜ್ ಮಾಜಿ ಏರ್ ಫೋರ್ಸ್ ಪೈಲಟ್ ಆಗಿದ್ದು, ಈಗಲ್ ಟನ್ ರೆಸಾರ್ಟ್‍ನ ಮಾಲೀಕರಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಅಲ್ಲೇ ವಾಸವಿದ್ದ ದಂಪತಿಯನ್ನು ಹಣಕ್ಕಾಗಿ ಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದೆ. ಮನೆಯ ಎರಡು ಪ್ರತ್ಯೇಕ ಕೋಣೆಗಳಲ್ಲಿ ಇಬ್ಬರ ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ಪರೀಕ್ಷೆ ದಿನ 5ನೇ ಅಂತಸ್ತಿನ ಮಹಡಿ ಮೇಲಿಂದ ಬಿದ್ದು ವಿದ್ಯಾರ್ಥಿ ಸಾವು

POLICE JEEP

ಘಟನೆಯ ಬಳಿಕ ಮನೆಯ ಸೆಕ್ಯೂರಿಟಿ ಗಾರ್ಡ್ ಪರಾರಿಯಾಗಿದ್ದಾನೆ. ಮನೆಯಲ್ಲಿ ಕೆಲಸಕ್ಕಿದ್ದವರೇ ದಂಪತಿಯ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ರಾಮನಗರ ಎಸ್ಪಿ ಸಂತೋಷ್ ಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಒಂದು ಕಡೆ ಹಿಜಬ್ ಕಿಡಿ ಇನ್ನೊಂದೆಡೆ ಕೇಸರಿ, ನೀಲಿ ಶಾಲು ಸಂಘರ್ಷ!

Share This Article
Leave a Comment

Leave a Reply

Your email address will not be published. Required fields are marked *