ಮೈಸೂರು: ಚಾಕುವಿನಿಂದ ಇರಿದು ಯುವಕನ ಹತ್ಯೆಗೈದಿರುವ ಘಟನೆ ಮೈಸೂರಿನ (Mysuru) ವಿದ್ಯಾನಗರ (Vidyanagar) ಬಡಾವಣೆಯ 4ನೇ ಕ್ರಾಸ್ನಲ್ಲಿ ನಡೆದಿದೆ.
ಮೈಸೂರಿನ ವಿದ್ಯಾನಗರ ನಿವಾಸಿ ಬಾಲರಾಜ್ (26) ಕೊಲೆಯಾದ ಯುವಕ. ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ನಾಲ್ವರಿಂದ ಕೃತ್ಯ ನಡೆದಿರುವುದಾಗಿ ಆರೋಪಿಸಲಾಗಿದ್ದು, ಕೊಲೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಹಾವೇರಿಯಲ್ಲಿ ಮಕ್ಕಳ ಬಿಸಿಯೂಟಕ್ಕೆ ರೇಷನ್ ವ್ಯತ್ಯಯ – ಸ್ವಂತ ಹಣ ಬಳಸಿ ಶಿಕ್ಷಕರಿಂದ ರೇಷನ್ ಖರೀದಿ
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ತೇಜಸ್, ಸಂಜಯ್, ಕಿರಣ್ ಹಾಗೂ ಸಾಮ್ರಾಟ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಗ್ರಾ.ಪಂ. ಅಧಿಕಾರ ಅನುಭವಿಸಿದ ಮಹಿಳೆಗೆ 7 ವರ್ಷ ಜೈಲು
Web Stories